<p><strong>ಬೆಂಗಳೂರು: </strong>ನಾಗ್ಪುರದ ಮಠವೊಂದರಲ್ಲಿ ದೀಕ್ಷೆ ಪಡೆದುಕೊಂಡು ಅಕ್ರಮವಾಗಿ ವಾಸವಿದ್ದ ಬಾಂಗ್ಲಾದೇಶದ ಪ್ರಜೆಗಳಿಬ್ಬರು ನಗರದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ವಲಸೆ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದಾರೆ.</p>.<p>‘ತಿಯೋಲ್ ಬರೌ ಅಲಿಯಾಸ್ ದಾಸ್ ಅರ್ನಬ್ (21) ಹಾಗೂ ಅಖಿಲ್ ಬರೌ ಅಲಿಯಾಸ್ ತನ್ಮೊಯ್ ರಾಯ್ (28) ಬಂಧಿತರು. ದೇಶದಲ್ಲಿ ಅಕ್ರಮವಾಗಿ ವಾಸವಿದ್ದ ಇವರಿಬ್ಬರೂ ನಾಗ್ಪುರದ ಮಠವೊಂದರಲ್ಲಿ ದೀಕ್ಷೆ ಪಡೆದಿದ್ದರು. ಬಳಿಕ ದೇಶದಾದ್ಯಂತ ಸುತ್ತಾಡುತ್ತಿದ್ದರು. ಈ ಬಗ್ಗೆ ಅವರಿಬ್ಬರು ಹೇಳಿಕೆ ನೀಡಿದ್ದಾರೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.</p>.<p>‘ಮಲೇಷ್ಯಾಗೆ ಹೋಗಲೆಂದು ಆರೋಪಿಗಳು ಇದೇ 6ರಂದು ವಿಮಾನ ನಿಲ್ದಾಣಕ್ಕೆ ಬಂದಿದ್ದರು. ಅದೇ ವೇಳೆ ಅವರ ಪಾಸ್ಪೋರ್ಟ್ ಹಾಗೂ ಇತರೆ ದಾಖಲೆಗಳನ್ನು ಸಿಬ್ಬಂದಿ ಪರಿಶೀಲನೆಗೆ ಒಳಪಡಿಸಿದ್ದರು. ಅವರಿಬ್ಬರ ರಾಷ್ಟ್ರೀಯತೆ ಬಗ್ಗೆ ಅನುಮಾನ ಬಂದು ಹೆಚ್ಚಿನ ತಪಾಸಣೆ ನಡೆಸಿದಾಗ ಸಿಕ್ಕಿಬಿದ್ದರು’ ಎಂದು ಮೂಲಗಳು ತಿಳಿಸಿವೆ.</p>.<p>‘ಬಾಂಗ್ಲಾದೇಶದ ಅದುನಗರ್ ನಿವಾಸಿ ಆಗಿದ್ದ ತಿಯೋಲ್, ಪ್ರವಾಸ ವೀಸಾದಡಿ ದೇಶಕ್ಕೆ ಬಂದಿದ್ದ. ಮಾಸ್ದಿಯಾದ ಅಖಿಲ್, ದೇಶದೊಳಗೆ ಅಕ್ರಮವಾಗಿ ನುಸುಳಿದ್ದ. ಇಬ್ಬರೂ ಏಜೆಂಟರೊಬ್ಬರ ಮೂಲಕ ಹಣ ನೀಡಿ ಸ್ಥಳೀಯ ಪಾಸ್ಪೋರ್ಟ್ ಪಡೆದುಕೊಂಡಿದ್ದರು’</p>.<p>‘ದೇಶದೆಲ್ಲೆಡೆ ಸುತ್ತಾಡುತ್ತಿದ್ದ ಅವರಿಬ್ಬರು ನಾಗ್ಪುರದ ಮಠವೊಂದಕ್ಕೆ ಹೋಗಿದ್ದರು. ಅಲ್ಲಿಯೇ ದೀಕ್ಷೆ ಪಡೆದುಕೊಂಡಿದ್ದರು. ಬಳಿಕ, ಮಠದ ಹೆಸರು ಹೇಳಿಕೊಂಡು ದೇಶದೆಲ್ಲೆಡೆ ಓಡಾಡುತ್ತಿದ್ದರು’ ಎಂದು ಮೂಲಗಳು ಹೇಳಿವೆ.</p>.<p class="Subhead">ಮಠದ ಸಂಪರ್ಕಕ್ಕೆ ಪ್ರಯತ್ನ: ‘ಪ್ರಕರಣ ಸಂಬಂಧ ಆರೋಪಿಗಳ ಹೇಳಿಕೆ ಪಡೆಯಲಾಗಿದ್ದು, ನಾಗ್ಪುರದ ಮಠದಲ್ಲಿ ದೀಕ್ಷೆ ಪಡೆದಿರುವುದಾಗಿ ಅವರೇ ಹೇಳಿಕೊಳ್ಳುತ್ತಿದ್ದಾರೆ. ಅದರನ್ವಯ ಮಠದವರನ್ನು ಸಂಪರ್ಕಿಸಲು ಪ್ರಯತ್ನಿಸಲಾಗುತ್ತಿದೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.</p>.<p>‘ಆರೋಪಿಗಳು ಏತಕ್ಕಾಗಿ ದೇಶಕ್ಕೆ ಬಂದಿದ್ದಾರೆ, ಅವರ ಉದ್ದೇಶವೇನು ಎಂಬುದು ನಿಖರವಾಗಿ ಗೊತ್ತಾಗಿಲ್ಲ. ತನಿಖೆಯಿಂದಲೇ ಎಲ್ಲವೂ ಗೊತ್ತಾಗಬೇಕಿದೆ’ ಎಂದೂ ಮೂಲಗಳು ಹೇಳಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ನಾಗ್ಪುರದ ಮಠವೊಂದರಲ್ಲಿ ದೀಕ್ಷೆ ಪಡೆದುಕೊಂಡು ಅಕ್ರಮವಾಗಿ ವಾಸವಿದ್ದ ಬಾಂಗ್ಲಾದೇಶದ ಪ್ರಜೆಗಳಿಬ್ಬರು ನಗರದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ವಲಸೆ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದಾರೆ.</p>.<p>‘ತಿಯೋಲ್ ಬರೌ ಅಲಿಯಾಸ್ ದಾಸ್ ಅರ್ನಬ್ (21) ಹಾಗೂ ಅಖಿಲ್ ಬರೌ ಅಲಿಯಾಸ್ ತನ್ಮೊಯ್ ರಾಯ್ (28) ಬಂಧಿತರು. ದೇಶದಲ್ಲಿ ಅಕ್ರಮವಾಗಿ ವಾಸವಿದ್ದ ಇವರಿಬ್ಬರೂ ನಾಗ್ಪುರದ ಮಠವೊಂದರಲ್ಲಿ ದೀಕ್ಷೆ ಪಡೆದಿದ್ದರು. ಬಳಿಕ ದೇಶದಾದ್ಯಂತ ಸುತ್ತಾಡುತ್ತಿದ್ದರು. ಈ ಬಗ್ಗೆ ಅವರಿಬ್ಬರು ಹೇಳಿಕೆ ನೀಡಿದ್ದಾರೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.</p>.<p>‘ಮಲೇಷ್ಯಾಗೆ ಹೋಗಲೆಂದು ಆರೋಪಿಗಳು ಇದೇ 6ರಂದು ವಿಮಾನ ನಿಲ್ದಾಣಕ್ಕೆ ಬಂದಿದ್ದರು. ಅದೇ ವೇಳೆ ಅವರ ಪಾಸ್ಪೋರ್ಟ್ ಹಾಗೂ ಇತರೆ ದಾಖಲೆಗಳನ್ನು ಸಿಬ್ಬಂದಿ ಪರಿಶೀಲನೆಗೆ ಒಳಪಡಿಸಿದ್ದರು. ಅವರಿಬ್ಬರ ರಾಷ್ಟ್ರೀಯತೆ ಬಗ್ಗೆ ಅನುಮಾನ ಬಂದು ಹೆಚ್ಚಿನ ತಪಾಸಣೆ ನಡೆಸಿದಾಗ ಸಿಕ್ಕಿಬಿದ್ದರು’ ಎಂದು ಮೂಲಗಳು ತಿಳಿಸಿವೆ.</p>.<p>‘ಬಾಂಗ್ಲಾದೇಶದ ಅದುನಗರ್ ನಿವಾಸಿ ಆಗಿದ್ದ ತಿಯೋಲ್, ಪ್ರವಾಸ ವೀಸಾದಡಿ ದೇಶಕ್ಕೆ ಬಂದಿದ್ದ. ಮಾಸ್ದಿಯಾದ ಅಖಿಲ್, ದೇಶದೊಳಗೆ ಅಕ್ರಮವಾಗಿ ನುಸುಳಿದ್ದ. ಇಬ್ಬರೂ ಏಜೆಂಟರೊಬ್ಬರ ಮೂಲಕ ಹಣ ನೀಡಿ ಸ್ಥಳೀಯ ಪಾಸ್ಪೋರ್ಟ್ ಪಡೆದುಕೊಂಡಿದ್ದರು’</p>.<p>‘ದೇಶದೆಲ್ಲೆಡೆ ಸುತ್ತಾಡುತ್ತಿದ್ದ ಅವರಿಬ್ಬರು ನಾಗ್ಪುರದ ಮಠವೊಂದಕ್ಕೆ ಹೋಗಿದ್ದರು. ಅಲ್ಲಿಯೇ ದೀಕ್ಷೆ ಪಡೆದುಕೊಂಡಿದ್ದರು. ಬಳಿಕ, ಮಠದ ಹೆಸರು ಹೇಳಿಕೊಂಡು ದೇಶದೆಲ್ಲೆಡೆ ಓಡಾಡುತ್ತಿದ್ದರು’ ಎಂದು ಮೂಲಗಳು ಹೇಳಿವೆ.</p>.<p class="Subhead">ಮಠದ ಸಂಪರ್ಕಕ್ಕೆ ಪ್ರಯತ್ನ: ‘ಪ್ರಕರಣ ಸಂಬಂಧ ಆರೋಪಿಗಳ ಹೇಳಿಕೆ ಪಡೆಯಲಾಗಿದ್ದು, ನಾಗ್ಪುರದ ಮಠದಲ್ಲಿ ದೀಕ್ಷೆ ಪಡೆದಿರುವುದಾಗಿ ಅವರೇ ಹೇಳಿಕೊಳ್ಳುತ್ತಿದ್ದಾರೆ. ಅದರನ್ವಯ ಮಠದವರನ್ನು ಸಂಪರ್ಕಿಸಲು ಪ್ರಯತ್ನಿಸಲಾಗುತ್ತಿದೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.</p>.<p>‘ಆರೋಪಿಗಳು ಏತಕ್ಕಾಗಿ ದೇಶಕ್ಕೆ ಬಂದಿದ್ದಾರೆ, ಅವರ ಉದ್ದೇಶವೇನು ಎಂಬುದು ನಿಖರವಾಗಿ ಗೊತ್ತಾಗಿಲ್ಲ. ತನಿಖೆಯಿಂದಲೇ ಎಲ್ಲವೂ ಗೊತ್ತಾಗಬೇಕಿದೆ’ ಎಂದೂ ಮೂಲಗಳು ಹೇಳಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>