<p><strong>ಬೆಂಗಳೂರು:</strong> ಭಾರತೀಯ ವಿಜ್ಞಾನ ಸಂಸ್ಥೆಯು (ಐಐಎಸ್ಸಿ) ಶಿಕ್ಷಣ ಶುಲ್ಕ ಹೆಚ್ಚಿಸಿರುವುದನ್ನು ಖಂಡಿಸಿ ಎಐಡಿಎಸ್ಒ ಸದಸ್ಯರು ಮಲ್ಲೇಶ್ವರದ ಕುವೆಂಪು ಪ್ರತಿಮೆಯ ಬಳಿ ಭಾನುವಾರ ಪ್ರತಿಭಟನೆ ನಡೆಸಿದರು.</p>.<p>2026-27ನೇ ಶೈಕ್ಷಣಿಕ ಸಾಲಿನಿಂದ ಅನ್ವಯವಾಗುವಂತೆ ಪದವಿ ಹಂತದ ‘ಬ್ಯಾಚುಲರ್ ಆಫ್ ಸೈನ್ಸ್ (ಬಿ.ಎಸ್) ಕೋರ್ಸ್’ನ ಶುಲ್ಕವನ್ನು ₹10,000ರಿಂದ ₹80,000ಕ್ಕೆ ಏರಿಕೆ ಮಾಡಿದೆ. ಇದು ಉನ್ನತ ಶಿಕ್ಷಣದ ಲಭ್ಯತೆಯ ಮೇಲಿನ ನೇರ ದಾಳಿಯಾಗಿದೆ ಎಂದು ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದರು.</p>.<p>ಎಐಡಿಎಸ್ಒ ರಾಜ್ಯ ಖಜಾಂಚಿ ಸುಭಾಷ್ ಬಿ.ಜೆ ಮಾತನಾಡಿ, ‘ಶುಲ್ಕ ಹೆಚ್ಚಳವು ಬಡ ಮತ್ತು ಮಧ್ಯಮ ವರ್ಗದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ವಿಜ್ಞಾನ ಸಂಸ್ಥೆಯ ಬಾಗಿಲನ್ನು ಶಾಶ್ವತವಾಗಿ ಮುಚ್ಚುವಂತೆ ಮಾಡುತ್ತದೆ’ ಎಂದು ಆತಂಕ ವ್ಯಕ್ತಪಡಿಸಿದರು.</p>.<p>‘ಈ ಶೈಕ್ಷಣಿಕ ವರ್ಷದಲ್ಲಿ ಸ್ನಾತಕೋತ್ತರ ಮತ್ತು ಪಿಎಚ್.ಡಿ ಕೋರ್ಸ್ಗಳ ಶುಲ್ಕವನ್ನು ಪರಿಷ್ಕರಿಸುವ ಸಂಸ್ಥೆಯ ಯೋಜನೆಯು ದೇಶದ ಕೈಗೆಟುಕುವ ಸಂಶೋಧನಾ ವ್ಯವಸ್ಥೆಯನ್ನೇ ಧ್ವಂಸಗೊಳಿಸಲಿದೆ. ಶಿಕ್ಷಣ ಎಂಬುದು ಹಕ್ಕು, ಅದು ಕೇವಲ ಶ್ರೀಮಂತರ ಐಷಾರಾಮಿ ವಸ್ತುವಾಗಬಾರದು’ ಎಂದರು.</p>.<p>‘ಹೆಚ್ಚಿಸಿರುವ ಶುಲ್ಕವನ್ನು ತಕ್ಷಣವೇ ಹಿಂಪಡೆಯಬೇಕು’ ಎಂದು ಒತ್ತಾಯಿಸಿದ ಪ್ರತಿಭಟನಕಾರರು, ವಿದ್ಯಾರ್ಥಿಗಳಿಂದ ಹಣ ವಸೂಲಿ ಮಾಡುವ ಬದಲು ಸಂಶೋಧನಾ ಸಂಸ್ಥೆಗಳಿಗೆ ಹೆಚ್ಚಿನ ಅನುದಾನ ನೀಡುವಂತೆ ಕೇಂದ್ರ ಸರ್ಕಾರವನ್ನು ಆಗ್ರಹಿಸಿದರು.</p>.<p>ರಾಜ್ಯ ಕಾರ್ಯದರ್ಶಿ ಅಜಯ್ ಕಾಮತ್, ಉಪಾಧ್ಯಕ್ಷರಾದ ಅಪೂರ್ವ ಸಿ.ಎಂ. ಮತ್ತು ಚಂದ್ರಕಲಾ, ಜಿಲ್ಲಾ ಕಾರ್ಯದರ್ಶಿ ಕಲ್ಯಾಣ್ ಕುಮಾರ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಭಾರತೀಯ ವಿಜ್ಞಾನ ಸಂಸ್ಥೆಯು (ಐಐಎಸ್ಸಿ) ಶಿಕ್ಷಣ ಶುಲ್ಕ ಹೆಚ್ಚಿಸಿರುವುದನ್ನು ಖಂಡಿಸಿ ಎಐಡಿಎಸ್ಒ ಸದಸ್ಯರು ಮಲ್ಲೇಶ್ವರದ ಕುವೆಂಪು ಪ್ರತಿಮೆಯ ಬಳಿ ಭಾನುವಾರ ಪ್ರತಿಭಟನೆ ನಡೆಸಿದರು.</p>.<p>2026-27ನೇ ಶೈಕ್ಷಣಿಕ ಸಾಲಿನಿಂದ ಅನ್ವಯವಾಗುವಂತೆ ಪದವಿ ಹಂತದ ‘ಬ್ಯಾಚುಲರ್ ಆಫ್ ಸೈನ್ಸ್ (ಬಿ.ಎಸ್) ಕೋರ್ಸ್’ನ ಶುಲ್ಕವನ್ನು ₹10,000ರಿಂದ ₹80,000ಕ್ಕೆ ಏರಿಕೆ ಮಾಡಿದೆ. ಇದು ಉನ್ನತ ಶಿಕ್ಷಣದ ಲಭ್ಯತೆಯ ಮೇಲಿನ ನೇರ ದಾಳಿಯಾಗಿದೆ ಎಂದು ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದರು.</p>.<p>ಎಐಡಿಎಸ್ಒ ರಾಜ್ಯ ಖಜಾಂಚಿ ಸುಭಾಷ್ ಬಿ.ಜೆ ಮಾತನಾಡಿ, ‘ಶುಲ್ಕ ಹೆಚ್ಚಳವು ಬಡ ಮತ್ತು ಮಧ್ಯಮ ವರ್ಗದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ವಿಜ್ಞಾನ ಸಂಸ್ಥೆಯ ಬಾಗಿಲನ್ನು ಶಾಶ್ವತವಾಗಿ ಮುಚ್ಚುವಂತೆ ಮಾಡುತ್ತದೆ’ ಎಂದು ಆತಂಕ ವ್ಯಕ್ತಪಡಿಸಿದರು.</p>.<p>‘ಈ ಶೈಕ್ಷಣಿಕ ವರ್ಷದಲ್ಲಿ ಸ್ನಾತಕೋತ್ತರ ಮತ್ತು ಪಿಎಚ್.ಡಿ ಕೋರ್ಸ್ಗಳ ಶುಲ್ಕವನ್ನು ಪರಿಷ್ಕರಿಸುವ ಸಂಸ್ಥೆಯ ಯೋಜನೆಯು ದೇಶದ ಕೈಗೆಟುಕುವ ಸಂಶೋಧನಾ ವ್ಯವಸ್ಥೆಯನ್ನೇ ಧ್ವಂಸಗೊಳಿಸಲಿದೆ. ಶಿಕ್ಷಣ ಎಂಬುದು ಹಕ್ಕು, ಅದು ಕೇವಲ ಶ್ರೀಮಂತರ ಐಷಾರಾಮಿ ವಸ್ತುವಾಗಬಾರದು’ ಎಂದರು.</p>.<p>‘ಹೆಚ್ಚಿಸಿರುವ ಶುಲ್ಕವನ್ನು ತಕ್ಷಣವೇ ಹಿಂಪಡೆಯಬೇಕು’ ಎಂದು ಒತ್ತಾಯಿಸಿದ ಪ್ರತಿಭಟನಕಾರರು, ವಿದ್ಯಾರ್ಥಿಗಳಿಂದ ಹಣ ವಸೂಲಿ ಮಾಡುವ ಬದಲು ಸಂಶೋಧನಾ ಸಂಸ್ಥೆಗಳಿಗೆ ಹೆಚ್ಚಿನ ಅನುದಾನ ನೀಡುವಂತೆ ಕೇಂದ್ರ ಸರ್ಕಾರವನ್ನು ಆಗ್ರಹಿಸಿದರು.</p>.<p>ರಾಜ್ಯ ಕಾರ್ಯದರ್ಶಿ ಅಜಯ್ ಕಾಮತ್, ಉಪಾಧ್ಯಕ್ಷರಾದ ಅಪೂರ್ವ ಸಿ.ಎಂ. ಮತ್ತು ಚಂದ್ರಕಲಾ, ಜಿಲ್ಲಾ ಕಾರ್ಯದರ್ಶಿ ಕಲ್ಯಾಣ್ ಕುಮಾರ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>