ಜೆಪಿ ನಗರ ಬಡಾವಣೆಯ 9 ನೇ ಹಂತದ ನಿರ್ಮಾಣಕ್ಕೆಂದು 1988 ರಲ್ಲಿ ಈ ಜಾಗ ಸ್ವಾಧೀನಪಡಿಸಿಕೊಳ್ಳಲು ಬಿಡಿಎ ಪ್ರಾಥಮಿಕ ಅಧಿಸೂಚನೆ ಹೊರಡಿಸಿತ್ತು. 1997 ರಲ್ಲಿ ಅಂತಿಮ ಅಧಿಸೂಚನೆಯನ್ನು ಹೊರಡಿಸಿ ಜಾಗವನ್ನು ಸ್ವಾಧೀನಕ್ಕೆ ಪಡೆದಿತ್ತು. ಕೆಲವರು ತಾತ್ಕಾಲಿಕವಾಗಿ 40 ಶೆಡ್ ಗಳನ್ನು ನಿರ್ಮಾಣ ಮಾಡಿ ಜಾಗ ತಮ್ಮದೆಂದು ಪ್ರತಿಪಾದಿಸಿದ್ದರು. ಈ ಕುರಿತ ವ್ಯಾಜ್ಯದಲ್ಲಿ ನ್ಯಾಯಾಲಯವು ಬಿಡಿಎ ಪರವಾಗಿ ತೀರ್ಪು ನೀಡಿದೆ. ಈ ಜಾಗವನ್ನು ಮತ್ತೆ ಸುಪರ್ದಿಗೆ ಪಡೆಯುವಂತೆಯೂ ಇತ್ತೀಚೆಗೆ ಆದೇಶ ಮಾಡಿತ್ತು.
ನ್ಯಾಯಾಲಯದ ಆದೇಶದ ಮೇರೆಗೆ ಬಿಡಿಎ ಅಧಿಕಾರಿಗಳು, ಪೊಲೀಸ್ ವರಿಷ್ಠಾಧಿಕಾರಿ ಭಾಸ್ಕರ್, ಡಿವೈಎಸ್ ಪಿ ರವಿಕುಮಾರ್ ಸೇರಿದಂತೆ 75 ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯ ಭದ್ರತೆಯಲ್ಲಿ ಶೆಡ್ ಗಳನ್ನುತೆರವುಗೊಳಿಸಿದರು.