<p><strong>ಬೆಂಗಳೂರು: </strong>ಬಿಜೆಪಿ ಹಾಗೂ ಆರ್ಎಸ್ಎಸ್ ಮುಖಂಡರ ಹೆಸರು ಹೇಳಿಕೊಂಡು ಜನರಿಂದ ಕೋಟ್ಯಂತರ ರೂಪಾಯಿ ಪಡೆದು ವಂಚಿಸಿರುವ ಆರೋಪದಡಿ ಬಂಧಿಸಲಾಗಿರುವ ಯುವರಾಜ್ ಅಲಿಯಾಸ್ ಸೇವಾಲಾಲ್ ಸ್ವಾಮೀಜಿಗೆ ಸೇರಿದ್ದ ಸುಮಾರು ₹ 60 ಕೋಟಿ ಮೌಲ್ಯದ ಆಸ್ತಿಯನ್ನು ಸಿಸಿಬಿ ಪೊಲೀಸರು ಪತ್ತೆ ಮಾಡಿದ್ದಾರೆ. ಆಸ್ತಿಗಳ ಬಗ್ಗೆ ನ್ಯಾಯಾಲಯಕ್ಕೂ ಮಾಹಿತಿ ನೀಡಿದ್ದಾರೆ.</p>.<p>‘ಆರೋಪಿ ಯುವರಾಜ್ ಅವರನ್ನು ಬಂಧಿಸಿ, ಕಸ್ಟಡಿಗೆ ಪಡೆದು ವಿಚಾರಣೆ ನಡೆಸಲಾಗಿದೆ. ಅವರು ಹಾಗೂ ಪತ್ನಿ ಪ್ರೇಮಾ ಹೆಸರಿನಲ್ಲಿರುವ 18 ಆಸ್ತಿಗಳನ್ನು ಗುರುತಿಸಲಾಗಿದೆ’ ಎಂದು ಸಿಸಿಬಿ ಮೂಲಗಳು ಹೇಳಿವೆ.</p>.<p>‘ಬೆಂಗಳೂರಿನಲ್ಲಿರುವ ಮನೆ, ನಿವೇಶನ, ಮಂಡ್ಯದಲ್ಲಿರುವ ಜಮೀನು, ಐಷಾರಾಮಿ ಕಾರುಗಳು ಸೇರಿದಂತೆ ಸುಮಾರು ₹ 60 ಕೋಟಿ ಮೌಲ್ಯದ ಸ್ಥಿರಾಸ್ತಿ ಹಾಗೂ ಚರಾಸ್ತಿ ಬಗ್ಗೆ ಮಾಹಿತಿ ಸಂಗ್ರಹಿಸಲಾಗಿದೆ. ಅವುಗಳ ಪಟ್ಟಿ ಸಿದ್ಧಪಡಿಸಿ ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ. ನ್ಯಾಯಾಲಯದ ನಿರ್ದೇಶನದಂತೆ ಮುಂದಿನ ಕ್ರಮ ಕೈಗೊಳ್ಳಲಾಗುವುದು’ ಎಂದೂ ತಿಳಿಸಿವೆ.</p>.<p class="Subhead">ಮತ್ತೆರಡು ಎಫ್ಐಆರ್; ‘ರಾಜ್ಯ ಸರ್ಕಾರದ ಇಲಾಖೆಯಲ್ಲಿ ಸಹಾಯಕ ಎಂಜಿನಿಯರ್ ಹಾಗೂ ಕೆಎಂಎಫ್ನಲ್ಲಿ ಮಾರುಕಟ್ಟೆ ವ್ಯವಸ್ಥಾಪಕ ಕೆಲಸ ಕೊಡಿಸುವುದಾಗಿ ಹೇಳಿ ₹ 1 ಕೋಟಿ ಪಡೆದು ವಂಚಿಸಿರುವ ಬಗ್ಗೆ ಜ್ಞಾನಭಾರತಿ ಠಾಣೆಯಲ್ಲಿ ಎರಡು ಪ್ರತ್ಯೇಕ ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.</p>.<p>‘ಆರೋಪಿ ಯುವರಾಜ್, ಸದ್ಯ ಸಿಸಿಬಿ ಕಸ್ಟಡಿಯಲ್ಲಿ ಇದ್ದಾರೆ. ಅವರ ವಿರುದ್ಧ ದಾಖಲಾಗಿರುವ ಪ್ರಕರಣದ ಬಗ್ಗೆ ಕಮಿಷನರ್ ಅವರಿಗೆ ಮಾಹಿತಿ ನೀಡಲಾಗುವುದು. ಅವರ ನಿರ್ದೇಶನದಂತೆ ಮುಂದುವರಿಯಲಾಗುವುದು’ ಎಂದೂ ತಿಳಿಸಿವೆ.</p>.<p class="Subhead">ದೂರುದಾರ ನರಸಿಂಹಸ್ವಾಮಿ ಎಂಬುವರು, ‘ಬಿಜೆಪಿ ಮುಖಂಡರು ಆತ್ಮೀಯರೆಂದು ಹೇಳಿ ಪರಿಚಯ ಮಾಡಿಕೊಂಡಿದ್ದ ಯುವರಾಜ್, ನನ್ನ ಪುತ್ರನಿಗೆ ಸಹಾಯಕ ಎಂಜಿನಿಯರ್ ಕೆಲಸ ಕೊಡಿಸುವುದಾಗಿ ಹೇಳಿ ₹ 70 ಲಕ್ಷ ಪಡೆದಿದ್ದ. ಆದರೆ, ಇದುವರೆಗೂ ಕೆಲಸ ಕೊಡಿಸಿಲ್ಲ. ಹಣವನ್ನು ವಾಪಸ್ ನೀಡಿಲ್ಲ’ ಎಂದರು.</p>.<p>‘ ಆತ್ಮೀಯರೊಬ್ಬರ ಮೂಲಕ ಆರೋಪಿ ಯುವರಾಜ್ ಪರಿಚಯ ಆಗಿತ್ತು. ಬಿಜೆಪಿ ಮುಖಂಡರ ಜೊತೆಗಿನ ಫೋಟೊಗಳನ್ನು ತೋರಿಸಿದ್ದ ಅವರು. ಸರ್ಕಾರದ ಯಾವುದೇ ಇಲಾಖೆಯಲ್ಲಾದರೂ ಕೆಲಸ ಕೊಡಿಸುತ್ತೇನೆಂದು ಹೇಳಿದ್ದ. ಅವರ ಮಾತು ನಂಬಿ ಹಣ ಕೊಟ್ಟಿದ್ದೆ’ ಎಂದೂ ದೂರಿನಲ್ಲಿ ತಿಳಿಸಿದ್ದಾರೆ.</p>.<p class="Subhead">ಕೆಎಂಎಫ್ನಲ್ಲಿ ಕೆಲಸಕ್ಕೆ ₹ 30 ಲಕ್ಷ: ‘ಕೆಎಂಎಫ್ನಲ್ಲಿ ಮಾರುಕಟ್ಟೆ ವ್ಯವಸ್ಥಾಪಕ ಕೆಲಸ ಕೊಡಿಸುವುದಾಗಿ ಹೇಳಿದ್ದ ಯುವರಾಜ್, ₹ 30 ಲಕ್ಷ ಪಡೆದು ವಂಚಿಸಿದ್ದಾರೆ’ ಎಂದು ಆರೋಪಿಸಿ ಗೋವಿಂದಯ್ಯ ಎಂಬುವರು ದೂರು ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಬಿಜೆಪಿ ಹಾಗೂ ಆರ್ಎಸ್ಎಸ್ ಮುಖಂಡರ ಹೆಸರು ಹೇಳಿಕೊಂಡು ಜನರಿಂದ ಕೋಟ್ಯಂತರ ರೂಪಾಯಿ ಪಡೆದು ವಂಚಿಸಿರುವ ಆರೋಪದಡಿ ಬಂಧಿಸಲಾಗಿರುವ ಯುವರಾಜ್ ಅಲಿಯಾಸ್ ಸೇವಾಲಾಲ್ ಸ್ವಾಮೀಜಿಗೆ ಸೇರಿದ್ದ ಸುಮಾರು ₹ 60 ಕೋಟಿ ಮೌಲ್ಯದ ಆಸ್ತಿಯನ್ನು ಸಿಸಿಬಿ ಪೊಲೀಸರು ಪತ್ತೆ ಮಾಡಿದ್ದಾರೆ. ಆಸ್ತಿಗಳ ಬಗ್ಗೆ ನ್ಯಾಯಾಲಯಕ್ಕೂ ಮಾಹಿತಿ ನೀಡಿದ್ದಾರೆ.</p>.<p>‘ಆರೋಪಿ ಯುವರಾಜ್ ಅವರನ್ನು ಬಂಧಿಸಿ, ಕಸ್ಟಡಿಗೆ ಪಡೆದು ವಿಚಾರಣೆ ನಡೆಸಲಾಗಿದೆ. ಅವರು ಹಾಗೂ ಪತ್ನಿ ಪ್ರೇಮಾ ಹೆಸರಿನಲ್ಲಿರುವ 18 ಆಸ್ತಿಗಳನ್ನು ಗುರುತಿಸಲಾಗಿದೆ’ ಎಂದು ಸಿಸಿಬಿ ಮೂಲಗಳು ಹೇಳಿವೆ.</p>.<p>‘ಬೆಂಗಳೂರಿನಲ್ಲಿರುವ ಮನೆ, ನಿವೇಶನ, ಮಂಡ್ಯದಲ್ಲಿರುವ ಜಮೀನು, ಐಷಾರಾಮಿ ಕಾರುಗಳು ಸೇರಿದಂತೆ ಸುಮಾರು ₹ 60 ಕೋಟಿ ಮೌಲ್ಯದ ಸ್ಥಿರಾಸ್ತಿ ಹಾಗೂ ಚರಾಸ್ತಿ ಬಗ್ಗೆ ಮಾಹಿತಿ ಸಂಗ್ರಹಿಸಲಾಗಿದೆ. ಅವುಗಳ ಪಟ್ಟಿ ಸಿದ್ಧಪಡಿಸಿ ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ. ನ್ಯಾಯಾಲಯದ ನಿರ್ದೇಶನದಂತೆ ಮುಂದಿನ ಕ್ರಮ ಕೈಗೊಳ್ಳಲಾಗುವುದು’ ಎಂದೂ ತಿಳಿಸಿವೆ.