ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಸ್ತರಣೆಗೆ ಆತುರವಿಲ್ಲ ಕಾಯುತ್ತೇನೆ: ಮುನಿರತ್ನ

Last Updated 19 ನವೆಂಬರ್ 2020, 21:06 IST
ಅಕ್ಷರ ಗಾತ್ರ

ಬೆಂಗಳೂರು: ‘ಸಂಪುಟ ವಿಸ್ತರಣೆ ಮಾಡುವವರೆಗೆ ಕಾಯುತ್ತೇನೆ. ನನಗೆ ಯಾವುದೇ ಆತುರವಿಲ್ಲ’ ಎಂದು ಆರ್‌.ಆರ್‌.ನಗರ ಶಾಸಕ ಮುನಿರತ್ನ ಹೇಳಿದ್ದಾರೆ.

ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಅವರನ್ನು ಗುರುವಾರ ಭೇಟಿ ಮಾಡಿದ ಬಳಿಕ ಸುದ್ದಿಗಾರರ ಜತೆ ಅವರು ಮಾತನಾಡಿದರು. ‘ಮುಖ್ಯಮಂತ್ರಿ ಯಡಿಯೂರಪ್ಪ ಕೊಟ್ಟ ಮಾತಿಗೆ ತಪ್ಪುವವರಲ್ಲ. ನನಗೆ ನಿಶ್ಚಿತವಾಗಿಯೂ ಸಚಿವ ಸ್ಥಾನ ನೀಡುತ್ತಾರೆ’ ಎಂದು ಅವರು ಹೇಳಿದರು.

‘ಚುನಾವಣೆಯಲ್ಲಿ ಗೆದ್ದ ಬಳಿಕ ನಳಿನ್ ಕಟೀಲ್‌ ಅವರನ್ನು ಭೇಟಿಯಾಗದ ಕಾರಣ, ಗುರುವಾರ ಭೇಟಿಯಾಗಿ ಅವರ ಆಶೀರ್ವಾದ ಪಡೆದಿದ್ದೇನೆ. ಅರುಣ್ ಕುಮಾರ್‌ ಅವರನ್ನೂ ಭೇಟಿ ಮಾಡಿ ಕ್ಷೇತ್ರದ ಅಭಿವೃದ್ಧಿ ಬಗ್ಗೆ ಚರ್ಚಿಸಿದ್ದೇನೆ. ಮುಂದಿನ ದಿನಗಳಲ್ಲಿ ಪಕ್ಷವನ್ನು ಇನ್ನಷ್ಟು ಪ್ರಬಲವಾಗಿ ಬೆಳೆಸಲು ಶಾಸಕನಾಗಿ ಎಲ್ಲ ಪ್ರಯತ್ನ ಮಾಡುತ್ತೇನೆ’ ಎಂದು ಮುನಿರತ್ನ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT