<p><strong>ಬೆಂಗಳೂರು</strong>: ‘ಸಂಸದ ಪ್ರಜ್ವಲ್ ರೇವಣ್ಣಗೆ ಸಂಬಂಧಿಸಿದ ಪೆನ್ ಡ್ರೈವ್ ಪ್ರಕರಣದಲ್ಲಿ ಯಾರದ್ದಾದರೂ ಕೈವಾಡ ಕುರಿತಂತೆ ಎಚ್.ಡಿ.ಕುಮಾರಸ್ವಾಮಿ ಅವರ ಬಳಿ ಸಾಕ್ಷ್ಯವಿದ್ದರೆ ಮುಖ್ಯಮಂತ್ರಿಯವರಿಗೆ ನೀಡಲಿ’ ಎಂದು ಸಚಿವ ಸತೀಶ ಜಾರಕಿಹೊಳಿ ಹೇಳಿದರು.</p>.<p>‘ನನ್ನ ಬಳಿಯೂ ಪೆನ್ಡ್ರೈವ್ ಸಾಕ್ಷ್ಯವಿದೆ, ತನಿಖೆ ಮಾಡಿಸುತ್ತಾರಾ’ ಎಂಬ ಕುಮಾರಸ್ವಾಮಿ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಅವರು, ‘ದಾಖಲೆ ನೀಡದೆ, ಮಾತನಾಡುವುದು ಕೆರೆಯಲ್ಲಿ ಮುಳುಗಿಸಿ ಏನೋ ವ್ಯವಹಾರ ಮಾಡಿದರು ಎನ್ನುವ ಗಾದೆ ಮಾತಿನಂತಾಗುತ್ತದೆ’ ಎಂದರು.</p>.<p>ಪೆನ್ ಡ್ರೈವ್ ಪ್ರಕರಣದ ಕುರಿತು ನಿತ್ಯವೂ ಮಾತನಾಡಲು ಆಗುವುದಿಲ್ಲ. ಸಂತ್ರಸ್ತ ಮಹಿಳೆಯರು ನೀಡಿದ ದೂರುಗಳನ್ನು ಆಧರಿಸಿ ವಿಶೇಷ ತನಿಖಾ ತಂಡ (ಎಸ್ಐಟಿ) ತನಿಖೆ ನಡೆಸುತ್ತಿದೆ. ಎಲ್ಲ ಪ್ರಕರಣಗಳನ್ನೂ ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂಬುದು ಸರಿಯಲ್ಲ ಎಂದರು.</p>.<p>‘ಚುನಾವಣೆಯಲ್ಲಿ ಪೆನ್ ಡ್ರೈವ್ ಪ್ರಕರಣದಿಂದ ನಾವು ಲಾಭ ನಿರೀಕ್ಷಿಸಿಲ್ಲ. ನಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳ ಆಧಾರದಲ್ಲಿ ಮತ ಕೇಳಿದ್ದೇವೆ. ಗ್ಯಾರಂಟಿ ಯೋಜನೆಗಳಿಂದ ನಮ್ಮ ಪಕ್ಷಕ್ಕೆ ಅನುಕೂಲ ಆಗುತ್ತದೆ ಎನ್ನುವ ನಿರೀಕ್ಷೆ ಇದೆ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.</p>.<p>‘ಚುನಾವಣೆಯಲ್ಲಿ ಅನುಕೂಲ ಆಗಲಿ ಎಂದು ಉಪ ಮುಖ್ಯಮಂತ್ರಿ ಹುದ್ದೆಗಳ ಕುರಿತು ಪ್ರಸ್ತಾಪಿಸಲಾಗಿತ್ತು. ಈಗ ಚುನಾವಣೆ ಮುಗಿದಿದೆ. ಉಪ ಮುಖ್ಯಮಂತ್ರಿ ಹುದ್ದೆಯ ಕೂಗು ಕೂಡ ಇಲ್ಲ’ ಎಂದು ಜಾರಕಿಹೊಳಿ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಸಂಸದ ಪ್ರಜ್ವಲ್ ರೇವಣ್ಣಗೆ ಸಂಬಂಧಿಸಿದ ಪೆನ್ ಡ್ರೈವ್ ಪ್ರಕರಣದಲ್ಲಿ ಯಾರದ್ದಾದರೂ ಕೈವಾಡ ಕುರಿತಂತೆ ಎಚ್.