‘ಅನಧಿಕೃತವಾಗಿ ಅಳವಡಿಸಿರುವ ಎಲ್ಲಾ ಟಿ.ವಿ. ಕೇಬಲ್, ಒಎಫ್ಸಿ ಹಾಗೂ ಇತರೆ ಕೇಬಲ್ಗಳನ್ನು ಈ ತಿಳಿವಳಿಕೆ ಪತ್ರ ಪ್ರಕಟಣೆಯಾದ ದಿನದಿಂದ ಒಂದು ತಿಂಗಳ ಒಳಗೆ ತೆರವುಗೊಳಿಸದೇ ಹೋದರೆ, ಸಂಬಂಧಪಟ್ಟ ಕೇಬಲ್ ಆಪರೇಟರ್ಗಳು, ಇಂಟರ್ನೆಟ್ ಸೇವೆ ಒದಗಿಸುವ ಸಂಸ್ಥೆಗಳು ಹಾಗೂ ಸಂಬಂಧಪಟ್ಟ ಇತರ ಸಂಸ್ಥೆಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ’ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ಎಚ್ಚರಿಕೆ ನೀಡಿದ್ದಾರೆ.