‘ಚುನಾವಣೆಯಲ್ಲಿ ಗೆದ್ದ ಬಳಿಕ ನಳಿನ್ ಕಟೀಲ್ ಅವರನ್ನು ಭೇಟಿಯಾಗದ ಕಾರಣ, ಗುರುವಾರ ಭೇಟಿಯಾಗಿ ಅವರ ಆಶೀರ್ವಾದ ಪಡೆದಿದ್ದೇನೆ. ಅರುಣ್ ಕುಮಾರ್ ಅವರನ್ನೂ ಭೇಟಿ ಮಾಡಿ ಕ್ಷೇತ್ರದ ಅಭಿವೃದ್ಧಿ ಬಗ್ಗೆ ಚರ್ಚಿಸಿದ್ದೇನೆ. ಮುಂದಿನ ದಿನಗಳಲ್ಲಿ ಪಕ್ಷವನ್ನು ಇನ್ನಷ್ಟು ಪ್ರಬಲವಾಗಿ ಬೆಳೆಸಲು ಶಾಸಕನಾಗಿ ಎಲ್ಲ ಪ್ರಯತ್ನ ಮಾಡುತ್ತೇನೆ’ ಎಂದು ಮುನಿರತ್ನ ತಿಳಿಸಿದರು.