<p><strong>ಬೆಂಗಳೂರು: </strong>ಹಣ ಅಕ್ರಮ ವರ್ಗಾವಣೆ ವ್ಯವಹಾರದ ಮೂಲಕ ಸರ್ಕಾರಕ್ಕೆ ವಂಚಿಸುತ್ತಿರುವರನ್ನು ಪತ್ತೆ ಮಾಡಲು ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ಹಾಗೂ ರಾಜ್ಯ ಪೊಲೀಸರು ಜಂಟಿಯಾಗಿ ಕಾರ್ಯಾಚರಣೆ ನಡೆಸಲಿದ್ದಾರೆ.</p>.<p>ಈ ಕುರಿತು ಸಿಐಡಿ ಹಾಗೂ ಜಾರಿ ನಿರ್ದೇಶನಾಲಯದ ಸಹಯೋಗದಲ್ಲಿ ಶುಕ್ರವಾರ ಒಂದು ದಿನದ ಕಾರ್ಯಾಗಾರ ಆಯೋಜಿಸಲಾಗಿತ್ತು. ಜಂಟಿ ಕಾರ್ಯಾಚರಣೆ ನಡೆಸಲು ಬೇಕಾದ ಸಿದ್ಧತೆ ಹಾಗೂ ಪರಸ್ಪರ ನೆರವು ಬಗ್ಗೆ ಕಾರ್ಯಾಗಾರದಲ್ಲಿ ಚರ್ಚಿಸಲಾಯಿತು.</p>.<p>ರಾಜ್ಯ ಪೊಲೀಸ್ ಮಹಾನಿರ್ದೇಶಕಿ ನೀಲಮಣಿ ರಾಜು, ‘ಅಕ್ರಮವಾಗಿ ಹಣ ಪಡೆದುಕೊಳ್ಳುತ್ತಿರುವ ಹಲವು ವಂಚಕರು, ಬಂಧನದ ಭೀತಿಯಿಂದ ವಿದೇಶದಲ್ಲಿ ತಲೆಮರೆಸಿಕೊಳ್ಳುತ್ತಿದ್ದಾರೆ. ಇಂಥವರನ್ನು ಪತ್ತೆ ಮಾಡುವ ಸಲುವಾಗಿ ತನಿಖೆ ಕೈಗೊಂಡಾಗ ರಾಜ್ಯ ಪೊಲೀಸರು, ಇ.ಡಿ ಅಧಿಕಾರಿಗಳ ಸಹಾಯ ಪಡೆದುಕೊಳ್ಳಬೇಕು’ ಎಂದರು.</p>.<p>ಸಿಐಡಿ ಡಿಜಿಪಿ ಪ್ರವೀಣ್ ಸೂದ್, ‘ಅಕ್ರಮ ಹಣ ವರ್ಗಾವಣೆ ಹಾಗೂ ವ್ಯವಹಾರ ನಡೆಸಿದವರ ವಿರುದ್ಧ ಕ್ರಮ ಕೈಗೊಳ್ಳಲು ಕಾನೂನಿನಲ್ಲಿ ಸಾಕಷ್ಟು ಅವಕಾಶವಿದೆ. ಅಂತಹವರ ಆಸ್ತಿಯನ್ನೂ ಮುಟ್ಟುಗೋಲು ಹಾಕಿಕೊಳ್ಳಬಹುದು. ಜಂಟಿ ಕಾರ್ಯಾಚರಣೆ ನಡೆಸಿದರೆ ತನಿಖೆಯು ಮತ್ತಷ್ಟು ಪರಿಣಾಮಕಾರಿಯಾಗಿರಲಿದೆ’ ಎಂದರು.</p>.<p>ಕಾರ್ಯಾಗಾರದಲ್ಲಿ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು ಹಾಗೂ ಇನ್ಸ್ಪೆಕ್ಟರ್ಗಳು ಪಾಲ್ಗೊಂಡಿ<br />ದ್ದರು. ಹಣದ ಮೂಲ ಪತ್ತೆ, ವಿದೇಶಗಳಿಗೆ ಹಣ ವರ್ಗಾವಣೆ ಹಾಗೂ ಹವಾಲಾ ಜಾಲ ಭೇದಿಸುವ ತನಿಖಾ ವಿಧಾನಗಳ ಬಗ್ಗೆ ತಜ್ಞರು ತಿಳಿವಳಿಕೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಹಣ ಅಕ್ರಮ ವರ್ಗಾವಣೆ ವ್ಯವಹಾರದ ಮೂಲಕ ಸರ್ಕಾರಕ್ಕೆ ವಂಚಿಸುತ್ತಿರುವರನ್ನು ಪತ್ತೆ ಮಾಡಲು ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ಹಾಗೂ ರಾಜ್ಯ ಪೊಲೀಸರು ಜಂಟಿಯಾಗಿ ಕಾರ್ಯಾಚರಣೆ ನಡೆಸಲಿದ್ದಾರೆ.</p>.<p>ಈ ಕುರಿತು ಸಿಐಡಿ ಹಾಗೂ ಜಾರಿ ನಿರ್ದೇಶನಾಲಯದ ಸಹಯೋಗದಲ್ಲಿ ಶುಕ್ರವಾರ ಒಂದು ದಿನದ ಕಾರ್ಯಾಗಾರ ಆಯೋಜಿಸಲಾಗಿತ್ತು. ಜಂಟಿ ಕಾರ್ಯಾಚರಣೆ ನಡೆಸಲು ಬೇಕಾದ ಸಿದ್ಧತೆ ಹಾಗೂ ಪರಸ್ಪರ ನೆರವು ಬಗ್ಗೆ ಕಾರ್ಯಾಗಾರದಲ್ಲಿ ಚರ್ಚಿಸಲಾಯಿತು.</p>.<p>ರಾಜ್ಯ ಪೊಲೀಸ್ ಮಹಾನಿರ್ದೇಶಕಿ ನೀಲಮಣಿ ರಾಜು, ‘ಅಕ್ರಮವಾಗಿ ಹಣ ಪಡೆದುಕೊಳ್ಳುತ್ತಿರುವ ಹಲವು ವಂಚಕರು, ಬಂಧನದ ಭೀತಿಯಿಂದ ವಿದೇಶದಲ್ಲಿ ತಲೆಮರೆಸಿಕೊಳ್ಳುತ್ತಿದ್ದಾರೆ. ಇಂಥವರನ್ನು ಪತ್ತೆ ಮಾಡುವ ಸಲುವಾಗಿ ತನಿಖೆ ಕೈಗೊಂಡಾಗ ರಾಜ್ಯ ಪೊಲೀಸರು, ಇ.ಡಿ ಅಧಿಕಾರಿಗಳ ಸಹಾಯ ಪಡೆದುಕೊಳ್ಳಬೇಕು’ ಎಂದರು.</p>.<p>ಸಿಐಡಿ ಡಿಜಿಪಿ ಪ್ರವೀಣ್ ಸೂದ್, ‘ಅಕ್ರಮ ಹಣ ವರ್ಗಾವಣೆ ಹಾಗೂ ವ್ಯವಹಾರ ನಡೆಸಿದವರ ವಿರುದ್ಧ ಕ್ರಮ ಕೈಗೊಳ್ಳಲು ಕಾನೂನಿನಲ್ಲಿ ಸಾಕಷ್ಟು ಅವಕಾಶವಿದೆ. ಅಂತಹವರ ಆಸ್ತಿಯನ್ನೂ ಮುಟ್ಟುಗೋಲು ಹಾಕಿಕೊಳ್ಳಬಹುದು. ಜಂಟಿ ಕಾರ್ಯಾಚರಣೆ ನಡೆಸಿದರೆ ತನಿಖೆಯು ಮತ್ತಷ್ಟು ಪರಿಣಾಮಕಾರಿಯಾಗಿರಲಿದೆ’ ಎಂದರು.</p>.<p>ಕಾರ್ಯಾಗಾರದಲ್ಲಿ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು ಹಾಗೂ ಇನ್ಸ್ಪೆಕ್ಟರ್ಗಳು ಪಾಲ್ಗೊಂಡಿ<br />ದ್ದರು. ಹಣದ ಮೂಲ ಪತ್ತೆ, ವಿದೇಶಗಳಿಗೆ ಹಣ ವರ್ಗಾವಣೆ ಹಾಗೂ ಹವಾಲಾ ಜಾಲ ಭೇದಿಸುವ ತನಿಖಾ ವಿಧಾನಗಳ ಬಗ್ಗೆ ತಜ್ಞರು ತಿಳಿವಳಿಕೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>