‘ಕರ್ನಾಟಕಕ್ಕೆ 2021ರ ಅಂತ್ಯಕ್ಕೆ ನೀಡಬೇಕಾಗಿರುವ ಜಿಎಸ್ಟಿ ಪರಿಹಾರ ₹ 30,000 ಕೋಟಿ. ಇದನ್ನು ನಿರಾಕರಿಸಿ, ಆರ್ಬಿಐನಿಂದ ಸಾಲ ಎತ್ತಲು ಹೇಳಿರುವ ಕೇಂದ್ರ ಸರ್ಕಾರ, ಜಿಎಸ್ಟಿ ಪರಿಹಾರಕ್ಕಾಗಿಯೇ ಸಂಗ್ರಹಿಸಿರುವ ಸೆಸ್ ದುಡ್ಡನ್ನು ತನ್ನ ಖಾಲಿ ಖಜಾನೆಯನ್ನು ತುಂಬಲು ದುರುಪಯೋಗ ಮಾಡಿಕೊಂಡಿದೆ. ಜಿಎಸ್ಟಿ ಪರಿಹಾರಕ್ಕಾಗಿ 2017-18 ಮತ್ತು 2018-19ರಲ್ಲಿ ಕ್ರಮವಾಗಿ ₹ 56,146 ಕೋಟಿ ಮತ್ತು ₹ 54,275 ಕೋಟಿ ಸೆಸ್ ಹಣ ವರ್ಗಾವಣೆಯಾಗಿದೆ. ಉಳಿಕೆ ಸೆಸ್ ಮೊತ್ತವನ್ನು ದುರುಪಯೋಗ ಮಾಡಿಕೊಂಡಿರುವ ಮೋದಿ ಸರ್ಕಾರದ ಅಕ್ರಮದ ವಿರುದ್ಧ ರಾಜ್ಯ ಸರ್ಕಾರ ಕಾನೂನು ಕ್ರಮಕ್ಕೆ ಮುಂದಾಗಬೇಕು’ ಎಂದೂ
ಆಗ್ರಹಿಸಿದ್ದಾರೆ.