ಭಾರತೀಯ ದಂಡ ಸಂಹಿತೆ-188ನೇ ಪ್ರಕರಣಗಳಡಿ ಕ್ರಿಮಿನಲ್ ಮೊಕದ್ದಮೆ ಮತ್ತು ಕರ್ನಾಟಕ ಶಿಕ್ಷಣ ಕಾಯ್ದೆ-1995ರಡಿ ಶಾಲೆಯ ಮಾನ್ಯತೆ ಹಾಗೂ ಕೇಂದ್ರ ಪಠ್ಯಕ್ರಮ ಸಂಯೋಜನೆಗೆ ರಾಜ್ಯ ಸರ್ಕಾರದ ನಿರಪೇಕ್ಷಣಾ ಪತ್ರವನ್ನು ಹಿಂಪಡೆಯಲು ಏಕೆ ಶಿಫಾರಸು ಮಾಡಬಾರದು ಎಂಬುದಕ್ಕೆ ಕಾರಣ ಕೇಳಿ ಈ ನೋಟಿಸ್ ಜಾರಿ ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ. ವಿದ್ಯಾರ್ಥಿಯ ಮನೆಗೆ ಗುರುವಾರ ಭೇಟಿ ನೀಡಿದ ಅವರು, ವಿದ್ಯಾರ್ಥಿ ಮತ್ತು ಪೋಷಕರಿಗೆ ಧೈರ್ಯ ಹೇಳಿದರು.