<p><strong>ಬೆಂಗಳೂರು</strong>: ‘ನಗರ ಸರ್ಕಾರಿ ಶ್ರೀಕೃಷ್ಣರಾಜೇಂದ್ರ ಸಿಲ್ವರ್ ಜ್ಯೂಬಿಲಿ ತಾಂತ್ರಿಕ ಮಹಾ ವಿದ್ಯಾಲಯದ (ಎಂಜಿನಿಯರಿಂಗ್ ಕಾಲೇಜು) ಅಭಿವೃದ್ಧಿಯಲ್ಲಿ ಸಹಭಾಗಿತ್ವ ವಹಿಸುವಂತೆ ಐಬಿಎಂ ಕಂಪನಿಗೆ ಮನವಿ ಮಾಡಲಾಗಿದೆ. ಸಕಾರಾತ್ಮಕ ಸ್ಪಂದನೆ ಲಭಿಸಿದೆ’ ಎಂದು ಮಾಹಿತಿ ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದರು.</p>.<p>ಐಬಿಎಂ ಕಂಪನಿಯ ಹಿರಿಯ ಅಧಿಕಾರಿಗಳ ತಂಡವು ಸಚಿವರನ್ನು ಮಂಗಳವಾರ ಭೇಟಿಮಾಡಿ ಚರ್ಚೆ ನಡೆಸಿತು. ಬಳಿಕ ಸಚಿವರು ಈ ವಿಷಯ ತಿಳಿಸಿದರು.</p>.<p>ಐಬಿಎಂ ದಕ್ಷಿಣ ಏಷ್ಯಾ ವಿಭಾಗದ ವ್ಯವಸ್ಥಾಪಕ ನಿರ್ದೇಶಕ ಸಂದೀಪ್ ಪಟೇಲ್, ‘ಸೈಬರ್ ಭದ್ರತೆಗೆ ಸಂಬಂಧಿಸಿದ ಅತ್ಯಾಧುನಿಕ ಕಮಾಂಡ್ ಸೆಂಟರ್ ಅನ್ನು ಕಂಪನಿಯು ಬೆಂಗಳೂರಿನಲ್ಲಿ ತೆರೆದಿದೆ. ರಾಜ್ಯ ಸರ್ಕಾರವು ತನ್ನ ದತ್ತಾಂಶಗಳ ಸಂರಕ್ಷಣೆಗೆ ಈ ಕೇಂದ್ರವನ್ನು ಬಳಸಿಕೊಳ್ಳಬಹುದು’ ಎಂದರು.</p>.<p>ಸೈಬರ್ ಭದ್ರತಾ ನೀತಿ ರೂಪಿಸುವ ಪ್ರಕ್ರಿಯೆಯಲ್ಲೂ ರಾಜ್ಯ ಸರ್ಕಾರಕ್ಕೆ ಸಹಕಾರ ನೀಡಲು ಸಿದ್ಧ. ಕರ್ನಾಟಕ ಹಾಲು ಮಹಾಮಂಡಳದಲ್ಲೂ (ಕೆಎಂಎಫ್) ಸೈಬರ್ ಭದ್ರತೆಗೆ ನೆರವು ನೀಡಲು ಕಂಪನಿ ಸಿದ್ಧವಿದೆ ಎಂದರು.</p>.<p class="Subhead">ಸಹಭಾಗಿತ್ವ: ರಾಜ್ಯದಲ್ಲಿ 14 ಸರ್ಕಾರಿ ಎಂಜಿನಿಯರಿಂಗ್ ಕಾಲೇಜುಗಳಿವೆ. ಅವುಗಳ ಅಭಿವೃದ್ಧಿಗೂ ನೆರವು ನೀಡಲು ಐಬಿಎಂ ಆಸಕ್ತಿ ಹೊಂದಿದೆ. ರಾಜ್ಯ ಸರ್ಕಾರ ವಿವಿಧೆಡೆ ಸ್ಥಾಪಿಸಿರುವ ಅಟಲ್ ಟಿಂಕರಿಂಗ್ ಲ್ಯಾಬ್ಗಳ ಉನ್ನತೀಕರಣದಲ್ಲೂ ಸಹಭಾಗಿತ್ವ ವಹಿಸಲು ಕಂಪನಿ ಮುಕ್ತ ಮನಸ್ಸು ಹೊಂದಿದೆ ಎಂದರು.</p>.