ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೂವರು ಐಎಎಸ್‌ ಅಧಿಕಾರಿಗಳ ನಿವೃತ್ತಿ: ಇತರರಿಗೆ ಹೆಚ್ಚವರಿಯಾಗಿ ಹುದ್ದೆ ಹಂಚಿಕೆ

Last Updated 31 ಮೇ 2020, 6:07 IST
ಅಕ್ಷರ ಗಾತ್ರ

ಬೆಂಗಳೂರು: ಮೂವರು ಐಎಎಸ್‌ ಅಧಿಕಾರಿಗಳು ನಿವೃತ್ತರಾದ ಹಿನ್ನೆಲೆಯಲ್ಲಿ ಅವರ ಬಳಿ ಇದ್ದ ಹುದ್ದೆಗಳನ್ನು ಇತರರಿಗೆ ಹೆಚ್ಚುವರಿಯಾಗಿ ವಹಿಸಿ ರಾಜ್ಯ ಸರ್ಕಾರ ಶನಿವಾರ ಆದೇಶ ಹೊರಡಿಸಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಆರ್‌.ಆರ್‌. ಜನ್ನು, ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್ಸನ್ ಸೊಸೈಟಿಯ ಯೋಜನಾ ನಿರ್ದೇಶಕ ಮತ್ತು ಸರ್ವೆ, ಸೆಂಟ್ಲಮೆಂಟ್‌ ಮತ್ತು ಭೂ ದಾಖಲೆಗಳ ಇಲಾಖೆಯ ಆಯುಕ್ತ ಎಂ.ಕೆ. ಶ್ರೀರಂಗಯ್ಯ, ಕಾರ್ಮಿಕ ಇಲಾಖೆ ಆಯುಕ್ತ ಕೆ.ಜಿ. ಶಾಂತಾರಾಮ್‌ ನಿವೃತ್ತಿಯಾಗಿದ್ದಾರೆ.

ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕರಾಗಿರುವ ಎನ್‌. ಮಂಜುಳಾ ಅವರಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಹೊಣೆ ಹೆಚ್ಚುವರಿಯಾಗಿ ನೀಡಲಾಗಿದೆ. ರಾಷ್ಟ್ರೀಯ ಆರೋಗ್ಯ ಅಭಿಯಾನದ ನಿರ್ದೇಶಕ ಆರ್‌. ರಾಮಚಂದ್ರನ್‌ ಅವರಿಗೆ ಕರ್ನಾಟಕ ರಾಜ್ಯ ಏಡ್ಸ್‌ ಪ್ರಿವೆನ್ಸನ್ ಸೊಸೈಟಿಯ ಯೋಜನಾ ನಿರ್ದೇಶಕ ಹೊಣೆ ನೀಡಲಾಗಿದೆ. ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಆಯುಕ್ತ ಕೆ.ಪಿ. ಮೋಹನ್‌ರಾಜ್‌ ಅವರಿಗೆ ಸರ್ವೆ, ಸೆಂಟ್ಲಮೆಂಟ್‌ ಮತ್ತು ಭೂ ದಾಖಲೆಗಳ ಇಲಾಖೆಯ ಆಯುಕ್ತ ಹುದ್ದೆ ವಹಿಸಲಾಗಿದೆ. ಕಬ್ಬು ಅಭಿವೃದ್ಧಿ ಆಯುಕ್ತ ಮತ್ತು ಸಕ್ಕರೆ ನಿರ್ದೇಶಕ ಅಕ್ರಂ ಪಾಷಾ ಅವರಿಗೆ ಕಾರ್ಮಿಕ ಇಲಾಖೆ ಆಯುಕ್ತ ಹುದ್ದೆಯನ್ನು ಹೆಚ್ಚುವರಿಯಾಗಿ ನೀಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT