<p><strong>ಬೆಂಗಳೂರು:</strong> ರಾಜಕಾಲುವೆಗಳ ದುರಸ್ತಿಗಾಗಿ 2019ರ ಏಪ್ರಿಲ್ನಿಂದ 2021ರ ಮಾರ್ಚ್ವರೆಗಿನ ಅವಧಿಯಲ್ಲಿ ವೆಚ್ಚ ಮಾಡಿರುವ ಒಟ್ಟು ₹490 ಕೋಟಿ ಮೊತ್ತದ ಕುರಿತು ಲೆಕ್ಕಪರಿಶೋಧಕರು ಗಂಭೀರ ಆಕ್ಷೇಪಗಳನ್ನು ವ್ಯಕ್ತಪಡಿಸಿದ್ದಾರೆ.</p>.<p>ಕರ್ನಾಟಕ ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯು ಪ್ರತಿ ವರ್ಷ ಬಿಬಿಎಂಪಿಯ ವಿವಿಧ ವಿಭಾಗಗಳ ಆಡಿಟ್ ಕೈಗೊಳ್ಳುತ್ತದೆ</p>.<p>ಹಲವು ಕಾಮಗಾರಿಗಳನ್ನು ಕೈಗೊಂಡಿರುವ ಬಗ್ಗೆ ಸಾಕ್ಷ್ಯಾಧಾರಗಳನ್ನು ಒದಗಿಸಿಲ್ಲ ಮತ್ತು ಡಬಲ್ ಬಿಲ್ಲಿಂಗ್ಗೆ ಅವಕಾಶ ಕಲ್ಪಿಸಿರುವ ಕುರಿತ ಲೋಪಗಳನ್ನು ವರದಿಯಲ್ಲಿ ಉಲ್ಲೇಖಿಸಲಾಗಿದೆ.</p>.<p>ಆರ್ಟಿಐ ಅಡಿಯಲ್ಲಿ ಪಡೆದಿರುವ ಮಾಹಿತಿಯಲ್ಲಿ ಈ ವಿಷಯಗಳು ಗೊತ್ತಾಗಿವೆ.</p>.<p>ಈ ಅವಧಿಯಲ್ಲಿ ಕೈಗೊಂಡಿರುವ 91 ಕಾಮಗಾರಿಗಳಲ್ಲಿ ವ್ಯತ್ಯಾಸಗಳನ್ನು ಲೆಕ್ಕಪರಿಶೋಧಕರು ಪತ್ತೆ ಮಾಡಿದ್ದು, ₹287 ಕೋಟಿ ಮೊತ್ತ ವೆಚ್ಚ ಕುರಿತು ಕುರಿತು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಹೆಚ್ಚುವರಿ ಪಾವತಿಸಿರುವ ₹14.19 ಕೋಟಿ ವಸೂಲಿ ಮಾಡುವಂತೆ ಬಿಬಿಎಂಪಿಗೆ ಸೂಚಿಸಲಾಗಿದೆ.</p>.<p>2018–19ರ ಅವಧಿಯ ಲೆಕ್ಕಪರಿಶೋಧನಾ ವರದಿಯಲ್ಲೂ ₹202 ಕೋಟಿ ಮೊತ್ತದ 41 ಕಾಮಗಾರಿಗಳಲ್ಲಿನ ವ್ಯತ್ಯಾಸಗಳನ್ನು ಪತ್ತೆ ಮಾಡಲಾಗಿತ್ತು. ಹೀಗಾಗಿ, ₹6.65 ಕೋಟಿ ವಸೂಲಿ ಮಾಡಲು ಸೂಚಿಸಲಾಗಿತ್ತು.</p>.<p>ಬೊಮ್ಮನಹಳ್ಳಿ, ಕೆ.ಆರ್.ಪುರ, ಮಹದೇವಪುರ, ಆರ್.ಆರ್. ನಗರ, ಯಶವಂತಪು, ಸರ್ವಜ್ಞನಗರ, ಯಲಹಂಕ, ಜಯನಗರ ಮತ್ತು ಚಾಮರಾಜಪೇಟೆ ಕ್ಷೇತ್ರಗಳಲ್ಲೇ ಅತಿ ಹೆಚ್ಚು ಲೋಪಗಳು ಪತ್ತೆಯಾಗಿವೆ.</p>.