<p>ಪೀಣ್ಯ ದಾಸರಹಳ್ಳಿ: 'ಶ್ರಮ ಪಟ್ಟು ಅಭ್ಯಾಸ ಮಾಡಿದರೆ ಮುಂದೆ ತಕ್ಕ ಪ್ರತಿಫಲ ದೊರಕುವುದು ಖಚಿತ. ಹಾಗಾಗಿ ಚಂಚಲ ಮನಸ್ಸಿಗೆ ಕಡಿವಾಣ ಹಾಕಿ ಏಕಾಗ್ರತೆಯಿಂದ ಓದಿನ ಕಡೆ ಗಮನಹರಿಸಬೇಕು' ಎಂದು ಶಾಸಕ ಎಸ್. ಮುನಿರಾಜು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.</p><p><br> ಕಾಳಸ್ರೀ ನಗರದ ಸರ್ಕಾರಿ ಪದವಿ ಕಾಲೇಜಿನಲ್ಲಿ ಆಯೋಜಿಸಿದ್ದ ಸಾಂಸ್ಕೃತಿಕ, ಕ್ರೀಡೆ, ಎನ್ಎಸ್ಎಸ್, ರೆಡ್ ಕ್ರಾಸ್, ಕನ್ನಡ ಸಂಘ ಮತ್ತು ವಿವಿಧ ಸಮಿತಿಗಳ 2025-26ನೇ ಸಾಲಿನ ಚಟುವಟಿಕೆಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.</p><p><br> ಓದು, ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳುವುದನ್ನು ರೂಡಿಸಿಕೊಳ್ಳಿ. ಪ್ರತಿದಿನ ದಿನಪತ್ರಿಕೆ ಓದುವುದರಿಂದ ಜ್ಞಾನಾರ್ಜನೆ ಹೆಚ್ಚುತ್ತದೆ' ಎಂದರು.</p><p><br> ಕಳೆದ ಸಾಲಿನಲ್ಲಿ ಶೇ 85ಕ್ಕೂ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ನೀಡಲಾಗುವುದು. ವಿದ್ಯಾವಂತ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿದಾಗ ಇನ್ನೂ ಹೆಚ್ಚು ಅಂಕ ಪಡೆಯಬಹುದು ಎಂಬ ಉದ್ದೇಶ ನಮ್ಮದು' ಎಂದು ತಿಳಿಸಿದರು.</p><p><br>ಸರ್ಕಾರಿ ಶಾಲೆಯ ಮಕ್ಕಳು ಉತ್ತಮ ವಿದ್ಯಾಭ್ಯಾಸದಿಂದ ವಂಚಿತರಾಗಬಾರದೆಂದು ಕ್ಷೇತ್ರದ ಎಲ್ಲಾ ಶಾಲೆಗಳಿಗೆ ಸೂರಜ್ ಫೌಂಡೇಷನ್ ವತಿಯಿಂದ ಸಹಾಯ ಮಾಡಲಾಗುತ್ತಿದೆ' ಎಂದು ಹೇಳಿದರು.<br> ಪ್ರಾಂಶುಪಾಲೆ ಅಮೃತಾಕ್ಷಿ ಜಿ, ‘ನಮ್ಮ ಕಾಲೇಜಿಗೆ ಇರುವ ಅನೇಕ ಕೊರತೆಗಳನ್ನು ಶಾಸಕರು ಬಗೆಹರಿಸಿದ್ದಾರೆ, ಇನ್ನು ಕಟ್ಟಡದ ಅವಶ್ಯಕತೆ ಇದೆ. ನೂತನವಾಗಿ ನಿರ್ಮಿಸಿರುವ ಕೊಠಡಿಗಳನ್ನು ನೀಡಿದರೆ ಉಪಯೋಗವಾಗುತ್ತದೆ’ ಎಂದು ಮನವಿ ಮಾಡಿದರು.</p><p><br> ಸಮಾರಂಭದಲ್ಲಿ ಸೂರಜ್ ಫೌಂಡೇಷನ್ ವತಿಯಿಂದ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಬುಕ್ ವಿತರಣೆ, ಪ್ರತಿನಿತ್ಯ ಡೆಕ್ಕನ್ ಹೆರಾಲ್ಡ್ ಮತ್ತು ಪ್ರಜಾವಾಣಿ ದಿನಪತ್ರಿಕೆ ವಿತರಣೆಗೆ ಚಾಲನೆ ನೀಡಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಪೀಣ್ಯ ದಾಸರಹಳ್ಳಿ: 'ಶ್ರಮ ಪಟ್ಟು ಅಭ್ಯಾಸ ಮಾಡಿದರೆ ಮುಂದೆ ತಕ್ಕ ಪ್ರತಿಫಲ ದೊರಕುವುದು ಖಚಿತ. ಹಾಗಾಗಿ ಚಂಚಲ ಮನಸ್ಸಿಗೆ ಕಡಿವಾಣ ಹಾಕಿ ಏಕಾಗ್ರತೆಯಿಂದ ಓದಿನ ಕಡೆ ಗಮನಹರಿಸಬೇಕು' ಎಂದು ಶಾಸಕ ಎಸ್. ಮುನಿರಾಜು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.</p><p><br> ಕಾಳಸ್ರೀ ನಗರದ ಸರ್ಕಾರಿ ಪದವಿ ಕಾಲೇಜಿನಲ್ಲಿ ಆಯೋಜಿಸಿದ್ದ ಸಾಂಸ್ಕೃತಿಕ, ಕ್ರೀಡೆ, ಎನ್ಎಸ್ಎಸ್, ರೆಡ್ ಕ್ರಾಸ್, ಕನ್ನಡ ಸಂಘ ಮತ್ತು ವಿವಿಧ ಸಮಿತಿಗಳ 2025-26ನೇ ಸಾಲಿನ ಚಟುವಟಿಕೆಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.</p><p><br> ಓದು, ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳುವುದನ್ನು ರೂಡಿಸಿಕೊಳ್ಳಿ. ಪ್ರತಿದಿನ ದಿನಪತ್ರಿಕೆ ಓದುವುದರಿಂದ ಜ್ಞಾನಾರ್ಜನೆ ಹೆಚ್ಚುತ್ತದೆ' ಎಂದರು.</p><p><br> ಕಳೆದ ಸಾಲಿನಲ್ಲಿ ಶೇ 85ಕ್ಕೂ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ನೀಡಲಾಗುವುದು. ವಿದ್ಯಾವಂತ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿದಾಗ ಇನ್ನೂ ಹೆಚ್ಚು ಅಂಕ ಪಡೆಯಬಹುದು ಎಂಬ ಉದ್ದೇಶ ನಮ್ಮದು' ಎಂದು ತಿಳಿಸಿದರು.</p><p><br>ಸರ್ಕಾರಿ ಶಾಲೆಯ ಮಕ್ಕಳು ಉತ್ತಮ ವಿದ್ಯಾಭ್ಯಾಸದಿಂದ ವಂಚಿತರಾಗಬಾರದೆಂದು ಕ್ಷೇತ್ರದ ಎಲ್ಲಾ ಶಾಲೆಗಳಿಗೆ ಸೂರಜ್ ಫೌಂಡೇಷನ್ ವತಿಯಿಂದ ಸಹಾಯ ಮಾಡಲಾಗುತ್ತಿದೆ' ಎಂದು ಹೇಳಿದರು.<br> ಪ್ರಾಂಶುಪಾಲೆ ಅಮೃತಾಕ್ಷಿ ಜಿ, ‘ನಮ್ಮ ಕಾಲೇಜಿಗೆ ಇರುವ ಅನೇಕ ಕೊರತೆಗಳನ್ನು ಶಾಸಕರು ಬಗೆಹರಿಸಿದ್ದಾರೆ, ಇನ್ನು ಕಟ್ಟಡದ ಅವಶ್ಯಕತೆ ಇದೆ. ನೂತನವಾಗಿ ನಿರ್ಮಿಸಿರುವ ಕೊಠಡಿಗಳನ್ನು ನೀಡಿದರೆ ಉಪಯೋಗವಾಗುತ್ತದೆ’ ಎಂದು ಮನವಿ ಮಾಡಿದರು.</p><p><br> ಸಮಾರಂಭದಲ್ಲಿ ಸೂರಜ್ ಫೌಂಡೇಷನ್ ವತಿಯಿಂದ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಬುಕ್ ವಿತರಣೆ, ಪ್ರತಿನಿತ್ಯ ಡೆಕ್ಕನ್ ಹೆರಾಲ್ಡ್ ಮತ್ತು ಪ್ರಜಾವಾಣಿ ದಿನಪತ್ರಿಕೆ ವಿತರಣೆಗೆ ಚಾಲನೆ ನೀಡಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>