ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೈತರು ಕೇಳಿದಂತೆ ಪರಿಹಾರ ಕೊಟ್ಟರೆ, ನಾನೇ ₹ 1ಕೋಟಿ ತೆಗೆದುಕೊಳ್ಳಬೇಕು: ಸವದಿ

Last Updated 4 ಅಕ್ಟೋಬರ್ 2019, 4:14 IST
ಅಕ್ಷರ ಗಾತ್ರ

ಬೆಳಗಾವಿ: ‘ರೈತರು ಹೇಳಿದ ಪ್ರಕಾರ ಪರಿಹಾರ ನೀಡಿದರೆ, ನಾನೇ ₹ 1 ಕೋಟಿ ಪರಿಹಾರ ತೆಗೆದುಕೊಳ್ಳಬೇಕಾಗುತ್ತದೆ. ಏಕೆಂದರೆ ನನ್ನ 100 ಎಕರೆ ಬೆಳೆಯೂ ಹಾನಿಯಾಗಿದೆ’ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದರು.

ರೈತ ಮುಖಂಡರು ಮನವಿ ಸಲ್ಲಿಸಿದ ಬಳಿಕ ಪತ್ರಕರ್ತರೊಂದಿಗೆ ಅವರು ಮಾತನಾಡಿದರು.

‘ಎಕರೆಗೆ ₹ 50 ಸಾವಿರ, ₹ 1 ಲಕ್ಷಕೊಡಿ ಎನ್ನುವುದು ರೈತರ ಆಗ್ರಹವಾಗಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರದ ಮಾರ್ಗಸೂಚಿಗಳನ್ನು ತೆಗೆದುಬಿಡಿ ಎನ್ನುತ್ತಾರೆ. ಎಲ್ಲರಿಗೂ ಗರಿಷ್ಠ ಪರಿಹಾರ ಕೊಡಿ ಎನ್ನುತ್ತಾರೆ. ಹಾಗೆಲ್ಲ ಮಾಡಲಾಗುವುದಿಲ್ಲ. ಆದರೆ ಕೇಂದ್ರವು ಕೊಡುವ ಬೆಳೆ ಪರಿಹಾರದದೊಂದಿಗೆ ನಾವೂ ಒಂದಷ್ಟು ಸೇರಿಸಿ ಕೊಡಬೇಕು ಎಂಬ ಚಿಂತನೆ ನಡೆಸುತ್ತಿದ್ದೇವೆ. ರೈತ ಮುಖಂಡರಿಗೆ ಸಮಾಧಾನ ಆಗದಿದ್ದರೆ ನಾನೇನು ಮಾಡಲಾಗುವುದಿಲ್ಲ’ಎಂದು ತಿಳಿಸಿದರು.

‘ಬಳ್ಳಾರಿ, ಬೆಳಗಾವಿ ಸೇರಿದಂತೆ ಯಾವುದೇ ಜಿಲ್ಲೆಗಳ ವಿಭಜನೆ ಸದ್ಯಕ್ಕೆ ಸರ್ಕಾರದ ಮುಂದೆ ಇಲ್ಲ. ಚಿಕ್ಕೋಡಿ, ಅಥಣಿ, ಜಮಖಂಡಿ ಮೊದಲಾದ ಕಡೆಯವರೂ ಪ್ರತ್ತೇಕ ಜಿಲ್ಲೆ ಮಾಡುವಂತೆ ಕೇಳುತ್ತಿದ್ದಾರೆ. ಅಂತಹ ಸಂದರ್ಭ ಬಂದಾಗ ನೋಡೋಣ’ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT