<p><strong>ಕೆ.ಆರ್.ಪುರ:</strong> ಸರ್ಕಾರ ಎಸ್ಸಿ/ಎಸ್ಟಿ ಸಮುದಾಯಗಳಿಗೆ ಮಂಜೂರು ಮಾಡಿರುವ ವ್ಯವಸಾಯದ ಭೂಮಿಗಳಲ್ಲಿ ಅಕ್ರಮವಾಗಿ ನಿರ್ಮಿಸಿರುವ ಬಡಾವಣೆಯ ನಿವೇಶನಗಳಿಗೆ ಖಾತೆ ನೀಡಬಾರದು ಎಂದು ಒತ್ತಾಯಿಸಿ ಪ್ರಜಾ ವಿಮೋಚನಾ ಚಳವಳಿಯ ಕಾರ್ಯಕರ್ತರು ಬಿದರಹಳ್ಳಿ ಗ್ರಾಮ ಪಂಚಾಯತಿ ಎದುರು ತಮಟೆ ಚಳವಳಿ ನಡೆಸಿದರು.</p>.<p>ಬೆಂಗಳೂರು ಪೂರ್ವ ತಾಲ್ಲೂಕು ಬಿದರಹಳ್ಳಿ ಹೋಬಳಿಯ ಬೈಯಪ್ಪನಹಳ್ಳಿ ಗ್ರಾಮದ ಸರ್ವೆ ನಂ 130, 131/1, 131/2, 131/3, 131/4 ಮತ್ತು 169 ಸೇರಿದಂತೆ ಕೆಲವು ಸರ್ವೆ ನಂಬರ್ ಜಮೀನುಗಳು ಪರಿಶಿಷ್ಟ ಜಾತಿಯವರಿಗೆ ಮಂಜೂರಾಗಿದೆ. ಈ ಸದರಿ ಭೂಮಿಗಳು ಹಸಿರು ವಲಯ ವ್ಯಾಪ್ತಿಗೆ ಒಳಪಟ್ಟಿದೆ. ವ್ಯವಸಾಯಕ್ಕೆ ಮಂಜೂರಾಗಿದ್ದ ಸುಮಾರು 40 ಎಕರೆ ಜಮೀನಿನಲ್ಲಿ ಬಿಲ್ಡರ್ಗಳು ಕಾನೂನನ್ನು ಗಾಳಿಗೆ ತೂರಿ ಅಕ್ರಮವಾಗಿ ಖಾಸಗಿ ಬಡಾವಣೆಗಳನ್ನು ನಿರ್ಮಿಸಿದ್ದಾರೆ ಎಂದು ಪ್ರಜಾ ವಿಮೋಚನಾ ಚಳವಳಿಯ ರಾಜ್ಯಾಧ್ಯಕ್ಷ ಆನೇಕಲ್ ಕೃಷ್ಣಪ್ಪ ದೂರಿದರು.</p>.<p>ಸಂಘಟನೆಯ ಬೆಂಗಳೂರು ವಿಭಾಗೀಯ ಅಧ್ಯಕ್ಷ ಮಾದೇಶ್ ಮಾತನಾಡಿ, ‘ಎಸ್ಸಿ/ಎಸ್ಟಿ ಸಮುದಾಯಕ್ಕೆ ಸೇರಿದ ಭೂಮಿಗಳಿಗೆ ಸಂಬಂಧಿಸಿದ ಪ್ರಕರಣಗಳು ನ್ಯಾಯಾಲಯದಲ್ಲಿವೆ. ಹಾಗಾಗಿ ಹಸಿರು ವ್ಯಾಪ್ತಿಯಲ್ಲಿ ನಿರ್ಮಿಸಿರುವ ಖಾಸಗಿ ಬಡಾವಣೆಯಲ್ಲಿ ಅಕ್ರಮ ಮನೆ ಮತ್ತು ನಿವೇಶನಗಳಿಗೆ ಗ್ರಾಮ ಪಂಚಾಯಿತಿಯಿಂದ ಖಾತೆಗಳನ್ನು ನೀಡಬಾರದು‘ ಎಂದು ಒತ್ತಾಯಿಸಿದರು.</p>.<p>ಪೂರ್ವ ತಾಲ್ಲೂಕು ಅಧ್ಯಕ್ಷ ಆದೂರು ಗಣೇಶ್, ಆಶ್ರಫ್ ಅಲಿ, ನಿಸಾರ್, ಗುಲಾಬ್ ಜಾನ್, ವೆಂಕಟೇಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆ.