ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನದಾಸ್ ಮಾತನಾಡಿ, ‘ಕಾರ್ಮಿಕರಷ್ಟೇ ಅಲ್ಲ, ದೇಶದ ಎಲ್ಲ ವರ್ಗದ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ನಿರುದ್ಯೋಗ, ಬಡತನ, ಹಸಿವು, ಅನಾರೋಗ್ಯ, ರೈತರ ಆತ್ಮಹತ್ಯೆ ಅಧಿಕಗೊಳ್ಳುತ್ತಿವೆ. ಕಾರ್ಖಾನೆಗಳು ಮುಚ್ಚಿ ಹೋಗುತ್ತಿವೆ. ಕಾರ್ಮಿಕರು ಕೆಲಸ ಕಳೆದುಕೊಳ್ಳುತ್ತಿದ್ದಾರೆ. ಈ ಸಂಕಷ್ಟಗಳನ್ನು ಪರಿಹರಿಸಿ ಎಂದು ಕೇಳಿದರೆ ಪರಿಹರಿಸಲು ಕ್ರಮ ವಹಿಸುವ ಬದಲು ಮತಾಂಧತೆಯ ಅಪೀಮು ಏರಿಸುತ್ತಿದ್ದಾರೆ. ಭ್ರಮೆಗಳನ್ನು ಮಾರುತ್ತಿದ್ದಾರೆ’ ಎಂದು ಟೀಕಿಸಿದರು.