<p><strong>ಬೆಂಗಳೂರು:</strong> ‘ಅಕ್ರಮ ಗಣಿಗಾರಿಕೆ ನಡೆಸಿ ರಾಜ್ಯದ ಬೊಕ್ಕಸಕ್ಕೆ ನಷ್ಟ ಉಂಟು ಮಾಡಿದ ಆರೋಪದಿಂದ ನನ್ನನ್ನು ಕೈಬಿಡಬೇಕು’ ಎಂದು ಕೋರಿದ್ದ ಜಿ. ಜನಾರ್ದನ ರೆಡ್ಡಿ ಅರ್ಜಿಯನ್ನು ಜನಪ್ರತಿ ನಿಧಿಗಳ ಕೋರ್ಟ್ ವಜಾ ಮಾಡಿದೆ.</p>.<p>ಈ ಕುರಿತ ಆದೇಶವನ್ನು, ‘ಶಾಸಕರು –ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಶೇಷ ನ್ಯಾಯಾಲಯ’ದ ನ್ಯಾಯಾಧೀಶ ರಾಮಚಂದ್ರ ಡಿ.ಹುದ್ದಾರ ಅವರು ಪ್ರಕಟಿಸಿದ್ದಾರೆ. ಪ್ರಕರಣದಿಂದ ಕೈಬಿಡುವಂತೆ ಕೋರಿದ್ದ ಕೆ.ಎಂ.ಅಲಿಖಾನ್ ಮತ್ತು ಬಿ.ವಿ.ಶ್ರೀನಿವಾಸ ರೆಡ್ಡಿ ಅವರ ಅರ್ಜಿಗಳನ್ನೂ ನ್ಯಾಯಾಧೀಶರು ವಜಾಗೊಳಿಸಿದ್ದಾರೆ.</p>.<p>‘ಆರೋಪಿಗಳು ಅದಿರು ಕಳುವಿನ ಬಗ್ಗೆ ಸಂಚು, ಅಪರಾ–ತಪರಾ, ಮೋಸ ಎಸಗಿರುವುದು ಮೇಲ್ನೋಟಕ್ಕೆ ವೇದ್ಯವಾ ಗುತ್ತದೆ. ಹೀಗಾಗಿ ಆರೋಪಿಗಳ ವಿರುದ್ಧ ವಿಚಾರಣೆ ನಡೆಸುವುದು ಅವಶ್ಯವಿದೆ. ಆದ್ದರಿಂದ ಈ ಪ್ರಕರಣದಲ್ಲಿ ವಿಚಾರಣೆ ಎದುರಿಸಲಿ’ ಎಂದು ನ್ಯಾಯಾಧೀಶರು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.</p>.<p>ಆರೋಪಿಗಳು ಎಂ.ನಾಶಿಕ್ ಸಾಬ್ ಅವರಿಗೆ ಸೇರಿದ, ‘ಮೆಸರ್ಸ್ ಇಂಡಿಯನ್ ಮೈನ್ಸ್ ಕಂಪನಿ’ಯನ್ನು ವಶಕ್ಕೆ ಪಡೆದು ಆ ಕಂಪನಿಯ ಹೆಸರಿ ನಲ್ಲಿ ಮಿತಿಗಿಂತಲೂ ಹೆಚ್ಚಿನ ಕಬ್ಬಿಣದ ಅದಿರನ್ನು ತೆಗೆದು ಸಾಗಣೆ ಮಾಡಿದ್ದಾರೆ ಎಂದು ದೂರು ದಾಖಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಅಕ್ರಮ ಗಣಿಗಾರಿಕೆ ನಡೆಸಿ ರಾಜ್ಯದ ಬೊಕ್ಕಸಕ್ಕೆ ನಷ್ಟ ಉಂಟು ಮಾಡಿದ ಆರೋಪದಿಂದ ನನ್ನನ್ನು ಕೈಬಿಡಬೇಕು’ ಎಂದು ಕೋರಿದ್ದ ಜಿ. ಜನಾರ್ದನ ರೆಡ್ಡಿ ಅರ್ಜಿಯನ್ನು ಜನಪ್ರತಿ ನಿಧಿಗಳ ಕೋರ್ಟ್ ವಜಾ ಮಾಡಿದೆ.</p>.<p>ಈ ಕುರಿತ ಆದೇಶವನ್ನು, ‘ಶಾಸಕರು –ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಶೇಷ ನ್ಯಾಯಾಲಯ’ದ ನ್ಯಾಯಾಧೀಶ ರಾಮಚಂದ್ರ ಡಿ.ಹುದ್ದಾರ ಅವರು ಪ್ರಕಟಿಸಿದ್ದಾರೆ. ಪ್ರಕರಣದಿಂದ ಕೈಬಿಡುವಂತೆ ಕೋರಿದ್ದ ಕೆ.ಎಂ.ಅಲಿಖಾನ್ ಮತ್ತು ಬಿ.ವಿ.ಶ್ರೀನಿವಾಸ ರೆಡ್ಡಿ ಅವರ ಅರ್ಜಿಗಳನ್ನೂ ನ್ಯಾಯಾಧೀಶರು ವಜಾಗೊಳಿಸಿದ್ದಾರೆ.</p>.<p>‘ಆರೋಪಿಗಳು ಅದಿರು ಕಳುವಿನ ಬಗ್ಗೆ ಸಂಚು, ಅಪರಾ–ತಪರಾ, ಮೋಸ ಎಸಗಿರುವುದು ಮೇಲ್ನೋಟಕ್ಕೆ ವೇದ್ಯವಾ ಗುತ್ತದೆ. ಹೀಗಾಗಿ ಆರೋಪಿಗಳ ವಿರುದ್ಧ ವಿಚಾರಣೆ ನಡೆಸುವುದು ಅವಶ್ಯವಿದೆ. ಆದ್ದರಿಂದ ಈ ಪ್ರಕರಣದಲ್ಲಿ ವಿಚಾರಣೆ ಎದುರಿಸಲಿ’ ಎಂದು ನ್ಯಾಯಾಧೀಶರು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.</p>.<p>ಆರೋಪಿಗಳು ಎಂ.ನಾಶಿಕ್ ಸಾಬ್ ಅವರಿಗೆ ಸೇರಿದ, ‘ಮೆಸರ್ಸ್ ಇಂಡಿಯನ್ ಮೈನ್ಸ್ ಕಂಪನಿ’ಯನ್ನು ವಶಕ್ಕೆ ಪಡೆದು ಆ ಕಂಪನಿಯ ಹೆಸರಿ ನಲ್ಲಿ ಮಿತಿಗಿಂತಲೂ ಹೆಚ್ಚಿನ ಕಬ್ಬಿಣದ ಅದಿರನ್ನು ತೆಗೆದು ಸಾಗಣೆ ಮಾಡಿದ್ದಾರೆ ಎಂದು ದೂರು ದಾಖಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>