<p><strong>ಬೆಂಗಳೂರು</strong>: ‘ತೋಟಗಾರಿಕೆ ಬೆಳೆಗಳಲ್ಲಿ ಆಕ್ರಮಣಕಾರಿ ಕೀಟಗಳ ಮೇಲೆ ನಿಗಾ ಇಡುವುದರ ಜೊತೆಗೆ ಸಮಗ್ರ ಕೀಟ ನಿರ್ವಹಣೆಗೆ ಹೆಚ್ಚಿನ ಒತ್ತು ನೀಡಬೇಕು’ ಎಂದು ರಾಷ್ಟ್ರೀಯ ಕೃಷಿ ಕೀಟ ಸಂಪನ್ಮೂಲ ಸಂಸ್ಥೆ(ಎನ್ಬಿಎಐಆರ್) ನಿರ್ದೇಶಕ ಎಸ್.ಎನ್.ಸುಶೀಲ್, ವಿಜ್ಞಾನಿಗಳಿಗೆ ಸಲಹೆ ನೀಡಿದರು.</p>.<p>ಹೆಸರಘಟ್ಟದ ಭಾರತೀಯ ತೋಟಗಾರಿಕೆ ಸಂಶೋಧನಾ ಸಂಸ್ಥೆ (ಐಐಎಚ್ಆರ್), ತೋಟಗಾರಿಕಾ ಪರಿಸರದಲ್ಲಿ ಕೀಟ ನಿರ್ವಹಣೆ ಸುಧಾರಣಾ ಸಂಘದ(ಎಎಪಿಎಂಎಚ್ಇ) ಸಹಯೋಗದಲ್ಲಿ ಬುಧವಾರದಿಂದ ಐಐಎಚ್ಆರ್ ಆವರಣದಲ್ಲಿ ಆರಂಭವಾದ ಮೂರು ದಿನಗಳ ‘ತೋಟಗಾರಿಕೆಯಲ್ಲಿ ಸಸ್ಯ ಸಂರಕ್ಷಣೆ ಕುರಿತ ಅಂತರರಾಷ್ಟ್ರೀಯ ಸಮ್ಮೇಳನದಲ್ಲಿ ಅವರು ಮಾತನಾಡಿದರು.</p>.<p>ಸುಸ್ಥಿರ ತೋಟಗಾರಿಕೆಯಲ್ಲಿ ಸಸ್ಯ ಸಂರಕ್ಷಣೆಯ ಮಹತ್ವವನ್ನು ವಿವರಿಸಿದ ಅವರು, ಸಮಗ್ರ ಕೀಟ ನಿರ್ವಹಣೆಯ ವಿಧಾನಗಳನ್ನು ಅಳವಡಿಸಿಕೊಳ್ಳುವಂತೆ ತಿಳಿಸಿದರು.</p>.<p>ತಮಿಳುನಾಡಿನ ತಿರುಚ್ಚಿಯ ಐಸಿಎಆರ್–ಎನ್ಸಿಆರ್ಬಿ ನಿರ್ದೇಶಕ ಆರ್.ಸೆಲ್ವರಾಜನ್, ‘ಭಾರತದಲ್ಲಿ ತೋಟಗಾರಿಕೆ ಬೆಳೆ ಉತ್ಪಾದನೆ ವಾರ್ಷಿಕ 350 ದಶಲಕ್ಷ ಟನ್ಗಳಿಗೆ ತಲುಪಿದೆ. ರೈತರಿಗೆ ಹೆಚ್ಚಿನ ಲಾಭ ದೊರಕಿಸಿಕೊಡಲು ಉತ್ಪನ್ನಗಳನ್ನು ಬೇರೆ ದೇಶಗಳಿಗೆ ರಫ್ತು ಮಾಡಲಾಗುತ್ತಿದೆ’ ಎಂದು ತಿಳಿಸಿದರು.</p>.<p>ಐಸಿಎಆರ್–ತೋಟಗಾರಿಕೆ ವಿಜ್ಞಾನ ವಿಭಾಗದ ನಿವೃತ್ತ ಡಿಡಿಜಿ ಎನ್.ಕೆ.ಕೃಷ್ಣಕುಮಾರ್, ‘ತೋಟಗಾರಿಕೆ ಪರಿಸರ ವ್ಯವಸ್ಥೆಯನ್ನು ಕೀಟ ಮತ್ತು ರೋಗಗಳಿಂದ ರಕ್ಷಿಸಲು ಸಸ್ಯ ಸಂರಕ್ಷಣಾ ಕ್ಷೇತ್ರದ ವಿಜ್ಞಾನಿಗಳು ಹೊಸ ಆವಿಷ್ಕಾರಗಳೊಂದಿಗೆ, ಇನ್ನಷ್ಟು ಪ್ರಯತ್ನಗಳನ್ನು ಮಾಡಬೇಕು’ ಎಂದು ಅಭಿಪ್ರಾಯಪಟ್ಟರು.</p>.<p>ಐಐಎಚ್ಆರ್ ನಿರ್ದೇಶಕ ಟಿ.ಕೆ.ಬೆಹರಾ, ಸಮ್ಮೇಳನದ ಸಂಘಟನಾ ಕಾರ್ಯದರ್ಶಿ ವಿ.