<p><strong>ಬೆಂಗಳೂರು:</strong> ಭಾರತೀಯ ವಿಜ್ಞಾನ ಸಂಸ್ಥೆಯ ಆವರಣದಲ್ಲಿರುವ ಟಾಟಾ ಇನ್ಸ್ಟಿಟ್ಯೂಟ್ನ ಕಬ್ಬಿಣದ ಗೇಟ್ ಕಳಚಿ ಬಿದ್ದು ಭದ್ರತಾ ಸಿಬ್ಬಂದಿ ಮೃತಪಟ್ಟ ಘಟನೆಭಾನುವಾರ ಮಧ್ಯಾಹ್ನ ನಡೆದಿದೆ.</p>.<p>ಒಡಿಶಾದ ಗೌತಮ್ ಬಿಸ್ವಾಲ್ (24) ಮೃತ ವ್ಯಕ್ತಿ. ಘಟನೆಯಲ್ಲಿ ಬಿಹಾರದ ಅನಿಲ್ ಕುಮಾರ್ ಮತ್ತು ಒಡಿಶಾದ ವೈ. ನಾಯಕ್ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಇಬ್ಬರನ್ನೂ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.</p>.<p>ಮೂರು ವರ್ಷಗಳ ಹಿಂದೆ ನಗರಕ್ಕೆಬಂದಿದ್ದ ಬಿಸ್ವಾಲ್, ಖಾಸಗಿ ಸೆಕ್ಯೂರಿಟಿಏಜೆನ್ಸಿ ಅಡಿಯಲ್ಲಿ ಕೆಲಸ ಮಾಡುತ್ತಿದ್ದರು. ಈ ಏಜೆನ್ಸಿ ಅವರನ್ನು ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ ಕೆಲಸಕ್ಕೆ ನಿಯೋಜಿಸಿತ್ತು.</p>.<p>ಆರಡಿ ಎತ್ತರ ಮತ್ತು 15 ಅಡಿ ಅಗಲದ 500 ಕೆ.ಜಿ. ತೂಕದ ಈ ಗೇಟ್ನ್ನು ನಾಲ್ಕು ತಿಂಗಳ ಹಿಂದೆ ಅಳವಡಿಸಲಾಗಿತ್ತು. ಭಾನುವಾರ ಬೆಳಿಗ್ಗೆ ಆರು ಗಂಟೆಗೆ ಕೆಲಸಕ್ಕೆ ಹಾಜರಾಗಿದ್ದ ಬಿಸ್ವಾಲ್, ಮಧ್ಯಾಹ್ನ 1 ಗಂಟೆ ಸುಮಾರಿಗೆ ಅಲ್ಲಿಗೆ ಕಾರಿನಲ್ಲಿ ಬಂದಿದ್ದ ಸಂದರ್ಶಕರೊಬ್ಬರಿಗೆಗೇಟ್ ತೆಗೆಯುತ್ತಿದ್ದಂತೆ, ಅದು ಕಳಚಿ ಬಿದ್ದಿದೆ. ಇದನ್ನು ತಕ್ಷಣವೇ ಗಮನಿಸಿದ ಆಟೋ ಚಾಲಕರೊಬ್ಬರು ಸ್ಥಳಕ್ಕೆ ಧಾವಿಸಿದ್ದಾರೆ. ಆದರೆ, ಗಂಭೀರವಾಗಿ ಗಾಯಗೊಂಡಿದ್ದ ಬಿಸ್ವಾಲ್ ಸ್ಥಳದಲ್ಲೇ ಮೃತಪಟ್ಟಿದ್ದರು.</p>.<p>‘ಅವಿವಾಹಿತರಾಗಿರುವ ಬಿಸ್ವಾಲ್ ಅವರ ಕುಟುಂಬ ಒಡಿಶಾದಲ್ಲಿದೆ. ಅವರಿಗೆ ಮಾಹಿತಿ ನೀಡಲಾಗಿದ್ದು, ಮೃತದೇಹ ಪಡೆಯಲು ನಗರಕ್ಕೆ ಬರುತ್ತಿದ್ದಾರೆ’ ಎಂದು ಪೊಲೀಸರು ತಿಳಿಸಿದರು. ಕಳಪೆ ಕಾಮಗಾರಿಯೇ ಘಟನೆ ಕಾರಣ ಎಂಬ ಆರೋಪ ಕೇಳಿಬಂದಿದೆ. ಸದಾಶಿವ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಭಾರತೀಯ ವಿಜ್ಞಾನ ಸಂಸ್ಥೆಯ ಆವರಣದಲ್ಲಿರುವ ಟಾಟಾ ಇನ್ಸ್ಟಿಟ್ಯೂಟ್ನ ಕಬ್ಬಿಣದ ಗೇಟ್ ಕಳಚಿ ಬಿದ್ದು ಭದ್ರತಾ ಸಿಬ್ಬಂದಿ ಮೃತಪಟ್ಟ ಘಟನೆಭಾನುವಾರ ಮಧ್ಯಾಹ್ನ ನಡೆದಿದೆ.