<p><strong>ಬೆಂಗಳೂರು</strong>: ರಸ್ತೆ ಗುಂಡಿಯಿಂದ ದ್ವಿಚಕ್ರ ವಾಹನದಿಂದ ಬಿದ್ದ ಪತಿಯ ಸ್ಥಿತಿ ಕಂಡ ಮಹಿಳೆಯೊಬ್ಬರು ಕಲ್ಲು ಮಣ್ಣಿನಿಂದ ಆ ಗುಂಡಿಯನ್ನು ಮುಚ್ಚಿದ್ದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಇದಕ್ಕೆ ಹಲವರು ಸಹಮತ ವ್ಯಕ್ತಪಡಿಸಿದ್ದು, ರಸ್ತೆ ಗುಂಡಿ ಮುಚ್ಚದ ಬಿಬಿಎಂಪಿ ವಿರುದ್ಧ ಅಸಮಾಧಾನ<br />ವ್ಯಕ್ತಪಡಿಸಿದ್ದಾರೆ.</p>.<p>ಸಾಮಾಜಿಕ ತಾಣ ಫೇಸ್ಬುಕ್ನಲ್ಲಿ ನಾಗಮಣಿ ಬರೆದುಕೊಂಡಿರುವ ವಿವರ ಹೀಗಿದೆ...</p>.<p>‘ಗುರುವಾರ ಬೆಳಿಗ್ಗೆ ಮಲ್ಲೇಶ್ವರ 75 ಬಸ್ ಸ್ಟ್ಯಾಂಡ್, 18ನೇ ಕ್ರಾಸ್ನಲ್ಲಿ ರಸ್ತೆ ಗುಂಡಿಯಿಂದ ನನ್ನ ಗಂಡ ಆಕ್ಟಿವಾದಲ್ಲಿ ಬರುವಾಗ ಪ್ರಾಣಾಪಾಯದಿಂದ ಕೂದಲೆಳೆಯಲ್ಲಿ ಬಚಾವಾದರು. ಹಾಗಾಗಿ ಆ ಗುಂಡಿಯನ್ನು ಈಗ ಹೋಗಿ ಕಲ್ಲು ಮಣ್ಣಿನಿಂದ ಗುಂಡಿಯನ್ನು ಮುಚ್ಚಿ ಬಂದೆವು. ಮಲ್ಲೇಶ್ವರದ ಅವ್ಯವಸ್ಥೆಯನ್ನು ಇನ್ನಾದರೂ ಸರಿಮಾಡಲು ಸಾರ್ವಜನಿಕರು ಒತ್ತಾಯ ಮಾಡಿ’<br />– ಎಂ.ನಾಗಮಣಿ.</p>.<p>ಈ ವಿಡಿಯೊವನ್ನು ಗುರುವಾರ ರಾತ್ರಿಯವರೆಗೆ 50 ಸಾವಿರಕ್ಕೂ ಹೆಚ್ಚು ಮಂದಿ ಫೇಸ್ಬುಕ್ನಲ್ಲಿ ವೀಕ್ಷಿಸಿದ್ದು, ಅನೇಕರು ರಸ್ತೆಗುಂಡಿಗಳಿಂದ ಆಗುತ್ತಿರುವ ಅನಾಹುತದ ಕುರಿತು ಪ್ರತಿಕ್ರಿಯೆ<br />ಬರೆದಿದ್ದಾರೆ.</p>.<p>‘ಮಲ್ಲೇಶ್ವರ 18 ಅಡ್ಡರಸ್ತೆ ಮಾತ್ರವಲ್ಲ, ಮಲ್ಲೇಶ್ವರದಾದ್ಯಂತ ನಮಗೆ ರಸ್ತೆ ಗುಂಡಿಗಳ ಬಗ್ಗೆ ದೂರುಗಳು ಬಂದಿವೆ. ಮಳೆಯಿಂದಾಗಿ ರಸ್ತೆಯ ಗುಂಡಿಗಳನ್ನು ಮುಚ್ಚಲಾಗಿಲ್ಲ. ಮಳೆದ ನಿಂತ ಒಂದೆರಡು ದಿನಗಳಲ್ಲಿ ಎಲ್ಲ ಗುಂಡಿಗಳನ್ನೂ ಮುಚ್ಚಲಾಗುತ್ತದೆ’ ಎಂದು ರಸ್ತೆ ಮೂಲಸೌಕರ್ಯ ವಿಭಾಗದ ಕಿರಿಯ ಎಂಜಿನಿಯರ್ ಜಯಂತ್ ಕುಮಾರ್<br />ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ರಸ್ತೆ ಗುಂಡಿಯಿಂದ ದ್ವಿಚಕ್ರ ವಾಹನದಿಂದ ಬಿದ್ದ ಪತಿಯ ಸ್ಥಿತಿ ಕಂಡ ಮಹಿಳೆಯೊಬ್ಬರು ಕಲ್ಲು ಮಣ್ಣಿನಿಂದ ಆ ಗುಂಡಿಯನ್ನು ಮುಚ್ಚಿದ್ದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಇದಕ್ಕೆ ಹಲವರು ಸಹಮತ ವ್ಯಕ್ತಪಡಿಸಿದ್ದು, ರಸ್ತೆ ಗುಂಡಿ ಮುಚ್ಚದ ಬಿಬಿಎಂಪಿ ವಿರುದ್ಧ ಅಸಮಾಧಾನ<br />ವ್ಯಕ್ತಪಡಿಸಿದ್ದಾರೆ.</p>.<p>ಸಾಮಾಜಿಕ ತಾಣ ಫೇಸ್ಬುಕ್ನಲ್ಲಿ ನಾಗಮಣಿ ಬರೆದುಕೊಂಡಿರುವ ವಿವರ ಹೀಗಿದೆ...</p>.<p>‘ಗುರುವಾರ ಬೆಳಿಗ್ಗೆ ಮಲ್ಲೇಶ್ವರ 75 ಬಸ್ ಸ್ಟ್ಯಾಂಡ್, 18ನೇ ಕ್ರಾಸ್ನಲ್ಲಿ ರಸ್ತೆ ಗುಂಡಿಯಿಂದ ನನ್ನ ಗಂಡ ಆಕ್ಟಿವಾದಲ್ಲಿ ಬರುವಾಗ ಪ್ರಾಣಾಪಾಯದಿಂದ ಕೂದಲೆಳೆಯಲ್ಲಿ ಬಚಾವಾದರು. ಹಾಗಾಗಿ ಆ ಗುಂಡಿಯನ್ನು ಈಗ ಹೋಗಿ ಕಲ್ಲು ಮಣ್ಣಿನಿಂದ ಗುಂಡಿಯನ್ನು ಮುಚ್ಚಿ ಬಂದೆವು. ಮಲ್ಲೇಶ್ವರದ ಅವ್ಯವಸ್ಥೆಯನ್ನು ಇನ್ನಾದರೂ ಸರಿಮಾಡಲು ಸಾರ್ವಜನಿಕರು ಒತ್ತಾಯ ಮಾಡಿ’<br />– ಎಂ.ನಾಗಮಣಿ.</p>.<p>ಈ ವಿಡಿಯೊವನ್ನು ಗುರುವಾರ ರಾತ್ರಿಯವರೆಗೆ 50 ಸಾವಿರಕ್ಕೂ ಹೆಚ್ಚು ಮಂದಿ ಫೇಸ್ಬುಕ್ನಲ್ಲಿ ವೀಕ್ಷಿಸಿದ್ದು, ಅನೇಕರು ರಸ್ತೆಗುಂಡಿಗಳಿಂದ ಆಗುತ್ತಿರುವ ಅನಾಹುತದ ಕುರಿತು ಪ್ರತಿಕ್ರಿಯೆ<br />ಬರೆದಿದ್ದಾರೆ.</p>.<p>‘ಮಲ್ಲೇಶ್ವರ 18 ಅಡ್ಡರಸ್ತೆ ಮಾತ್ರವಲ್ಲ, ಮಲ್ಲೇಶ್ವರದಾದ್ಯಂತ ನಮಗೆ ರಸ್ತೆ ಗುಂಡಿಗಳ ಬಗ್ಗೆ ದೂರುಗಳು ಬಂದಿವೆ. ಮಳೆಯಿಂದಾಗಿ ರಸ್ತೆಯ ಗುಂಡಿಗಳನ್ನು ಮುಚ್ಚಲಾಗಿಲ್ಲ. ಮಳೆದ ನಿಂತ ಒಂದೆರಡು ದಿನಗಳಲ್ಲಿ ಎಲ್ಲ ಗುಂಡಿಗಳನ್ನೂ ಮುಚ್ಚಲಾಗುತ್ತದೆ’ ಎಂದು ರಸ್ತೆ ಮೂಲಸೌಕರ್ಯ ವಿಭಾಗದ ಕಿರಿಯ ಎಂಜಿನಿಯರ್ ಜಯಂತ್ ಕುಮಾರ್<br />ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>