‘ರಾಕ್ಷಸ ಆರ್ಥಿಕತೆಯಿಂದ ಪರಿಸರ ನಾಶವಾಗುತ್ತಿದೆ. ಪರಿಸ್ಥಿತಿ ಹೀಗೆ ಮುಂದುವರಿದರೆ ಮುಂದಿನ 14 ವರ್ಷಗಳಲ್ಲಿ ಅಪಾಯಕಾರಿ ವಾತಾವರಣ ನಿರ್ಮಾಣವಾಗಲಿದೆ ಎಂದು ವಿಜ್ಞಾನಿಗಳು ತಿಳಿಸಿದ್ದಾರೆ. ಇನ್ನೊಂದೆಡೆ, ಕೈಗಾರಿಕೆ ಸೇರಿದಂತೆ ವಿವಿಧ ಕ್ಷೇತ್ರಗಳು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದು, ಪ್ರತಿನಿತ್ಯ3 ಲಕ್ಷ ಕಾರ್ಮಿಕರು ದೇಶದಲ್ಲಿ ಬೀದಿಗೆ ಬೀಳುತ್ತಿದ್ದಾರೆ. ಇದರಿಂದಕರಕುಶಲ ನೌಕರರು, ಗಾರ್ಮೆಂಟ್ಸ್ ನೌಕರರು, ಪೌರಕಾರ್ಮಿಕರು, ಸಣ್ಣ ಉದ್ಯಮಿಗಳು, ಬೀದಿಬದಿ ವ್ಯಾಪಾರಿಗಳು, ಅಂಗನವಾಡಿ ನೌಕರರಿಗೆ ದಿಕ್ಕು ತೋಚದಂತಾಗಿದೆ’ ಎಂದು ತಿಳಿಸಿದರು.