ಬೆಂಗಳೂರು: ‘ಅಬಕಾರಿ ಇಲಾಖೆಯಲ್ಲಿ ಕಾಕಂಬಿ ರಫ್ತಿನಲ್ಲೂ ಅಕ್ರಮ ನಡೆದಿದ್ದು, ಲೋಕಾಯುಕ್ತದಲ್ಲಿ ದೂರು ದಾಖಲಾಗಿದೆ. ಆದರೆ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಈ ಬಗ್ಗೆ ಚರ್ಚೆ ಮಾಡದೆ, ಟಿಪ್ಪು ವರ್ಸಸ್ ಸಾವರ್ಕರ್, ಟಿಪ್ಪು ವರ್ಸಸ್ ಅಬ್ಬಕ್ಕ ಬಗ್ಗೆ ಮಾತನಾಡುತ್ತಾರೆ’ ಎಂದು ಕೆಪಿಸಿಸಿ ಮಾಧ್ಯಮ ವಿಭಾಗದ ಮುಖ್ಯಸ್ಥ ಪ್ರಿಯಾಂಕ್ ಖರ್ಗೆ ದೂರಿದರು.