ಬೆಂಗಳೂರು: ಕೊರೊನಾ ವೈರಾಣು ಹರಡುವಿಕೆ ತಡೆಯಲು ವ್ಯಾಪಕ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿರುವ ಸರ್ಕಾರ, ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಆಯುಕ್ತ ಹುದ್ದೆಗೆ ಐಎಫ್ಎಸ್ ಅಧಿಕಾರಿ ಮನೋಜ್ ಆರ್. ಅವರನ್ನು ನೇಮಿಸಿದೆ.
ಕೊರೊನಾ ತಡೆಗೆ ಪ್ರತ್ಯೇಕ ಕಾರ್ಯಪಡೆ ರಚಿಸಿದ ಬಳಿಕ, ವಿಪತ್ತು ನಿರ್ವಹಣಾ ಪ್ರಾಧಿಕಾರವನ್ನು ರಚಿಸಲಾಗಿದೆ.
ಇಸ್ರೇಲ್ ತಂತ್ರಜ್ಞಾನ ಆಧಾರಿತ ಕೃಷಿ ಮಿಷನ್ನ ಯೋಜನಾ ನಿರ್ದೇಶಕರಾಗಿದ್ದ ಮನೋಜ್ ಅವರನ್ನು ಆಯುಕ್ತ ಹುದ್ದೆಗೆ ಸರ್ಕಾರ ವರ್ಗಾವಣೆ ಮಾಡಿದೆ.