</p>.<p>ಒಡಿಶಾದ ಗೌತಮ್ ಬಿಸ್ವಾಲ್ (24) ಮೃತ ವ್ಯಕ್ತಿ. ಘಟನೆಯಲ್ಲಿ ಬಿಹಾರದ ಅನಿಲ್ ಕುಮಾರ್ ಮತ್ತು ಒಡಿಶಾದ ವೈ. ನಾಯಕ್ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಇಬ್ಬರನ್ನೂ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.</p>.<p>ಮೂರು ವರ್ಷಗಳ ಹಿಂದೆ ನಗರಕ್ಕೆಬಂದಿದ್ದ ಬಿಸ್ವಾಲ್, ಖಾಸಗಿ ಸೆಕ್ಯೂರಿಟಿಏಜೆನ್ಸಿ ಅಡಿಯಲ್ಲಿ ಕೆಲಸ ಮಾಡುತ್ತಿದ್ದರು. ಈ ಏಜೆನ್ಸಿ ಅವರನ್ನು ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ ಕೆಲಸಕ್ಕೆ ನಿಯೋಜಿಸಿತ್ತು.</p>.<p>ಆರಡಿ ಎತ್ತರ ಮತ್ತು 15 ಅಡಿ ಅಗಲದ 500 ಕೆ.ಜಿ. ತೂಕದ ಈ ಗೇಟ್ನ್ನು ನಾಲ್ಕು ತಿಂಗಳ ಹಿಂದೆ ಅಳವಡಿಸಲಾಗಿತ್ತು. ಭಾನುವಾರ ಬೆಳಿಗ್ಗೆ ಆರು ಗಂಟೆಗೆ ಕೆಲಸಕ್ಕೆ ಹಾಜರಾಗಿದ್ದ ಬಿಸ್ವಾಲ್, ಮಧ್ಯಾಹ್ನ 1 ಗಂಟೆ ಸುಮಾರಿಗೆ ಅಲ್ಲಿಗೆ ಕಾರಿನಲ್ಲಿ ಬಂದಿದ್ದ ಸಂದರ್ಶಕರೊಬ್ಬರಿಗೆಗೇಟ್ ತೆಗೆಯುತ್ತಿದ್ದಂತೆ, ಅದು ಕಳಚಿ ಬಿದ್ದಿದೆ. ಇದನ್ನು ತಕ್ಷಣವೇ ಗಮನಿಸಿದ ಆಟೋ ಚಾಲಕರೊಬ್ಬರು ಸ್ಥಳಕ್ಕೆ ಧಾವಿಸಿದ್ದಾರೆ. ಆದರೆ, ಗಂಭೀರವಾಗಿ ಗಾಯಗೊಂಡಿದ್ದ ಬಿಸ್ವಾಲ್ ಸ್ಥಳದಲ್ಲೇ ಮೃತಪಟ್ಟಿದ್ದರು.</p>.<p>‘ಅವಿವಾಹಿತರಾಗಿರುವ ಬಿಸ್ವಾಲ್ ಅವರ ಕುಟುಂಬ ಒಡಿಶಾದಲ್ಲಿದೆ. ಅವರಿಗೆ ಮಾಹಿತಿ ನೀಡಲಾಗಿದ್ದು, ಮೃತದೇಹ ಪಡೆಯಲು ನಗರಕ್ಕೆ ಬರುತ್ತಿದ್ದಾರೆ’ ಎಂದು ಪೊಲೀಸರು ತಿಳಿಸಿದರು. ಕಳಪೆ ಕಾಮಗಾರಿಯೇ ಘಟನೆ ಕಾರಣ ಎಂಬ ಆರೋಪ ಕೇಳಿಬಂದಿದೆ. ಸದಾಶಿವ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>