‘ಇತ್ತೀಚಿನ ವರ್ಷಗಳಲ್ಲಿ ಜಿಗಣಿ, ಯಲಹಂಕ, ದೇವನಹಳ್ಳಿ, ಸರ್ಜಾಪುರ ರಸ್ತೆ, ಹೊಸಕೋಟೆ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ನೂರಾರು ಬಡಾವಣೆಗಳು ತಲೆ ಎತ್ತಿವೆ. ಅನಧಿಕೃತ ಬಡಾವಣೆಗಳ ಸಂಖ್ಯೆ ಸಾಕಷ್ಟು ಇದೆ. ಈ ಬಗ್ಗೆ ಮಾಹಿತಿ ಲಭಿಸಿದೆ. ಹೀಗಾಗಿ, ವಿಶೇಷ ತಂಡ ರಚಿಸಿ ಕಾರ್ಯಾಚರಣೆ ನಡೆಸಲಾಗುತ್ತಿದೆ’ ಎಂದು ಇಲಾಖೆಯ ಆಯುಕ್ತ ಕೆ.ವಿ.ತ್ರಿಲೋಕ್ಚಂದ್ರ ‘ಪ್ರಜಾವಾಣಿ’ಗೆ ತಿಳಿಸಿದರು.