ಸೋಮವಾರ, 3 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರಿನ ಉದ್ಯಮಿ ಸೆರೆ

ತೆರಿಗೆ ವಂಚಿಸಿ ವಿದೇಶಕ್ಕೆ ಪರಾರಿ ಆಗುತ್ತಿದ್ದ ಪ್ರಕರಣ
Last Updated 12 ಫೆಬ್ರುವರಿ 2019, 19:22 IST
ಅಕ್ಷರ ಗಾತ್ರ

ಬೆಂಗಳೂರು: ತೆರಿಗೆ ವಂಚಿಸಿ ವಿದೇಶಕ್ಕೆ ಪರಾರಿಯಾಗುತ್ತಿದ್ದ ನಗರದ ಉದ್ಯಮಿಯೊಬ್ಬರನ್ನು ಅದಾಯ ತೆರಿಗೆ ಅಧಿಕಾರಿಗಳು ಮುಂಬೈ ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ.

ಮುಂಬೈನ ಛತ್ರಪತಿ ಶಿವಾಜಿ ವಿಮಾನ ನಿಲ್ದಾಣದಿಂದ ಮಧ್ಯಾಹ್ನ 2.30ಕ್ಕೆ ವಿದೇಶಕ್ಕೆ ಹೊರಟಿದ್ದ ಉದ್ಯಮಿಯನ್ನು ಸೋಮವಾರ ಬಂಧಿಸಲಾಗಿದೆ. ಆರೋಪಿಯನ್ನು ಇಂದು ತೆರಿಗೆ ವಸೂಲಾತಿ ಅಧಿಕಾರಿ ಮುಂದೆ ಹಾಜರುಪಡಿಸಲಾಯಿತು. ತೆರಿಗೆ ಕಟ್ಟುವುದಕ್ಕೆ ಸಂಬಂಧಿಸಿದಂತೆ ಅವರು ಸರಿಯಾದ ಉತ್ತರ ನೀಡದಿದ್ದರಿಂದ ಆರು ತಿಂಗಳು ಸೆರೆವಾಸ ವಿಧಿಸಲಾಗಿದೆ.

ಉದ್ಯಮಿ ₹ 12 ಕೋಟಿ ತೆರಿಗೆ, ದಂಡ ಕಟ್ಟಬೇಕಿತ್ತು. ಇದರ ಜೊತೆಗೆ ಬಡ್ಡಿಯನ್ನೂ ಪಾವತಿಸಬೇಕಿತ್ತು. ಆದರೆ, ಯಾವುದನ್ನೂ ಪಾವತಿಸದೆ ತಮ್ಮ ಆಸ್ತಿ ವರ್ಗಾವಣೆ ಮಾಡಿ ವಿದೇಶಕ್ಕೆ ಹೊರಟಿದ್ದರು ಎಂದು ತೆರಿಗೆ ಇಲಾಖೆ ಪ್ರಕಟಣೆ ತಿಳಿಸಿದೆ. ತೆರಿಗೆ ಬಾಕಿ ಪಾವತಿಸದೆ ಆಸ್ತಿ ವರ್ಗಾವಣೆ ಮಾಡುವುದು ಆದಾಯ ತೆರಿಗೆ ಕಾಯ್ದೆಗೆ ವಿರುದ್ಧವಾದ ಕ್ರಮ. ಈ ಕಾರಣಕ್ಕೆ ಉದ್ಯಮಿಯನ್ನು ಬಂಧಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT