<p><strong>ಬೆಂಗಳೂರು:</strong> ಹೆಚ್ಚಿನ ವರದಕ್ಷಿಣೆ ತರಲಿಲ್ಲವೆಂಬ ಕಾರಣಕ್ಕೆ ಪತ್ನಿಯನ್ನು ಚಾಕುವಿನಿಂದ ಇರಿದು ಕೊಂದಿದ್ದ ಪತಿ ಪರಶುರಾಮ ದೇಸಾಯಿ ಎಂಬಾತನಿಗೆ ಜೀವಾವಧಿ ಶಿಕ್ಷೆ ವಿಧಿಸಿ ನಗರದ 72ನೇ ಸಿಸಿಎಚ್ ನ್ಯಾಯಾಲಯ ಆದೇಶ ಹೊರಡಿಸಿದೆ.</p>.<p>2015ರ ಫೆ. 2ರಂದು ನಡೆದಿದ್ದ ಯಲ್ಲಮ್ಮ ಕೊಲೆ ಪ್ರಕರಣದ ವಿಚಾರಣೆಯನ್ನು ನ್ಯಾಯಾಧೀಶರಾದ ಕೆ.ಎಸ್.ಜ್ಯೋತಿಶ್ರೀ ನಡೆಸಿದ್ದರು. ಪಬ್ಲಿಕ್ ಪ್ರಾಸಿಕ್ಯೂಟರ್ ಎಚ್.ಆರ್. ಸತ್ಯವತಿ ವಾದಿಸಿದ್ದರು.</p>.<p>‘ಯಾದಗಿರಿ ಜಿಲ್ಲೆಯ ಪರಶುರಾಮ ಹಾಗೂ ಯಲ್ಲಮ್ಮ ಕೆಲಸಕ್ಕಾಗಿ ಬೆಂಗಳೂರಿಗೆ ಬಂದಿದ್ದರು. ಪೀಣ್ಯ ಠಾಣೆ ವ್ಯಾಪ್ತಿಯ ನೆಲಗೆದರನಹಳ್ಳಿಯಲ್ಲಿ ದಂಪತಿ ವಾಸವಿದ್ದರು. ಮದುವೆ ವೇಳೆ ವರದಕ್ಷಿಣೆ ಪಡೆದಿದ್ದ ಪರಶುರಾಮ, ಪುನಃ ₹ 3 ಲಕ್ಷ ನಗದು ಹಾಗೂ ಬೈಕ್ ವರದಕ್ಷಿಣೆ ತರುವಂತೆ ಪತ್ನಿಯನ್ನು ಪೀಡಿಸಲಾರಂಭಿಸಿದ್ದ’ ಎಂದು ಪೊಲೀಸ್ ಮೂಲಗಳು ಹೇಳಿವೆ.</p>.<p>‘ವರದಕ್ಷಿಣೆ ತರಲು ಪತ್ನಿ ಯಲ್ಲಮ್ಮ ನಿರಾಕರಿಸಿದ್ದರು. ಇದರಿಂದ ಸಿಟ್ಟಾಗಿದ್ದ ಪರಶುರಾಮ, ಚಾಕುವಿನಿಂದ ಇರಿದು ಕೊಂದಿದ್ದ. ಪ್ರಕರಣ ಸಂಬಂಧ ಪೊಲೀಸರು, ಪರಶುರಾಮ ನನ್ನು ಬಂಧಿಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು’ ಎಂದು ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಹೆಚ್ಚಿನ ವರದಕ್ಷಿಣೆ ತರಲಿಲ್ಲವೆಂಬ ಕಾರಣಕ್ಕೆ ಪತ್ನಿಯನ್ನು ಚಾಕುವಿನಿಂದ ಇರಿದು ಕೊಂದಿದ್ದ ಪತಿ ಪರಶುರಾಮ ದೇಸಾಯಿ ಎಂಬಾತನಿಗೆ ಜೀವಾವಧಿ ಶಿಕ್ಷೆ ವಿಧಿಸಿ ನಗರದ 72ನೇ ಸಿಸಿಎಚ್ ನ್ಯಾಯಾಲಯ ಆದೇಶ ಹೊರಡಿಸಿದೆ.</p>.<p>2015ರ ಫೆ. 2ರಂದು ನಡೆದಿದ್ದ ಯಲ್ಲಮ್ಮ ಕೊಲೆ ಪ್ರಕರಣದ ವಿಚಾರಣೆಯನ್ನು ನ್ಯಾಯಾಧೀಶರಾದ ಕೆ.ಎಸ್.ಜ್ಯೋತಿಶ್ರೀ ನಡೆಸಿದ್ದರು. ಪಬ್ಲಿಕ್ ಪ್ರಾಸಿಕ್ಯೂಟರ್ ಎಚ್.ಆರ್. ಸತ್ಯವತಿ ವಾದಿಸಿದ್ದರು.</p>.<p>‘ಯಾದಗಿರಿ ಜಿಲ್ಲೆಯ ಪರಶುರಾಮ ಹಾಗೂ ಯಲ್ಲಮ್ಮ ಕೆಲಸಕ್ಕಾಗಿ ಬೆಂಗಳೂರಿಗೆ ಬಂದಿದ್ದರು. ಪೀಣ್ಯ ಠಾಣೆ ವ್ಯಾಪ್ತಿಯ ನೆಲಗೆದರನಹಳ್ಳಿಯಲ್ಲಿ ದಂಪತಿ ವಾಸವಿದ್ದರು. ಮದುವೆ ವೇಳೆ ವರದಕ್ಷಿಣೆ ಪಡೆದಿದ್ದ ಪರಶುರಾಮ, ಪುನಃ ₹ 3 ಲಕ್ಷ ನಗದು ಹಾಗೂ ಬೈಕ್ ವರದಕ್ಷಿಣೆ ತರುವಂತೆ ಪತ್ನಿಯನ್ನು ಪೀಡಿಸಲಾರಂಭಿಸಿದ್ದ’ ಎಂದು ಪೊಲೀಸ್ ಮೂಲಗಳು ಹೇಳಿವೆ.</p>.<p>‘ವರದಕ್ಷಿಣೆ ತರಲು ಪತ್ನಿ ಯಲ್ಲಮ್ಮ ನಿರಾಕರಿಸಿದ್ದರು. ಇದರಿಂದ ಸಿಟ್ಟಾಗಿದ್ದ ಪರಶುರಾಮ, ಚಾಕುವಿನಿಂದ ಇರಿದು ಕೊಂದಿದ್ದ. ಪ್ರಕರಣ ಸಂಬಂಧ ಪೊಲೀಸರು, ಪರಶುರಾಮ ನನ್ನು ಬಂಧಿಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು’ ಎಂದು ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>