ನೈಸ್ ಸಂಸ್ಥೆಯ ಮೇಲೆ ಸರ್ಕಾರಗಳು ಏಕೆ ಕ್ರಮ ಕೈಗೊಳ್ಳುತ್ತಿಲ್ಲ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಸುಪ್ರೀಂಕೋರ್ಟ್ನಲ್ಲಿ ನೈಸ್ ಸಂಸ್ಥೆ ದಾಖಲಿಸಿದ್ದ ಕೇಸ್ಗಳು ಒಂದೊಂದಾಗಿ ವಜಾ ಆಗುತ್ತಿವೆ. ಸುಪ್ರೀಂಕೋರ್ಟ್ನಲ್ಲಿ ದಾಖಲಿಸಿರುವ ಪ್ರಕರಣಗಳ ಮೇಲೆ ನಿಗಾ ವಹಿಸಲು ಸರ್ಕಾರ ವಕೀಲರನ್ನು ನೇಮಕ ಮಾಡಿದೆ. ಟೋಲ್ ದರ ಸಂಬಂಧ ನೈಸ್ ಸುಪ್ರೀಂಕೋರ್ಟ್ನಿಂದ ತಡೆ ತಂದಿದ್ದಾರೆ. ತಡೆ ತೆರವು ಸಂಬಂಧ ವಕೀಲರೊಂದಿಗೆ ಚರ್ಚೆ ನಡೆಸಲಾಗಿದೆ. ಸಂಪೂರ್ಣ ಸಿಮೆಂಟ್ ರಸ್ತೆ ಮಾಡಿ ಟೋಲ್ ಸಂಗ್ರಹಿಸಬೇಕಿತ್ತು. ಈ ಬಗ್ಗೆ ನೈಸ್ ಸುಪ್ರೀಂಕೋರ್ಟ್ನಲ್ಲಿ ತಡೆ ತಂದಿದ್ದು, ಸದ್ಯದಲ್ಲೇ ತಡೆ ತೆರವಾಗುವ ಸಾಧ್ಯತೆ ಇದೆ ಎಂದು ಸೋಮಶೇಖರ್ ಹೇಳಿದರು.