<p><strong>ಬೆಂಗಳೂರು:</strong> ಸಚಿವ ಜಮೀರ್ ಅಹಮದ್ ಖಾನ್ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಲೋಕಾಯುಕ್ತ ಅಧಿಕಾರಿಗಳು ನಟಿ ರಾಧಿಕಾ ಕುಮಾರಸ್ವಾಮಿ ಅವರ ವಿಚಾರಣೆ ನಡೆಸಿದ್ದಾರೆ. ಜಮೀರ್ ಅವರಿಗೆ ರಾಧಿಕಾ ₹2 ಕೋಟಿ ಹಣಕಾಸು ನೆರವು ನೀಡಿದ್ದರು ಎಂದು ಗೊತ್ತಾಗಿದ್ದು, ಈ ಸಂಬಂಧ ಅವರು ಹೇಳಿಕೆ ದಾಖಲಿಸಿದ್ದಾರೆ.</p>.<p>ಅಕ್ರಮ ಆಸ್ತಿ ಸಂಪಾದನೆ ಪ್ರಕರಣ ಸಂಬಂಧ ಲೋಕಾಯುಕ್ತ ಪೊಲೀಸರು, ಜಮೀರ್ ಅಹಮದ್ ಖಾನ್ ಅವರ ಆದಾಯದ ಮೂಲಗಳನ್ನು ಶೋಧಿಸಿದಾಗ ಸಾಲ ನೀಡಿದವರ ಪಟ್ಟಿ ದೊರೆತಿದೆ. ಇದರಲ್ಲಿ ನಟಿ ರಾಧಿಕಾ ಕುಮಾರಸ್ವಾಮಿ ಹಾಗೂ ಹಲವರ ಹೆಸರು ಉಲ್ಲೇಖವಾಗಿತ್ತು.</p>.<p>ವಿಚಾರಣೆ ವೇಳೆ ಜಮೀರ್ ಅವರಿಗೆ ಸಾಲ ಕೊಟ್ಟಿರುವುದನ್ನು ಒಪ್ಪಿಕೊಂಡಿರುವ ರಾಧಿಕಾ, ‘ನಾನು 2012ರಲ್ಲಿ ಯಶ್ ಹಾಗೂ ರಮ್ಯಾ ಅಭಿನಯದಲ್ಲಿ ಶಮಿಕಾ ಎಂಟರ್ಪ್ರೈಸಸ್ ಹೆಸರಿನಲ್ಲಿ ಸಿನಿಮಾ ನಿರ್ಮಾಣ ಮಾಡಿದೆ. ಮನರಂಜನಾ ಚಾನಲ್ಗಳಿಗೆ ಈ ಸಿನಿಮಾದ ಸ್ಯಾಟಲೈಟ್ ಹಕ್ಕು ಹಾಗೂ ಚಲನಚಿತ್ರದ ಯಶಸ್ಸಿನಿಂದ ಸಂಪಾದಿಸಿದ ಹಣದಲ್ಲಿ ₹2 ಕೋಟಿ ಸಚಿವರಿಗೆ ನೀಡಿದ್ದೆ’ ಎಂದು ಹೇಳಿಕೆ ನೀಡಿರುವುದಾಗಿ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಸಚಿವ ಜಮೀರ್ ಅಹಮದ್ ಖಾನ್ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಲೋಕಾಯುಕ್ತ ಅಧಿಕಾರಿಗಳು ನಟಿ ರಾಧಿಕಾ ಕುಮಾರಸ್ವಾಮಿ ಅವರ ವಿಚಾರಣೆ ನಡೆಸಿದ್ದಾರೆ. ಜಮೀರ್ ಅವರಿಗೆ ರಾಧಿಕಾ ₹2 ಕೋಟಿ ಹಣಕಾಸು ನೆರವು ನೀಡಿದ್ದರು ಎಂದು ಗೊತ್ತಾಗಿದ್ದು, ಈ ಸಂಬಂಧ ಅವರು ಹೇಳಿಕೆ ದಾಖಲಿಸಿದ್ದಾರೆ.</p>.<p>ಅಕ್ರಮ ಆಸ್ತಿ ಸಂಪಾದನೆ ಪ್ರಕರಣ ಸಂಬಂಧ ಲೋಕಾಯುಕ್ತ ಪೊಲೀಸರು, ಜಮೀರ್ ಅಹಮದ್ ಖಾನ್ ಅವರ ಆದಾಯದ ಮೂಲಗಳನ್ನು ಶೋಧಿಸಿದಾಗ ಸಾಲ ನೀಡಿದವರ ಪಟ್ಟಿ ದೊರೆತಿದೆ. ಇದರಲ್ಲಿ ನಟಿ ರಾಧಿಕಾ ಕುಮಾರಸ್ವಾಮಿ ಹಾಗೂ ಹಲವರ ಹೆಸರು ಉಲ್ಲೇಖವಾಗಿತ್ತು.</p>.<p>ವಿಚಾರಣೆ ವೇಳೆ ಜಮೀರ್ ಅವರಿಗೆ ಸಾಲ ಕೊಟ್ಟಿರುವುದನ್ನು ಒಪ್ಪಿಕೊಂಡಿರುವ ರಾಧಿಕಾ, ‘ನಾನು 2012ರಲ್ಲಿ ಯಶ್ ಹಾಗೂ ರಮ್ಯಾ ಅಭಿನಯದಲ್ಲಿ ಶಮಿಕಾ ಎಂಟರ್ಪ್ರೈಸಸ್ ಹೆಸರಿನಲ್ಲಿ ಸಿನಿಮಾ ನಿರ್ಮಾಣ ಮಾಡಿದೆ. ಮನರಂಜನಾ ಚಾನಲ್ಗಳಿಗೆ ಈ ಸಿನಿಮಾದ ಸ್ಯಾಟಲೈಟ್ ಹಕ್ಕು ಹಾಗೂ ಚಲನಚಿತ್ರದ ಯಶಸ್ಸಿನಿಂದ ಸಂಪಾದಿಸಿದ ಹಣದಲ್ಲಿ ₹2 ಕೋಟಿ ಸಚಿವರಿಗೆ ನೀಡಿದ್ದೆ’ ಎಂದು ಹೇಳಿಕೆ ನೀಡಿರುವುದಾಗಿ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>