<p><strong>ಬೆಂಗಳೂರು:</strong> ಕಾವೇರಿ 2.0 ತಂತ್ರಾಂಶದಲ್ಲಿ ನೀಡಲಾಗಿರುವ ಕೆಲವು ವಿನಾಯತಿಗಳನ್ನು ದುರುಪಯೋಗ ಮಾಡಿಕೊಂಡು, ಕ್ರಯಪತ್ರಗಳನ್ನು ಅಕ್ರಮವಾಗಿ ನೋಂದಣಿ ಮಾಡಿದ್ದ ಸರ್ಜಾಪುರ ಉಪನೋಂದಣಾಧಿಕಾರಿ ರವಿಸಂಕನಗೌಡ ಅವರನ್ನು ನೋಂದಣಿ ಮತ್ತು ಮುದ್ರಾಂಕ ಇಲಾಖೆಯು ಅಮಾನತು ಮಾಡಿದೆ.</p>.<p>ರವಿಸಂಕನಗೌಡ ಅವರು ಕ್ರಯಪತ್ರಗಳನ್ನು ಅಕ್ರಮವಾಗಿ ನೋಂದಣಿ ಮಾಡುತ್ತಿರುವ ಬಗ್ಗೆ ಬಂದಿದ್ದ ದೂರುಗಳ ಆಧಾರದಲ್ಲಿ ಇಲಾಖೆಯು ತನಿಖೆಗೆ ಆದೇಶಿಸಿತ್ತು.</p>.<p>ನ್ಯಾಯಾಲಯದ ಆದೇಶ ಆಧಾರಿತ ನೋಂದಣಿ ವ್ಯವಸ್ಥೆಯಲ್ಲಿ, ಕೆಲವು ದಾಖಲೆಗಳನ್ನು ಅಪ್ಲೋಡ್ ಮಾಡಲು ಕಾವೇರಿ 2.0 ತಂತ್ರಾಂಶದಲ್ಲಿ ವಿನಾಯತಿ ನೀಡಲಾಗಿದೆ. ಆರೋಪಿ ರವಿಸಂಕನಗೌಡ ಅವರು ಈ ವಿನಾಯತಿಯನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ. ನ್ಯಾಯಾಲಯದ ಆದೇಶ ಇಲ್ಲದಿದ್ದರೂ ಕಾವೇರಿ 2.0 ತಂತ್ರಾಂಶದಲ್ಲಿ, ‘ನ್ಯಾಯಾಲಯದ ಆದೇಶದ ಆಧಾರದಲ್ಲಿ ನೋಂದಣಿ’ ಯನ್ನು ಆಯ್ಕೆ ಮಾಡುತ್ತಿದ್ದರು. ಈ ಮೂಲಕ ಹಲವು ಅಕ್ರಮ ನೋಂದಣಿಗಳನ್ನು ಮಾಡಿರುವುದು ತನಿಖೆ ವೇಳೆ ಗೊತ್ತಾಗಿದೆ ಎಂದು ಇಲಾಖೆಯು ಅಮಾನತು ಆದೇಶದಲ್ಲಿ ವಿವರಿಸಿದೆ.</p>.<p>ಸರ್ಜಾಪುರ ಉಪನೋಂದಣಾಧಿಕಾರಿ ಕಚೇರಿಯಲ್ಲಿ ನಡೆದಿರಬಹುದಾದ ಈ ರೀತಿಯ ಅಕ್ರಮಗಳ ಸಮಗ್ರ ತನಿಖೆಗೆ ಆದೇಶಿಸಿದ್ದು, ರವಿಸಂಕನಗೌಡ ಅವರನ್ನು ಅಮಾನತು ಮಾಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕಾವೇರಿ 2.0 ತಂತ್ರಾಂಶದಲ್ಲಿ ನೀಡಲಾಗಿರುವ ಕೆಲವು ವಿನಾಯತಿಗಳನ್ನು ದುರುಪಯೋಗ ಮಾಡಿಕೊಂಡು, ಕ್ರಯಪತ್ರಗಳನ್ನು ಅಕ್ರಮವಾಗಿ ನೋಂದಣಿ ಮಾಡಿದ್ದ ಸರ್ಜಾಪುರ ಉಪನೋಂದಣಾಧಿಕಾರಿ ರವಿಸಂಕನಗೌಡ ಅವರನ್ನು ನೋಂದಣಿ ಮತ್ತು ಮುದ್ರಾಂಕ ಇಲಾಖೆಯು ಅಮಾನತು ಮಾಡಿದೆ.</p>.<p>ರವಿಸಂಕನಗೌಡ ಅವರು ಕ್ರಯಪತ್ರಗಳನ್ನು ಅಕ್ರಮವಾಗಿ ನೋಂದಣಿ ಮಾಡುತ್ತಿರುವ ಬಗ್ಗೆ ಬಂದಿದ್ದ ದೂರುಗಳ ಆಧಾರದಲ್ಲಿ ಇಲಾಖೆಯು ತನಿಖೆಗೆ ಆದೇಶಿಸಿತ್ತು.</p>.<p>ನ್ಯಾಯಾಲಯದ ಆದೇಶ ಆಧಾರಿತ ನೋಂದಣಿ ವ್ಯವಸ್ಥೆಯಲ್ಲಿ, ಕೆಲವು ದಾಖಲೆಗಳನ್ನು ಅಪ್ಲೋಡ್ ಮಾಡಲು ಕಾವೇರಿ 2.0 ತಂತ್ರಾಂಶದಲ್ಲಿ ವಿನಾಯತಿ ನೀಡಲಾಗಿದೆ. ಆರೋಪಿ ರವಿಸಂಕನಗೌಡ ಅವರು ಈ ವಿನಾಯತಿಯನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ. ನ್ಯಾಯಾಲಯದ ಆದೇಶ ಇಲ್ಲದಿದ್ದರೂ ಕಾವೇರಿ 2.0 ತಂತ್ರಾಂಶದಲ್ಲಿ, ‘ನ್ಯಾಯಾಲಯದ ಆದೇಶದ ಆಧಾರದಲ್ಲಿ ನೋಂದಣಿ’ ಯನ್ನು ಆಯ್ಕೆ ಮಾಡುತ್ತಿದ್ದರು. ಈ ಮೂಲಕ ಹಲವು ಅಕ್ರಮ ನೋಂದಣಿಗಳನ್ನು ಮಾಡಿರುವುದು ತನಿಖೆ ವೇಳೆ ಗೊತ್ತಾಗಿದೆ ಎಂದು ಇಲಾಖೆಯು ಅಮಾನತು ಆದೇಶದಲ್ಲಿ ವಿವರಿಸಿದೆ.</p>.<p>ಸರ್ಜಾಪುರ ಉಪನೋಂದಣಾಧಿಕಾರಿ ಕಚೇರಿಯಲ್ಲಿ ನಡೆದಿರಬಹುದಾದ ಈ ರೀತಿಯ ಅಕ್ರಮಗಳ ಸಮಗ್ರ ತನಿಖೆಗೆ ಆದೇಶಿಸಿದ್ದು, ರವಿಸಂಕನಗೌಡ ಅವರನ್ನು ಅಮಾನತು ಮಾಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>