</p>.<p class="Subhead">ಮತ್ತೆರಡು ಎಫ್ಐಆರ್; ‘ರಾಜ್ಯ ಸರ್ಕಾರದ ಇಲಾಖೆಯಲ್ಲಿ ಸಹಾಯಕ ಎಂಜಿನಿಯರ್ ಹಾಗೂ ಕೆಎಂಎಫ್ನಲ್ಲಿ ಮಾರುಕಟ್ಟೆ ವ್ಯವಸ್ಥಾಪಕ ಕೆಲಸ ಕೊಡಿಸುವುದಾಗಿ ಹೇಳಿ ₹ 1 ಕೋಟಿ ಪಡೆದು ವಂಚಿಸಿರುವ ಬಗ್ಗೆ ಜ್ಞಾನಭಾರತಿ ಠಾಣೆಯಲ್ಲಿ ಎರಡು ಪ್ರತ್ಯೇಕ ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.</p>.<p>‘ಆರೋಪಿ ಯುವರಾಜ್, ಸದ್ಯ ಸಿಸಿಬಿ ಕಸ್ಟಡಿಯಲ್ಲಿ ಇದ್ದಾರೆ. ಅವರ ವಿರುದ್ಧ ದಾಖಲಾಗಿರುವ ಪ್ರಕರಣದ ಬಗ್ಗೆ ಕಮಿಷನರ್ ಅವರಿಗೆ ಮಾಹಿತಿ ನೀಡಲಾಗುವುದು. ಅವರ ನಿರ್ದೇಶನದಂತೆ ಮುಂದುವರಿಯಲಾಗುವುದು’ ಎಂದೂ ತಿಳಿಸಿವೆ.</p>.<p class="Subhead">ದೂರುದಾರ ನರಸಿಂಹಸ್ವಾಮಿ ಎಂಬುವರು, ‘ಬಿಜೆಪಿ ಮುಖಂಡರು ಆತ್ಮೀಯರೆಂದು ಹೇಳಿ ಪರಿಚಯ ಮಾಡಿಕೊಂಡಿದ್ದ ಯುವರಾಜ್, ನನ್ನ ಪುತ್ರನಿಗೆ ಸಹಾಯಕ ಎಂಜಿನಿಯರ್ ಕೆಲಸ ಕೊಡಿಸುವುದಾಗಿ ಹೇಳಿ ₹ 70 ಲಕ್ಷ ಪಡೆದಿದ್ದ. ಆದರೆ, ಇದುವರೆಗೂ ಕೆಲಸ ಕೊಡಿಸಿಲ್ಲ. ಹಣವನ್ನು ವಾಪಸ್ ನೀಡಿಲ್ಲ’ ಎಂದರು.</p>.<p>‘ ಆತ್ಮೀಯರೊಬ್ಬರ ಮೂಲಕ ಆರೋಪಿ ಯುವರಾಜ್ ಪರಿಚಯ ಆಗಿತ್ತು. ಬಿಜೆಪಿ ಮುಖಂಡರ ಜೊತೆಗಿನ ಫೋಟೊಗಳನ್ನು ತೋರಿಸಿದ್ದ ಅವರು. ಸರ್ಕಾರದ ಯಾವುದೇ ಇಲಾಖೆಯಲ್ಲಾದರೂ ಕೆಲಸ ಕೊಡಿಸುತ್ತೇನೆಂದು ಹೇಳಿದ್ದ. ಅವರ ಮಾತು ನಂಬಿ ಹಣ ಕೊಟ್ಟಿದ್ದೆ’ ಎಂದೂ ದೂರಿನಲ್ಲಿ ತಿಳಿಸಿದ್ದಾರೆ.</p>.<p class="Subhead">ಕೆಎಂಎಫ್ನಲ್ಲಿ ಕೆಲಸಕ್ಕೆ ₹ 30 ಲಕ್ಷ: ‘ಕೆಎಂಎಫ್ನಲ್ಲಿ ಮಾರುಕಟ್ಟೆ ವ್ಯವಸ್ಥಾಪಕ ಕೆಲಸ ಕೊಡಿಸುವುದಾಗಿ ಹೇಳಿದ್ದ ಯುವರಾಜ್, ₹ 30 ಲಕ್ಷ ಪಡೆದು ವಂಚಿಸಿದ್ದಾರೆ’ ಎಂದು ಆರೋಪಿಸಿ ಗೋವಿಂದಯ್ಯ ಎಂಬುವರು ದೂರು ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>