ಬೆಂಗಳೂರು: ನಗರದ ಬಡ ವಿದ್ಯಾರ್ಥಿಗಳಿಗೆ ಬಿಬಿಎಂಪಿ ವತಿಯಿಂದ ಲ್ಯಾಪ್ಟಾಪ್ ನೀಡುವ ಬಗ್ಗೆ ಕೌನ್ಸಿಲ್ ಸಭೆಯಲ್ಲಿ ಕೈಗೊಂಡ ನಿರ್ಣಯ ಅನುಷ್ಠಾನಗೊಳಿಸದಂತೆ ರಾಜ್ಯ ಸರ್ಕಾರ ಸೂಚನೆ ನೀಡಿರುವುದಾಗಿ ತಿಳಿದುಬಂದಿದೆ. ಲ್ಯಾಪ್ಟಾಪ್ ನೀಡಲು ಸಾಧ್ಯವಾಗದಿದ್ದರೆ, ಶಾಲೆಗಳಲ್ಲಿ ನಡೆಯುತ್ತಿರುವ ಆನ್ಲೈನ್ ಶಿಕ್ಷಣವನ್ನೂ ಸರ್ಕಾರ ಸ್ಥಗಿತಗೊಳಿಸಬೇಕು ಎಂದು ಪಾಲಿಕೆ ವಿರೋಧ ಪಕ್ಷದ ನಾಯಕ ಅಬ್ದುಲ್ ವಾಜಿದ್ ಒತ್ತಾಯಿಸಿದ್ದಾರೆ.