‘ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನ ಕೋಟೆಪ್ಪ, ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಸಹೋದ್ಯೋಗಿಯೂ ಆಗಿದ್ದ ಸವಿತಾ ಎಂಬುವರನ್ನು ಪ್ರೀತಿಸಿ 2012ರಲ್ಲಿ ಮದುವೆಯಾಗಿದ್ದರು. ಆದರೆ, ದಂಪತಿ ನಡುವೆ ಕಲಹ ಶುರುವಾಗಿತ್ತು. ಬೇಸತ್ತ ಕೋಟೆಪ್ಪ, 2015ರಲ್ಲಿ ಮನೆ ಬಿಟ್ಟು ಹೋಗಿದ್ದರು. ನಾಪತ್ತೆಯಾಗಿರುವ ಪತಿಯನ್ನು ಹುಡುಕಿಕೊಡುವಂತೆ ಸವಿತಾ ಠಾಣೆಗೆ ದೂರು ನೀಡಿದ್ದರು’ ಎಂದೂ ಪೊಲೀಸ್ ಮೂಲಗಳು ಹೇಳಿವೆ.