<p><strong>ಬೆಂಗಳೂರು:</strong> ಆರ್ಸಿಬಿ ವಿಜಯೋತ್ಸವದ ವೇಳೆ ಸಂಭವಿಸಿದ ಕಾಲ್ತುಳಿತದ ಘಟನೆ ಬೆನ್ನಲ್ಲೇ ಸರ್ಕಾರ ಹಲವು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.</p>.<p>ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಆರ್.ಹಿತೇಂದ್ರ ಅವರನ್ನು ಸಂಚಾರ ಮತ್ತು ರಸ್ತೆ ಸುರಕ್ಷತಾ ವಿಭಾಗಕ್ಕೆ ವರ್ಗಾವಣೆ ಮಾಡಲಾಗಿದೆ. ಸಂಪರ್ಕ, ಲಾಜಿಸ್ಟಿಕ್ಸ್ ಮತ್ತು ಆಧುನೀಕರಣ ವಿಭಾಗದ ಎಡಿಜಿಪಿ ಎಸ್.ಮುರುಗನ್ ಅವರನ್ನು ನೇಮಕಾತಿ ವಿಭಾಗಕ್ಕೆ ನಿಯೋಜಿಸಲಾಗಿದೆ.</p>.<p>ನೇಮಕಾತಿ ವಿಭಾಗದ ಎಡಿಜಿಪಿ ಕೆ.ವಿ.ಶರತ್ ಚಂದ್ರ ಅವರನ್ನು ಸರ್ಕಾರದ ಪ್ರಧಾನ ಕಾರ್ಯದರ್ಶಿಯಾಗಿ ನಿಯೋಜಿಸಲಾಗಿದೆ. ಇವರಿಗೆ ರಾಜ್ಯ ಪೊಲೀಸ್ ವಸತಿ, ಮೂಲಸೌಕರ್ಯ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರ ಹೆಚ್ಚುವರಿ ಜವಾಬ್ದಾರಿ ನೀಡಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.</p>.<p><strong>ಅಕ್ರಂ ಪಾಷಾ, ಶೆಟ್ಟಣ್ಣವರ್ ವರ್ಗಾವಣೆ</strong></p><p><strong>ಬೆಂಗಳೂರು:</strong> ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಆಯುಕ್ತ ಅಕ್ರಂ ಪಾಷಾ ಮತ್ತು ಇಲಾಖೆಯ ಕಾರ್ಯದರ್ಶಿ ಸಂಜಯ್ ಶೆಟ್ಟಣ್ಣವರ್ ಅವರನ್ನು ವರ್ಗಾಯಿಸಲಾಗಿದ್ದು, ಇಬ್ಬರಿಗೂ ಯಾವುದೇ ಹುದ್ದೆ ತೋರಿಸಿಲ್ಲ.</p><p>ಆಯುಕ್ತರ ಹುದ್ದೆಯನ್ನು ಗೃಹ ಮಂಡಳಿ ಆಯುಕ್ತ ದಯಾನಂದ ಕೆ.ಎ ಅವರಿಗೆ ಹೆಚ್ಚುವರಿಯಾಗಿ ಮತ್ತು ಕಾರ್ಯದರ್ಶಿ ಹುದ್ದೆಯನ್ನು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಕಾರ್ಯದರ್ಶಿ ತುಳಸಿ ಮದ್ದಿನೇನಿ ಅವರಿಗೆ ಹೆಚ್ಚುವರಿಯಾಗಿ ನೀಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಆರ್ಸಿಬಿ ವಿಜಯೋತ್ಸವದ ವೇಳೆ ಸಂಭವಿಸಿದ ಕಾಲ್ತುಳಿತದ ಘಟನೆ ಬೆನ್ನಲ್ಲೇ ಸರ್ಕಾರ ಹಲವು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.</p>.<p>ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಆರ್.ಹಿತೇಂದ್ರ ಅವರನ್ನು ಸಂಚಾರ ಮತ್ತು ರಸ್ತೆ ಸುರಕ್ಷತಾ ವಿಭಾಗಕ್ಕೆ ವರ್ಗಾವಣೆ ಮಾಡಲಾಗಿದೆ. ಸಂಪರ್ಕ, ಲಾಜಿಸ್ಟಿಕ್ಸ್ ಮತ್ತು ಆಧುನೀಕರಣ ವಿಭಾಗದ ಎಡಿಜಿಪಿ ಎಸ್.ಮುರುಗನ್ ಅವರನ್ನು ನೇಮಕಾತಿ ವಿಭಾಗಕ್ಕೆ ನಿಯೋಜಿಸಲಾಗಿದೆ.</p>.<p>ನೇಮಕಾತಿ ವಿಭಾಗದ ಎಡಿಜಿಪಿ ಕೆ.ವಿ.ಶರತ್ ಚಂದ್ರ ಅವರನ್ನು ಸರ್ಕಾರದ ಪ್ರಧಾನ ಕಾರ್ಯದರ್ಶಿಯಾಗಿ ನಿಯೋಜಿಸಲಾಗಿದೆ. ಇವರಿಗೆ ರಾಜ್ಯ ಪೊಲೀಸ್ ವಸತಿ, ಮೂಲಸೌಕರ್ಯ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರ ಹೆಚ್ಚುವರಿ ಜವಾಬ್ದಾರಿ ನೀಡಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.</p>.<p><strong>ಅಕ್ರಂ ಪಾಷಾ, ಶೆಟ್ಟಣ್ಣವರ್ ವರ್ಗಾವಣೆ</strong></p><p><strong>ಬೆಂಗಳೂರು:</strong> ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಆಯುಕ್ತ ಅಕ್ರಂ ಪಾಷಾ ಮತ್ತು ಇಲಾಖೆಯ ಕಾರ್ಯದರ್ಶಿ ಸಂಜಯ್ ಶೆಟ್ಟಣ್ಣವರ್ ಅವರನ್ನು ವರ್ಗಾಯಿಸಲಾಗಿದ್ದು, ಇಬ್ಬರಿಗೂ ಯಾವುದೇ ಹುದ್ದೆ ತೋರಿಸಿಲ್ಲ.</p><p>ಆಯುಕ್ತರ ಹುದ್ದೆಯನ್ನು ಗೃಹ ಮಂಡಳಿ ಆಯುಕ್ತ ದಯಾನಂದ ಕೆ.ಎ ಅವರಿಗೆ ಹೆಚ್ಚುವರಿಯಾಗಿ ಮತ್ತು ಕಾರ್ಯದರ್ಶಿ ಹುದ್ದೆಯನ್ನು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಕಾರ್ಯದರ್ಶಿ ತುಳಸಿ ಮದ್ದಿನೇನಿ ಅವರಿಗೆ ಹೆಚ್ಚುವರಿಯಾಗಿ ನೀಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>