<p>ಐಬಿಎಂ ಕ್ಲೌಡ್ ಮತ್ತು ಕಾಗ್ನಿಟಿವ್ ಸಾಫ್ಟ್ವೇರ್ ಲ್ಯಾಬ್ಸ್ ವಿಭಾಗದ ಉಪಾಧ್ಯಕ್ಷ ಗೌರವ್ ಶರ್ಮ ಮತ್ತು ಕಾರ್ಯನಿರ್ವಾಹಕ ನಿರ್ದೇಶಕ ಕಿಶೋರ್ ಬಾಲಾಜಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ನಗರ ಸರ್ಕಾರಿ ಶ್ರೀಕೃಷ್ಣರಾಜೇಂದ್ರ ಸಿಲ್ವರ್ ಜ್ಯೂಬಿಲಿ ತಾಂತ್ರಿಕ ಮಹಾ ವಿದ್ಯಾಲಯದ (ಎಂಜಿನಿಯರಿಂಗ್ ಕಾಲೇಜು) ಅಭಿವೃದ್ಧಿಯಲ್ಲಿ ಸಹಭಾಗಿತ್ವ ವಹಿಸುವಂತೆ ಐಬಿಎಂ ಕಂಪನಿಗೆ ಮನವಿ ಮಾಡಲಾಗಿದೆ. ಸಕಾರಾತ್ಮಕ ಸ್ಪಂದನೆ ಲಭಿಸಿದೆ’ ಎಂದು ಮಾಹಿತಿ ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದರು.</p>.<p>ಐಬಿಎಂ ಕಂಪನಿಯ ಹಿರಿಯ ಅಧಿಕಾರಿಗಳ ತಂಡವು ಸಚಿವರನ್ನು ಮಂಗಳವಾರ ಭೇಟಿಮಾಡಿ ಚರ್ಚೆ ನಡೆಸಿತು. ಬಳಿಕ ಸಚಿವರು ಈ ವಿಷಯ ತಿಳಿಸಿದರು.</p>.<p>ಐಬಿಎಂ ದಕ್ಷಿಣ ಏಷ್ಯಾ ವಿಭಾಗದ ವ್ಯವಸ್ಥಾಪಕ ನಿರ್ದೇಶಕ ಸಂದೀಪ್ ಪಟೇಲ್, ‘ಸೈಬರ್ ಭದ್ರತೆಗೆ ಸಂಬಂಧಿಸಿದ ಅತ್ಯಾಧುನಿಕ ಕಮಾಂಡ್ ಸೆಂಟರ್ ಅನ್ನು ಕಂಪನಿಯು ಬೆಂಗಳೂರಿನಲ್ಲಿ ತೆರೆದಿದೆ. ರಾಜ್ಯ ಸರ್ಕಾರವು ತನ್ನ ದತ್ತಾಂಶಗಳ ಸಂರಕ್ಷಣೆಗೆ ಈ ಕೇಂದ್ರವನ್ನು ಬಳಸಿಕೊಳ್ಳಬಹುದು’ ಎಂದರು.</p>.<p>ಸೈಬರ್ ಭದ್ರತಾ ನೀತಿ ರೂಪಿಸುವ ಪ್ರಕ್ರಿಯೆಯಲ್ಲೂ ರಾಜ್ಯ ಸರ್ಕಾರಕ್ಕೆ ಸಹಕಾರ ನೀಡಲು ಸಿದ್ಧ. ಕರ್ನಾಟಕ ಹಾಲು ಮಹಾಮಂಡಳದಲ್ಲೂ (ಕೆಎಂಎಫ್) ಸೈಬರ್ ಭದ್ರತೆಗೆ ನೆರವು ನೀಡಲು ಕಂಪನಿ ಸಿದ್ಧವಿದೆ ಎಂದರು.</p>.<p class="Subhead">ಸಹಭಾಗಿತ್ವ: ರಾಜ್ಯದಲ್ಲಿ 14 ಸರ್ಕಾರಿ ಎಂಜಿನಿಯರಿಂಗ್ ಕಾಲೇಜುಗಳಿವೆ. ಅವುಗಳ ಅಭಿವೃದ್ಧಿಗೂ ನೆರವು ನೀಡಲು ಐಬಿಎಂ ಆಸಕ್ತಿ ಹೊಂದಿದೆ. ರಾಜ್ಯ ಸರ್ಕಾರ ವಿವಿಧೆಡೆ ಸ್ಥಾಪಿಸಿರುವ ಅಟಲ್ ಟಿಂಕರಿಂಗ್ ಲ್ಯಾಬ್ಗಳ ಉನ್ನತೀಕರಣದಲ್ಲೂ ಸಹಭಾಗಿತ್ವ ವಹಿಸಲು ಕಂಪನಿ ಮುಕ್ತ ಮನಸ್ಸು ಹೊಂದಿದೆ ಎಂದರು.</p>.<p>ಐಬಿಎಂ ಕ್ಲೌಡ್ ಮತ್ತು ಕಾಗ್ನಿಟಿವ್ ಸಾಫ್ಟ್ವೇರ್ ಲ್ಯಾಬ್ಸ್ ವಿಭಾಗದ ಉಪಾಧ್ಯಕ್ಷ ಗೌರವ್ ಶರ್ಮ ಮತ್ತು ಕಾರ್ಯನಿರ್ವಾಹಕ ನಿರ್ದೇಶಕ ಕಿಶೋರ್ ಬಾಲಾಜಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>