ಶ್ರೀಧರ್ ಮಾತನಾಡಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ತೋಟಗಾರಿಕೆ ಬೆಳೆಗಳಲ್ಲಿ ಆಕ್ರಮಣಕಾರಿ ಕೀಟಗಳ ಮೇಲೆ ನಿಗಾ ಇಡುವುದರ ಜೊತೆಗೆ ಸಮಗ್ರ ಕೀಟ ನಿರ್ವಹಣೆಗೆ ಹೆಚ್ಚಿನ ಒತ್ತು ನೀಡಬೇಕು’ ಎಂದು ರಾಷ್ಟ್ರೀಯ ಕೃಷಿ ಕೀಟ ಸಂಪನ್ಮೂಲ ಸಂಸ್ಥೆ(ಎನ್ಬಿಎಐಆರ್) ನಿರ್ದೇಶಕ ಎಸ್.ಎನ್.ಸುಶೀಲ್, ವಿಜ್ಞಾನಿಗಳಿಗೆ ಸಲಹೆ ನೀಡಿದರು.</p>.<p>ಹೆಸರಘಟ್ಟದ ಭಾರತೀಯ ತೋಟಗಾರಿಕೆ ಸಂಶೋಧನಾ ಸಂಸ್ಥೆ (ಐಐಎಚ್ಆರ್), ತೋಟಗಾರಿಕಾ ಪರಿಸರದಲ್ಲಿ ಕೀಟ ನಿರ್ವಹಣೆ ಸುಧಾರಣಾ ಸಂಘದ(ಎಎಪಿಎಂಎಚ್ಇ) ಸಹಯೋಗದಲ್ಲಿ ಬುಧವಾರದಿಂದ ಐಐಎಚ್ಆರ್ ಆವರಣದಲ್ಲಿ ಆರಂಭವಾದ ಮೂರು ದಿನಗಳ ‘ತೋಟಗಾರಿಕೆಯಲ್ಲಿ ಸಸ್ಯ ಸಂರಕ್ಷಣೆ ಕುರಿತ ಅಂತರರಾಷ್ಟ್ರೀಯ ಸಮ್ಮೇಳನದಲ್ಲಿ ಅವರು ಮಾತನಾಡಿದರು.</p>.<p>ಸುಸ್ಥಿರ ತೋಟಗಾರಿಕೆಯಲ್ಲಿ ಸಸ್ಯ ಸಂರಕ್ಷಣೆಯ ಮಹತ್ವವನ್ನು ವಿವರಿಸಿದ ಅವರು, ಸಮಗ್ರ ಕೀಟ ನಿರ್ವಹಣೆಯ ವಿಧಾನಗಳನ್ನು ಅಳವಡಿಸಿಕೊಳ್ಳುವಂತೆ ತಿಳಿಸಿದರು.</p>.<p>ತಮಿಳುನಾಡಿನ ತಿರುಚ್ಚಿಯ ಐಸಿಎಆರ್–ಎನ್ಸಿಆರ್ಬಿ ನಿರ್ದೇಶಕ ಆರ್.ಸೆಲ್ವರಾಜನ್, ‘ಭಾರತದಲ್ಲಿ ತೋಟಗಾರಿಕೆ ಬೆಳೆ ಉತ್ಪಾದನೆ ವಾರ್ಷಿಕ 350 ದಶಲಕ್ಷ ಟನ್ಗಳಿಗೆ ತಲುಪಿದೆ. ರೈತರಿಗೆ ಹೆಚ್ಚಿನ ಲಾಭ ದೊರಕಿಸಿಕೊಡಲು ಉತ್ಪನ್ನಗಳನ್ನು ಬೇರೆ ದೇಶಗಳಿಗೆ ರಫ್ತು ಮಾಡಲಾಗುತ್ತಿದೆ’ ಎಂದು ತಿಳಿಸಿದರು.</p>.<p>ಐಸಿಎಆರ್–ತೋಟಗಾರಿಕೆ ವಿಜ್ಞಾನ ವಿಭಾಗದ ನಿವೃತ್ತ ಡಿಡಿಜಿ ಎನ್.ಕೆ.ಕೃಷ್ಣಕುಮಾರ್, ‘ತೋಟಗಾರಿಕೆ ಪರಿಸರ ವ್ಯವಸ್ಥೆಯನ್ನು ಕೀಟ ಮತ್ತು ರೋಗಗಳಿಂದ ರಕ್ಷಿಸಲು ಸಸ್ಯ ಸಂರಕ್ಷಣಾ ಕ್ಷೇತ್ರದ ವಿಜ್ಞಾನಿಗಳು ಹೊಸ ಆವಿಷ್ಕಾರಗಳೊಂದಿಗೆ, ಇನ್ನಷ್ಟು ಪ್ರಯತ್ನಗಳನ್ನು ಮಾಡಬೇಕು’ ಎಂದು ಅಭಿಪ್ರಾಯಪಟ್ಟರು.</p>.<p>ಐಐಎಚ್ಆರ್ ನಿರ್ದೇಶಕ ಟಿ.ಕೆ.ಬೆಹರಾ, ಸಮ್ಮೇಳನದ ಸಂಘಟನಾ ಕಾರ್ಯದರ್ಶಿ ವಿ.ಶ್ರೀಧರ್ ಮಾತನಾಡಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>