ಕ್ರಷರ್ ನಡೆಸಲು ಇಲಾಖೆಯಿಂದ ಅನುಮತಿ ಪಡೆದ ದಾಖಲೆ ನೀಡುವವರೆಗೆ ಸ್ಫೋಟ ಹಾಗೂ ಗಣಿಗಾರಿಕೆ ನಡೆಸದಂತೆ ಕ್ವಾರಿ ಮಾಲೀಕರಿಗೆ ಸೂಚನೆ ನೀಡಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆ, ನೆಲಮಂಗಲ ತಾಲೂಕು ನರಸೀಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆಜಿ ಜಾಜೂರು ಗ್ರಾಮದ ಸರ್ವೇ ನಂಬರ್ 22ರಲ್ಲಿ ಎಸ್ಎಲ್ಆರ್ ಸ್ಟೋನ್ ಕ್ರಷರ್ ಸಂಸ್ಥೆಯವರು ಅಕ್ರಮವಾಗಿ ಕಲ್ಲು ಗಣಿಗಾರಿಕೆ ನಡೆಸುತ್ತಿದ್ದಾರೆ ಮತ್ತು ಸ್ಫೋಟ ಮಾಡುತ್ತಿರುವ ಬಗ್ಗೆ ಗ್ರಾಮಸ್ಥರು ನರಸೀಪುರ ಗ್ರಾಮ ಪಂಚಾಯಿತಿಗೆ ದೂರು ನೀಡಿದ್ದರು.