ಬೆಂಗಳೂರು: ಹೈದರಾಬಾದ್ ಕರ್ನಾಟಕ (ಹೈ–ಕ) ಪ್ರದೇಶದ ಸರ್ಕಾರಿ ಹುದ್ದೆಗಳಿಗೆ ಪ್ರತ್ಯೇಕವಾದ ನೇಮಕಾತಿ, ಜೇಷ್ಠತೆ, ಬಡ್ತಿ ಮತ್ತು ವರ್ಗಾವಣೆ ನೀತಿ ಅನುಸರಿಸಬೇಕು. ಹೈ–ಕದ ಅಧಿಕಾರಿ/ನೌಕರರ ವೃಂದವನ್ನು ಪ್ರತ್ಯೇಕ ಘಟಕವನ್ನಾಗಿ ಮಾಡಬೇಕು. ಯಾವುದೇ ಕಾರಣಕ್ಕೂ ಕರ್ನಾಟಕದ ಇತರೆ ಭಾಗದ ಯಾವುದೇ ವೃಂದಕ್ಕೂ ಸೇರಿಸಬಾರದು ಎಂದು ಮೈಸೂರು, ಕಿತ್ತೂರು ಮತ್ತು ಕರಾವಳಿ ಕರ್ನಾಟಕ ಹಿತರಕ್ಷಣಾ ಸಮಿತಿ ಆಗ್ರಹಿಸಿದೆ.