ಡಿ.ಕುಮಾರಸ್ವಾಮಿ ಅವರ ಬಳಿ ಸಾಕ್ಷ್ಯವಿದ್ದರೆ ಮುಖ್ಯಮಂತ್ರಿಯವರಿಗೆ ನೀಡಲಿ’ ಎಂದು ಸಚಿವ ಸತೀಶ ಜಾರಕಿಹೊಳಿ ಹೇಳಿದರು.</p>.<p>‘ನನ್ನ ಬಳಿಯೂ ಪೆನ್ಡ್ರೈವ್ ಸಾಕ್ಷ್ಯವಿದೆ, ತನಿಖೆ ಮಾಡಿಸುತ್ತಾರಾ’ ಎಂಬ ಕುಮಾರಸ್ವಾಮಿ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಅವರು, ‘ದಾಖಲೆ ನೀಡದೆ, ಮಾತನಾಡುವುದು ಕೆರೆಯಲ್ಲಿ ಮುಳುಗಿಸಿ ಏನೋ ವ್ಯವಹಾರ ಮಾಡಿದರು ಎನ್ನುವ ಗಾದೆ ಮಾತಿನಂತಾಗುತ್ತದೆ’ ಎಂದರು.</p>.<p>ಪೆನ್ ಡ್ರೈವ್ ಪ್ರಕರಣದ ಕುರಿತು ನಿತ್ಯವೂ ಮಾತನಾಡಲು ಆಗುವುದಿಲ್ಲ. ಸಂತ್ರಸ್ತ ಮಹಿಳೆಯರು ನೀಡಿದ ದೂರುಗಳನ್ನು ಆಧರಿಸಿ ವಿಶೇಷ ತನಿಖಾ ತಂಡ (ಎಸ್ಐಟಿ) ತನಿಖೆ ನಡೆಸುತ್ತಿದೆ. ಎಲ್ಲ ಪ್ರಕರಣಗಳನ್ನೂ ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂಬುದು ಸರಿಯಲ್ಲ ಎಂದರು.</p>.<p>‘ಚುನಾವಣೆಯಲ್ಲಿ ಪೆನ್ ಡ್ರೈವ್ ಪ್ರಕರಣದಿಂದ ನಾವು ಲಾಭ ನಿರೀಕ್ಷಿಸಿಲ್ಲ. ನಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳ ಆಧಾರದಲ್ಲಿ ಮತ ಕೇಳಿದ್ದೇವೆ. ಗ್ಯಾರಂಟಿ ಯೋಜನೆಗಳಿಂದ ನಮ್ಮ ಪಕ್ಷಕ್ಕೆ ಅನುಕೂಲ ಆಗುತ್ತದೆ ಎನ್ನುವ ನಿರೀಕ್ಷೆ ಇದೆ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.</p>.<p>‘ಚುನಾವಣೆಯಲ್ಲಿ ಅನುಕೂಲ ಆಗಲಿ ಎಂದು ಉಪ ಮುಖ್ಯಮಂತ್ರಿ ಹುದ್ದೆಗಳ ಕುರಿತು ಪ್ರಸ್ತಾಪಿಸಲಾಗಿತ್ತು. ಈಗ ಚುನಾವಣೆ ಮುಗಿದಿದೆ. ಉಪ ಮುಖ್ಯಮಂತ್ರಿ ಹುದ್ದೆಯ ಕೂಗು ಕೂಡ ಇಲ್ಲ’ ಎಂದು ಜಾರಕಿಹೊಳಿ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>