‘ನಾಲ್ಕು ವರ್ಷಗಳ ಹಿಂದೆ ಬಿಬಿಎಂಪಿ ಸಿಬ್ಬಂದಿ, ಮೋರಿ ಕಾಮಗಾರಿ ನಡೆಸಿ ಮೇಲ್ಭಾಗದಲ್ಲಿ ಕಲ್ಲು ಹಾಕಿದ್ದರು. ಅದೇ ಸಂದರ್ಭದಲ್ಲೇ ವ್ಯಕ್ತಿಯ ಮೃತದೇಹವನ್ನು ಮೋರಿಯಲ್ಲಿ ಹಾಕಿರುವ ಅನುಮಾನವಿದೆ. ಜೊತೆಗೆ, ಮಳೆಗಾಲದಲ್ಲಿ ನೀರಿನೊಂದಿಗೆ ತೇಲಿಕೊಂಡು ಬಂದು ಮೃತದೇಹ ಮೋರಿಯಲ್ಲಿ ಸಿಲುಕಿಕೊಂಡಿರುವ ಸಾಧ್ಯತೆಯೂ ಇದೆ. ಎಲ್ಲ ಆಯಾಮದಲ್ಲಿ ತನಿಖೆ ನಡೆಸಲಾಗುತ್ತಿದೆ. ಇದು ಕೊಲೆಯೋ ಅಥವಾ ಬೇರೆ ಏನಾದರೂ ಆಗಿದೆಯೋ ಎಂಬುದು ತನಿಖೆಯಿಂದ ಗೊತ್ತಾಗಬೇಕಿದೆ’ ಎಂದೂ ಮೂಲಗಳು ತಿಳಿಸಿವೆ.