ವಿಚಾರಣೆ ವೇಳೆ ಯಡಿಯೂರಪ್ಪ ಪರ ಹಾಜರಾಗಿದ್ದ ಹಿರಿಯ ವಕೀಲ ಸಿ.ವಿ.ನಾಗೇಶ್, ‘ಯಡಿಯೂರಪ್ಪ ಅವರು ಕಳೆದ ಕೆಲವು ದಿನಗಳಿಂದ ಅತಿಯಾದ ಮಧುಮೇಹ, ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದವರು ಚೇತರಿಸಿಕೊಂಡಿದ್ದರು. ಆದರೆ, ಈಗ ಮತ್ತೆ ಕಫ, ಶೀತ ಮತ್ತು ಜ್ವರದಿಂದ ಬಳಲುತ್ತಿದ್ದು ವೈದ್ಯರು ವಿಶ್ರಾಂತಿಗೆ ಸಲಹೆ ನೀಡಿದ್ದಾರೆ. ಆದ್ದರಿಂದ, ಖುದ್ದು ಹಾಜರಾತಿಗೆ ವಿನಾಯಿತಿ ನೀಡಬೇಕು’ ಎಂದು ಕೋರಿದರು.