ಆರ್.ಪುರ:</strong> ಸರ್ಕಾರ ಎಸ್ಸಿ/ಎಸ್ಟಿ ಸಮುದಾಯಗಳಿಗೆ ಮಂಜೂರು ಮಾಡಿರುವ ವ್ಯವಸಾಯದ ಭೂಮಿಗಳಲ್ಲಿ ಅಕ್ರಮವಾಗಿ ನಿರ್ಮಿಸಿರುವ ಬಡಾವಣೆಯ ನಿವೇಶನಗಳಿಗೆ ಖಾತೆ ನೀಡಬಾರದು ಎಂದು ಒತ್ತಾಯಿಸಿ ಪ್ರಜಾ ವಿಮೋಚನಾ ಚಳವಳಿಯ ಕಾರ್ಯಕರ್ತರು ಬಿದರಹಳ್ಳಿ ಗ್ರಾಮ ಪಂಚಾಯತಿ ಎದುರು ತಮಟೆ ಚಳವಳಿ ನಡೆಸಿದರು.</p>.<p>ಬೆಂಗಳೂರು ಪೂರ್ವ ತಾಲ್ಲೂಕು ಬಿದರಹಳ್ಳಿ ಹೋಬಳಿಯ ಬೈಯಪ್ಪನಹಳ್ಳಿ ಗ್ರಾಮದ ಸರ್ವೆ ನಂ 130, 131/1, 131/2, 131/3, 131/4 ಮತ್ತು 169 ಸೇರಿದಂತೆ ಕೆಲವು ಸರ್ವೆ ನಂಬರ್ ಜಮೀನುಗಳು ಪರಿಶಿಷ್ಟ ಜಾತಿಯವರಿಗೆ ಮಂಜೂರಾಗಿದೆ. ಈ ಸದರಿ ಭೂಮಿಗಳು ಹಸಿರು ವಲಯ ವ್ಯಾಪ್ತಿಗೆ ಒಳಪಟ್ಟಿದೆ. ವ್ಯವಸಾಯಕ್ಕೆ ಮಂಜೂರಾಗಿದ್ದ ಸುಮಾರು 40 ಎಕರೆ ಜಮೀನಿನಲ್ಲಿ ಬಿಲ್ಡರ್ಗಳು ಕಾನೂನನ್ನು ಗಾಳಿಗೆ ತೂರಿ ಅಕ್ರಮವಾಗಿ ಖಾಸಗಿ ಬಡಾವಣೆಗಳನ್ನು ನಿರ್ಮಿಸಿದ್ದಾರೆ ಎಂದು ಪ್ರಜಾ ವಿಮೋಚನಾ ಚಳವಳಿಯ ರಾಜ್ಯಾಧ್ಯಕ್ಷ ಆನೇಕಲ್ ಕೃಷ್ಣಪ್ಪ ದೂರಿದರು.</p>.<p>ಸಂಘಟನೆಯ ಬೆಂಗಳೂರು ವಿಭಾಗೀಯ ಅಧ್ಯಕ್ಷ ಮಾದೇಶ್ ಮಾತನಾಡಿ, ‘ಎಸ್ಸಿ/ಎಸ್ಟಿ ಸಮುದಾಯಕ್ಕೆ ಸೇರಿದ ಭೂಮಿಗಳಿಗೆ ಸಂಬಂಧಿಸಿದ ಪ್ರಕರಣಗಳು ನ್ಯಾಯಾಲಯದಲ್ಲಿವೆ. ಹಾಗಾಗಿ ಹಸಿರು ವ್ಯಾಪ್ತಿಯಲ್ಲಿ ನಿರ್ಮಿಸಿರುವ ಖಾಸಗಿ ಬಡಾವಣೆಯಲ್ಲಿ ಅಕ್ರಮ ಮನೆ ಮತ್ತು ನಿವೇಶನಗಳಿಗೆ ಗ್ರಾಮ ಪಂಚಾಯಿತಿಯಿಂದ ಖಾತೆಗಳನ್ನು ನೀಡಬಾರದು‘ ಎಂದು ಒತ್ತಾಯಿಸಿದರು.</p>.<p>ಪೂರ್ವ ತಾಲ್ಲೂಕು ಅಧ್ಯಕ್ಷ ಆದೂರು ಗಣೇಶ್, ಆಶ್ರಫ್ ಅಲಿ, ನಿಸಾರ್, ಗುಲಾಬ್ ಜಾನ್, ವೆಂಕಟೇಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>