‘ಬೆಳ್ಳಂದೂರು ವಾರ್ಡ್ನ ಕರಿಯಮ್ಮನ ಅಗ್ರಹಾರ ಗ್ರಾಮದ ಮಂತ್ರಿ ಎಸ್ಪಾನ್ ಅಪಾರ್ಟ್ಮೆಂಟ್ ಸಮುಚ್ಚಯದ ಪಕ್ಕದ ಖಾಸಗಿ ಪ್ರದೇಶದಲ್ಲಿ ಬಾಂಗ್ಲಾದೇಶದ ನಿವಾಸಿಗಳು ಅನಧೀಕೃತವಾಗಿ ಜೋಪಡಿ ನಿರ್ಮಿಸಿಕೊಂಡಿದ್ದು, ಈ ಪ್ರದೇಶವನ್ನು ಕೊಳಚೆ ಪ್ರದೇಶವನ್ನಾಗಿ ಪರಿವರ್ತಿಸಿದ್ದಾರೆ. ಇಲ್ಲಿ ಹದಗೆಟ್ಟ ವಾತಾವರಣ ಸೃಷ್ಟಿಯಾದ ಬಗ್ಗೆ ದೂರು ಬಂದ ಹಿನ್ನೆಲೆಯಲ್ಲಿ ಶೆಡ್ಗಳ ನಿವಾಸಿಗಳನ್ನು ತೆರವುಗೊಳಿಸುವ ಕಾರ್ಯಾಚರಣೆ ನಡೆಸಬೇಕಿದೆ. ಈ ಸಮಯದಲ್ಲಿ ಭದ್ರತೆ ಒದಗಿಸಬೇಕು’ ಎಂದು ಕೋರಿ ಅವರು ಇದೇ 18ರಂದು ಮಾರತ್ತಹಳ್ಳಿ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ಗೆ ಪತ್ರ ಬರೆದಿದ್ದರು.