<p><strong>ಬೆಂಗಳೂರು</strong>: ನಗರದ ಅಂತರರರಾಷ್ಟ್ರೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆಯ (ಐಐಐಟಿ–ಬಿ) ಘಟಿಕೋತ್ಸವ ಭಾನುವಾರ ಆನ್ಲೈನ್ನಲ್ಲಿ ನಡೆಯಿತು. ಸಂಸ್ಥೆಯ ಇತಿಹಾಸದಲ್ಲಿಯೇ ಅತಿದೊಡ್ಡ ಘಟಿಕೋತ್ಸವ ಎನ್ನಲಾದ ಈ ಕಾರ್ಯಕ್ರಮದಲ್ಲಿ, 2,800 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಯಿತು.</p>.<p>ದತ್ತಾಂಶ ವಿಜ್ಞಾನ, ಮಷಿನ್ ಲರ್ನಿಂಗ್ (ಎಂಎಲ್) ಹಾಗೂ ಕೃತಕ ಬುದ್ಧಿಮತ್ತೆ ಮತ್ತು ತಂತ್ರಾಂಶ ಅಭಿವೃದ್ಧಿ ವಿಷಯದಲ್ಲಿ ಸ್ನಾತಕೋತ್ತರ ಡಿಪ್ಲೊಮಾ ಕೋರ್ಸ್ ಪಡೆದವರಿಗೆ ಪ್ರಮಾಣಪತ್ರ ನೀಡಲಾಯಿತು. ನಿರ್ದಿಷ್ಟ ಕೋರ್ಸ್ಗಳಲ್ಲಿ ಅತಿ ಹೆಚ್ಚು ಅಂಕಗಳಿಸಿದ 20 ವಿದ್ಯಾರ್ಥಿಗಳು ವಿಶೇಷ ಪುರಸ್ಕಾರ ಪಡೆದರು.</p>.<p>ಇನ್ಫೋಸಿಸ್ನ ಮುಖ್ಯ ಕಾರ್ಯಕಾರಿ ಅಧಿಕಾರಿ ಪ್ರವೀಣ್ ರಾವ್, ‘ಸಂದರ್ಭಕ್ಕೆ ತಕ್ಕಂತೆ ಕಂಪನಿಗಳು ಬದಲಾಗುತ್ತಿರುವ ಈ ಕಾಲದಲ್ಲಿ, ವಿದ್ಯಾರ್ಥಿಗಳು ಕೂಡ ಪ್ರಸ್ತುತ ಸ್ಥಿತಿಗೆ ಒಗ್ಗಿಕೊಳ್ಳಬೇಕಾಗಿದೆ. ಕಡಿಮೆ ಅವಧಿಯಲ್ಲಿ ಹೊಸ ಕೌಶಲಗಳನ್ನು ಕಲಿಯಬೇಕಾಗಿದೆ’ ಎಂದರು.</p>.<p>ಐಐಐಟಿ–ಬಿ ನಿರ್ದೇಶಕ ಪ್ರೊ. ಎಸ್. ಸಡಗೋಪನ್, ‘ತಾಂತ್ರಿಕ ವಿದ್ಯಾರ್ಥಿಗಳಲ್ಲಿ ಅನ್ವೇಷಣಾ ಮನೋಭಾವ ಬೆಳೆಸುವಲ್ಲಿ ಸಂಸ್ಥೆಯು ಶ್ರಮಿಸುತ್ತಿದೆ. ಹೊಸ ಕಾಲದ ಸಾಧನಗಳೊಂದಿಗೆ ಶಿಕ್ಷಣವನ್ನು ಪಡೆಯಲು ಅಪ್ಗ್ರ್ಯಾಡ್ ಹೊಸ ವೇದಿಕೆ ಕಲ್ಪಿಸಿದೆ. ಭವಿಷ್ಯಕ್ಕೆ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸಲು ಶ್ರಮಿಸುತ್ತಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ನಗರದ ಅಂತರರರಾಷ್ಟ್ರೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆಯ (ಐಐಐಟಿ–ಬಿ) ಘಟಿಕೋತ್ಸವ ಭಾನುವಾರ ಆನ್ಲೈನ್ನಲ್ಲಿ ನಡೆಯಿತು. ಸಂಸ್ಥೆಯ ಇತಿಹಾಸದಲ್ಲಿಯೇ ಅತಿದೊಡ್ಡ ಘಟಿಕೋತ್ಸವ ಎನ್ನಲಾದ ಈ ಕಾರ್ಯಕ್ರಮದಲ್ಲಿ, 2,800 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಯಿತು.</p>.<p>ದತ್ತಾಂಶ ವಿಜ್ಞಾನ, ಮಷಿನ್ ಲರ್ನಿಂಗ್ (ಎಂಎಲ್) ಹಾಗೂ ಕೃತಕ ಬುದ್ಧಿಮತ್ತೆ ಮತ್ತು ತಂತ್ರಾಂಶ ಅಭಿವೃದ್ಧಿ ವಿಷಯದಲ್ಲಿ ಸ್ನಾತಕೋತ್ತರ ಡಿಪ್ಲೊಮಾ ಕೋರ್ಸ್ ಪಡೆದವರಿಗೆ ಪ್ರಮಾಣಪತ್ರ ನೀಡಲಾಯಿತು. ನಿರ್ದಿಷ್ಟ ಕೋರ್ಸ್ಗಳಲ್ಲಿ ಅತಿ ಹೆಚ್ಚು ಅಂಕಗಳಿಸಿದ 20 ವಿದ್ಯಾರ್ಥಿಗಳು ವಿಶೇಷ ಪುರಸ್ಕಾರ ಪಡೆದರು.</p>.<p>ಇನ್ಫೋಸಿಸ್ನ ಮುಖ್ಯ ಕಾರ್ಯಕಾರಿ ಅಧಿಕಾರಿ ಪ್ರವೀಣ್ ರಾವ್, ‘ಸಂದರ್ಭಕ್ಕೆ ತಕ್ಕಂತೆ ಕಂಪನಿಗಳು ಬದಲಾಗುತ್ತಿರುವ ಈ ಕಾಲದಲ್ಲಿ, ವಿದ್ಯಾರ್ಥಿಗಳು ಕೂಡ ಪ್ರಸ್ತುತ ಸ್ಥಿತಿಗೆ ಒಗ್ಗಿಕೊಳ್ಳಬೇಕಾಗಿದೆ. ಕಡಿಮೆ ಅವಧಿಯಲ್ಲಿ ಹೊಸ ಕೌಶಲಗಳನ್ನು ಕಲಿಯಬೇಕಾಗಿದೆ’ ಎಂದರು.</p>.<p>ಐಐಐಟಿ–ಬಿ ನಿರ್ದೇಶಕ ಪ್ರೊ. ಎಸ್. ಸಡಗೋಪನ್, ‘ತಾಂತ್ರಿಕ ವಿದ್ಯಾರ್ಥಿಗಳಲ್ಲಿ ಅನ್ವೇಷಣಾ ಮನೋಭಾವ ಬೆಳೆಸುವಲ್ಲಿ ಸಂಸ್ಥೆಯು ಶ್ರಮಿಸುತ್ತಿದೆ. ಹೊಸ ಕಾಲದ ಸಾಧನಗಳೊಂದಿಗೆ ಶಿಕ್ಷಣವನ್ನು ಪಡೆಯಲು ಅಪ್ಗ್ರ್ಯಾಡ್ ಹೊಸ ವೇದಿಕೆ ಕಲ್ಪಿಸಿದೆ. ಭವಿಷ್ಯಕ್ಕೆ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸಲು ಶ್ರಮಿಸುತ್ತಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>