ವಿಚಾರಣೆ ವೇಳೆ ಸರ್ಕಾರದ ಪರ ವಕೀಲ ಪಿ.ಬಿ ಅಚ್ಚಪ್ಪ ಅವರು, ‘ನವೆಂಬರ್ 16ರಂದು ನಗರಾಭಿವೃದ್ಧಿ ಇಲಾಖೆ ಅಧೀನ ಕಾರ್ಯದರ್ಶಿ ಹೊರಡಿಸಿರುವ ಅಂತಿಮ ಅಧಿಸೂಚನೆ ಪ್ರತಿಯನ್ನು ನ್ಯಾಯಪೀಠಕ್ಕೆ ನೀಡಿದರು. ಇದಕ್ಕೆ ಎಸ್.ಉಮಾಪತಿ, ‘ಅಧಿಸೂಚನೆ ಸಾರ್ವಜನಿಕವಾಗಿ ವೆಬ್ಸೈಟ್ನಲ್ಲಿ ಲಭ್ಯವಿಲ್ಲ. ಸರ್ಕಾರ ಮುಜುಗುರದಿಂದ ತಪ್ಪಿಸಿಕೊಳ್ಳಲು ಕರಡು ನೀತಿ ಪ್ರತಿಯನ್ನು ಕೋರ್ಟ್ಗೆ ನೀಡುತ್ತಿದೆ. ಈ ಮೂಲಕ ನ್ಯಾಯಪೀಠದ ದಿಕ್ಕುತಪ್ಪಿಸುತ್ತಿದೆ’ ಎಂದು ದೂರಿದರು. ಕರಡು ನಿಯಮಗಳನ್ನು ಪ್ರಶ್ನಿಸಲು ಮೂಲ ಅರ್ಜಿಯಲ್ಲಿ ಮಾರ್ಪಾಡು ಮಾಡಲು ನ್ಯಾಯಪೀಠ ಅರ್ಜಿದಾರರಿಗೆ ಅನುಮತಿ ನೀಡಿದೆ. ವಿಚಾರಣೆಯನ್ನು ಡಿ.9ಕ್ಕೆ ಮುಂದೂಡಲಾಗಿದೆ.