<p><strong>ಪೀಣ್ಯ ದಾಸರಹಳ್ಳಿ:</strong> ಕ್ಷೇತ್ರದಲ್ಲಿ ಎಲ್ಲೆಲ್ಲಿ ನೀರಿನ ಸಮಸ್ಯೆ ಇದೆಯೋ, ಆ ಬಡಾವಣೆಗಳನ್ಳು ಗುರುತಿಸಿ, ತುರ್ತಾಗಿ ಪರಿಹರಿಸುವಂತೆ ಶಾಸಕ ಎಸ್. ಮುನಿರಾಜು, ಜಲಮಂಡಳಿ ಅಧಿಕಾರಿಗಳಿ ತಾಕೀತು ಮಾಡಿದರು.</p>.<p>‘ನಮ್ಮ ಮನೆಗಳಿಗೆ ಸರಿಯಾಗಿ ನೀರು ಪೂರೈಕೆಯಾಗುತ್ತಿಲ್ಲ’ ಎಂದು ಚಿಕ್ಕಸಂದ್ರದ ನಾಗರಿಕರು ದೂರು ನೀಡಿದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಶಾಸಕರು, ಜಲಮಂಡಳಿಯ ಅಧಿಕಾರಿಗಳನ್ನು ಸ್ಥಳಕ್ಕೆ ಕರೆಸಿ, ಸಾರ್ವಜನಿಕರ ಎದರೇ ಸಮಸ್ಯೆ ಕುರಿತು ಚರ್ಚಿಸಿದರು. ‘ಜನಗಳಿಗೆ ತೊಂದರೆ ಕೊಟ್ಟರೆ ಸಹಿಸಲು ಸಾಧ್ಯವಿಲ್ಲ. ಕೂಡಲೇ ಸಮಸ್ಯೆಯನ್ನು ಸರಿಪಡಿಸಬೇಕು’ ಎಂದು ಜಲಮಂಡಳಿ ಎಇಇ ಐಶ್ವರ್ಯ ಅವರಿಗೆ ಸೂಚಿಸಿದರು. </p>.<p>'ವರ್ಷಗಳಿಂದ ಕಾವೇರಿ ನೀರಿಗಾಗಿ ನಿವಾಸಿಗಳು ಕಾಯುತ್ತಿದ್ದಾರೆ. ಸಾಕಷ್ಟು ನೀರು ಇದ್ದು, ಪೂರೈಸಲು ಎಲ್ಲ ಸೌಲಭ್ಯಗಳಿದ್ದರೂ ಅಧಿಕಾರಿಗಳ ನಿರ್ಲಕ್ಷದಿಂದ ಸಮರ್ಪಕವಾಗಿ ನೀರು ಪೂರೈಕೆಯಾಗುತ್ತಿಲ್ಲ. ಎಲ್ಲಿ ನೀರು ಪೂರೈಕೆ ಸಮಸ್ಯೆ ಇದೆಯೋ ಎಂಬುದನ್ನು ಪರಿಶೀಲಿಸಿ, ಸಮಸ್ಯೆಯನ್ನು ಪರಿಹರಿಸಿ' ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪೀಣ್ಯ ದಾಸರಹಳ್ಳಿ:</strong> ಕ್ಷೇತ್ರದಲ್ಲಿ ಎಲ್ಲೆಲ್ಲಿ ನೀರಿನ ಸಮಸ್ಯೆ ಇದೆಯೋ, ಆ ಬಡಾವಣೆಗಳನ್ಳು ಗುರುತಿಸಿ, ತುರ್ತಾಗಿ ಪರಿಹರಿಸುವಂತೆ ಶಾಸಕ ಎಸ್. ಮುನಿರಾಜು, ಜಲಮಂಡಳಿ ಅಧಿಕಾರಿಗಳಿ ತಾಕೀತು ಮಾಡಿದರು.</p>.<p>‘ನಮ್ಮ ಮನೆಗಳಿಗೆ ಸರಿಯಾಗಿ ನೀರು ಪೂರೈಕೆಯಾಗುತ್ತಿಲ್ಲ’ ಎಂದು ಚಿಕ್ಕಸಂದ್ರದ ನಾಗರಿಕರು ದೂರು ನೀಡಿದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಶಾಸಕರು, ಜಲಮಂಡಳಿಯ ಅಧಿಕಾರಿಗಳನ್ನು ಸ್ಥಳಕ್ಕೆ ಕರೆಸಿ, ಸಾರ್ವಜನಿಕರ ಎದರೇ ಸಮಸ್ಯೆ ಕುರಿತು ಚರ್ಚಿಸಿದರು. ‘ಜನಗಳಿಗೆ ತೊಂದರೆ ಕೊಟ್ಟರೆ ಸಹಿಸಲು ಸಾಧ್ಯವಿಲ್ಲ. ಕೂಡಲೇ ಸಮಸ್ಯೆಯನ್ನು ಸರಿಪಡಿಸಬೇಕು’ ಎಂದು ಜಲಮಂಡಳಿ ಎಇಇ ಐಶ್ವರ್ಯ ಅವರಿಗೆ ಸೂಚಿಸಿದರು. </p>.<p>'ವರ್ಷಗಳಿಂದ ಕಾವೇರಿ ನೀರಿಗಾಗಿ ನಿವಾಸಿಗಳು ಕಾಯುತ್ತಿದ್ದಾರೆ. ಸಾಕಷ್ಟು ನೀರು ಇದ್ದು, ಪೂರೈಸಲು ಎಲ್ಲ ಸೌಲಭ್ಯಗಳಿದ್ದರೂ ಅಧಿಕಾರಿಗಳ ನಿರ್ಲಕ್ಷದಿಂದ ಸಮರ್ಪಕವಾಗಿ ನೀರು ಪೂರೈಕೆಯಾಗುತ್ತಿಲ್ಲ. ಎಲ್ಲಿ ನೀರು ಪೂರೈಕೆ ಸಮಸ್ಯೆ ಇದೆಯೋ ಎಂಬುದನ್ನು ಪರಿಶೀಲಿಸಿ, ಸಮಸ್ಯೆಯನ್ನು ಪರಿಹರಿಸಿ' ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>