ಪದ್ಮನಾಭನಗರ ವಿಧಾನಸಭಾ ಕ್ಷೇತ್ರದಲ್ಲಿ 1,600ಕ್ಕೂ ಹೆಚ್ಚು ಕುಟುಂಬಗಳಿಗೆ ಪಡಿತರ ಕಿಟ್ ವಿತರಿಸಿ ಮಾತನಾಡಿದ ಅವರು, ‘ಎಲ್ಲರಿಗೂ ಉಚಿತವಾಗಿ ಲಸಿಕೆ ನೀಡುವುದಾಗಿ ಪ್ರಧಾನಿ ಮೋದಿ ಘೋಷಣೆ ಮಾಡಿದ್ದಾರೆ. ಕೋವಿಡ್ ವಿರುದ್ಧ ಗೆಲುವು ಸಾಧಿಸಲು ಎಲ್ಲರೂ ಲಸಿಕೆ ಪಡೆಯಲೇಬೇಕು. ವಿರೋಧ ಪಕ್ಷಗಳ ಅಪಪ್ರಚಾರದಿಂದ ಲಸಿಕಾ ಕಾರ್ಯಕ್ರಮಕ್ಕೆ ಹಿನ್ನಡೆಯಾಯಿತು’ ಎಂದರು.