ರಾಷ್ಟ್ರೋತ್ಥಾನ ಗೋಶಾಲೆಯ ಹಸುಗಳನ್ನು ಅವರು ದತ್ತು ಪಡೆದರು. ಬೆಳಿಗ್ಗೆ ಬೊಮ್ಮಾಯಿ ಮತ್ತು ಅವರ ಪತ್ನಿ ಚನ್ನಮ್ಮ ಹಸು, ಕರುವಿಗೆ ಪೂಜೆ ಮಾಡಿದರು. ಬಳಿಕ ಹಸುವನ್ನು ಮನೆಯಲ್ಲಿ ಕರೆದುಕೊಂಡು ಗೋಗ್ರಾಸ ನೀಡಿದರು. ಈ ಸಂದರ್ಭದಲ್ಲಿ ಕುಟುಂಬದ ಸದಸ್ಯರು ಇದ್ದರು. ಬಳಿಕ ಮಾತನಾಡಿದ ಅವರು, ಗೋವುಗಳನ್ನು ದತ್ತು ಪಡೆಯುವ ಯೋಜನೆಯನ್ನು ಇಡೀ ರಾಜ್ಯದಲ್ಲಿ ಜಾರಿ ಮಾಡಲಾಗುವುದು ಎಂದರು.ಬೊಮ್ಮಾಯಿ ತಮ್ಮ ಜನ್ಮದಿನವನ್ನು ಸರಳವಾಗಿ ಆಚರಿಸಿಕೊಂಡರು. ಬಾಲಬ್ರೂಯಿ ಅತಿಥಿಗೃಹದ ಪಕ್ಕದಲ್ಲಿರುವ ಮಾರುತಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದರು.