<p><strong>ಬೆಂಗಳೂರು: </strong>ಕೆಎಎಸ್ ಅಧಿಕಾರಿಗಳಾದ ಎಂ. ಕೆ.ಜಗದೀಶ್ ಮತ್ತು ಬಸವರಾಜ್ ಅವರನ್ನು ಬೆಂಗಳೂರು ನಗರ ಜಿಲ್ಲೆಯ ವಿಶೇಷ ಜಿಲ್ಲಾಧಿಕಾರಿ ಹುದ್ದೆಗಳಿಗೆ ನೇಮಕ ಮಾಡಿದ್ದ ಸರ್ಕಾರದ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿದೆ.</p>.<p>ನಗರದ ವಕೀಲ ವಾಸುದೇವ ರೆಡ್ಡಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ.ವಿ. ನಾಗರತ್ನಾ ನೇತೃತ್ವದ ವಿಭಾಗೀಯ ಪೀಠ, ‘ಐಎಎಸ್ ಅಧಿಕಾರಿಗಳನ್ನೇ ಈ ಹುದ್ದೆಗಳಿಗೆ ನೇಮಕ ಮಾಡಬೇಕು’ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಗೆ ನಿರ್ದೇಶನ ನೀಡಿದೆ.</p>.<p>‘ಕರ್ನಾಟಕ ಭೂಕಂದಾಯ ಕಾಯ್ದೆಯ ಸೆಕ್ಷನ್ 136 (3) ಮತ್ತು ಸೆಕ್ಷನ್ 67 (2)ರ ಪ್ರಕಾರ ಕೆಎಎಸ್ ಅಧಿಕಾರಿಗಳನ್ನು ಈ ಹುದ್ದೆಗೆ ನೇಮಿಸಲು ಅಧಿಕಾರ ಇಲ್ಲ. 2014ರ ಅಕ್ಟೋಬರ್ 10ರ ಹೈಕೋರ್ಟ್ ಆದೇಶಕ್ಕೂ ಇದು ವಿರುದ್ಧ’ ಎಂದು ಅರ್ಜಿದಾರರು ತಿಳಿಸಿದ್ದಾರೆ.</p>.<p>‘ಭೂಕಂದಾಯ ಕಾಯ್ದೆ ಪ್ರಕಾರ ಅರೆನ್ಯಾಯಿಕ ಕಾರ್ಯ ನಿರ್ವಹಿಸಬೇಕಾಗಿರುವ ಕಾರಣ ವಿಶೇಷ ಜಿಲ್ಲಾಧಿಕಾರಿಗಳ ಹುದ್ದೆಗಳಿಗೆ ಐಎಎಸ್ ಅಧಿಕಾರಿಗಳನ್ನೇ ನೇಮಿಸಬೇಕು. ಒಂದು ತಿಂಗಳಲ್ಲಿ ಮಾರ್ಪಡಿಸಿದ ಆದೇಶ ಹೊರಡಿಸಬೇಕು’ ಎಂದು ಪೀಠ ತಿಳಿಸಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಕೆಎಎಸ್ ಅಧಿಕಾರಿಗಳಾದ ಎಂ. ಕೆ.ಜಗದೀಶ್ ಮತ್ತು ಬಸವರಾಜ್ ಅವರನ್ನು ಬೆಂಗಳೂರು ನಗರ ಜಿಲ್ಲೆಯ ವಿಶೇಷ ಜಿಲ್ಲಾಧಿಕಾರಿ ಹುದ್ದೆಗಳಿಗೆ ನೇಮಕ ಮಾಡಿದ್ದ ಸರ್ಕಾರದ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿದೆ.</p>.<p>ನಗರದ ವಕೀಲ ವಾಸುದೇವ ರೆಡ್ಡಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ.ವಿ. ನಾಗರತ್ನಾ ನೇತೃತ್ವದ ವಿಭಾಗೀಯ ಪೀಠ, ‘ಐಎಎಸ್ ಅಧಿಕಾರಿಗಳನ್ನೇ ಈ ಹುದ್ದೆಗಳಿಗೆ ನೇಮಕ ಮಾಡಬೇಕು’ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಗೆ ನಿರ್ದೇಶನ ನೀಡಿದೆ.</p>.<p>‘ಕರ್ನಾಟಕ ಭೂಕಂದಾಯ ಕಾಯ್ದೆಯ ಸೆಕ್ಷನ್ 136 (3) ಮತ್ತು ಸೆಕ್ಷನ್ 67 (2)ರ ಪ್ರಕಾರ ಕೆಎಎಸ್ ಅಧಿಕಾರಿಗಳನ್ನು ಈ ಹುದ್ದೆಗೆ ನೇಮಿಸಲು ಅಧಿಕಾರ ಇಲ್ಲ. 2014ರ ಅಕ್ಟೋಬರ್ 10ರ ಹೈಕೋರ್ಟ್ ಆದೇಶಕ್ಕೂ ಇದು ವಿರುದ್ಧ’ ಎಂದು ಅರ್ಜಿದಾರರು ತಿಳಿಸಿದ್ದಾರೆ.</p>.<p>‘ಭೂಕಂದಾಯ ಕಾಯ್ದೆ ಪ್ರಕಾರ ಅರೆನ್ಯಾಯಿಕ ಕಾರ್ಯ ನಿರ್ವಹಿಸಬೇಕಾಗಿರುವ ಕಾರಣ ವಿಶೇಷ ಜಿಲ್ಲಾಧಿಕಾರಿಗಳ ಹುದ್ದೆಗಳಿಗೆ ಐಎಎಸ್ ಅಧಿಕಾರಿಗಳನ್ನೇ ನೇಮಿಸಬೇಕು. ಒಂದು ತಿಂಗಳಲ್ಲಿ ಮಾರ್ಪಡಿಸಿದ ಆದೇಶ ಹೊರಡಿಸಬೇಕು’ ಎಂದು ಪೀಠ ತಿಳಿಸಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>