<p>‘ಲೆಕ್ಕಪರಿಶೋಧನೆಯಲ್ಲಿನ ಪ್ರಸ್ತಾಪಿಸಿದ ಎಲ್ಲವೂ ಗಂಭೀರವಾದ ವ್ಯತ್ಯಾಸಗಳಿಂದ ಕೂಡಿಲ್ಲ. ಈ ಬಗ್ಗೆ ಸಾರ್ವಜನಿಕ ಲೆಕ್ಕಸಮಿತಿ ಪರಿಶೀಲನೆ ನಡೆಸಲಿದೆ’ ಎಂದು ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ರಾಜಕಾಲುವೆಗಳ ದುರಸ್ತಿಗಾಗಿ 2019ರ ಏಪ್ರಿಲ್ನಿಂದ 2021ರ ಮಾರ್ಚ್ವರೆಗಿನ ಅವಧಿಯಲ್ಲಿ ವೆಚ್ಚ ಮಾಡಿರುವ ಒಟ್ಟು ₹490 ಕೋಟಿ ಮೊತ್ತದ ಕುರಿತು ಲೆಕ್ಕಪರಿಶೋಧಕರು ಗಂಭೀರ ಆಕ್ಷೇಪಗಳನ್ನು ವ್ಯಕ್ತಪಡಿಸಿದ್ದಾರೆ.</p>.<p>ಕರ್ನಾಟಕ ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯು ಪ್ರತಿ ವರ್ಷ ಬಿಬಿಎಂಪಿಯ ವಿವಿಧ ವಿಭಾಗಗಳ ಆಡಿಟ್ ಕೈಗೊಳ್ಳುತ್ತದೆ</p>.<p>ಹಲವು ಕಾಮಗಾರಿಗಳನ್ನು ಕೈಗೊಂಡಿರುವ ಬಗ್ಗೆ ಸಾಕ್ಷ್ಯಾಧಾರಗಳನ್ನು ಒದಗಿಸಿಲ್ಲ ಮತ್ತು ಡಬಲ್ ಬಿಲ್ಲಿಂಗ್ಗೆ ಅವಕಾಶ ಕಲ್ಪಿಸಿರುವ ಕುರಿತ ಲೋಪಗಳನ್ನು ವರದಿಯಲ್ಲಿ ಉಲ್ಲೇಖಿಸಲಾಗಿದೆ.</p>.<p>ಆರ್ಟಿಐ ಅಡಿಯಲ್ಲಿ ಪಡೆದಿರುವ ಮಾಹಿತಿಯಲ್ಲಿ ಈ ವಿಷಯಗಳು ಗೊತ್ತಾಗಿವೆ.</p>.<p>ಈ ಅವಧಿಯಲ್ಲಿ ಕೈಗೊಂಡಿರುವ 91 ಕಾಮಗಾರಿಗಳಲ್ಲಿ ವ್ಯತ್ಯಾಸಗಳನ್ನು ಲೆಕ್ಕಪರಿಶೋಧಕರು ಪತ್ತೆ ಮಾಡಿದ್ದು, ₹287 ಕೋಟಿ ಮೊತ್ತ ವೆಚ್ಚ ಕುರಿತು ಕುರಿತು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಹೆಚ್ಚುವರಿ ಪಾವತಿಸಿರುವ ₹14.19 ಕೋಟಿ ವಸೂಲಿ ಮಾಡುವಂತೆ ಬಿಬಿಎಂಪಿಗೆ ಸೂಚಿಸಲಾಗಿದೆ.</p>.<p>2018–19ರ ಅವಧಿಯ ಲೆಕ್ಕಪರಿಶೋಧನಾ ವರದಿಯಲ್ಲೂ ₹202 ಕೋಟಿ ಮೊತ್ತದ 41 ಕಾಮಗಾರಿಗಳಲ್ಲಿನ ವ್ಯತ್ಯಾಸಗಳನ್ನು ಪತ್ತೆ ಮಾಡಲಾಗಿತ್ತು. ಹೀಗಾಗಿ, ₹6.65 ಕೋಟಿ ವಸೂಲಿ ಮಾಡಲು ಸೂಚಿಸಲಾಗಿತ್ತು.</p>.<p>ಬೊಮ್ಮನಹಳ್ಳಿ, ಕೆ.ಆರ್.ಪುರ, ಮಹದೇವಪುರ, ಆರ್.ಆರ್. ನಗರ, ಯಶವಂತಪು, ಸರ್ವಜ್ಞನಗರ, ಯಲಹಂಕ, ಜಯನಗರ ಮತ್ತು ಚಾಮರಾಜಪೇಟೆ ಕ್ಷೇತ್ರಗಳಲ್ಲೇ ಅತಿ ಹೆಚ್ಚು ಲೋಪಗಳು ಪತ್ತೆಯಾಗಿವೆ.</p>.<p>‘ಲೆಕ್ಕಪರಿಶೋಧನೆಯಲ್ಲಿನ ಪ್ರಸ್ತಾಪಿಸಿದ ಎಲ್ಲವೂ ಗಂಭೀರವಾದ ವ್ಯತ್ಯಾಸಗಳಿಂದ ಕೂಡಿಲ್ಲ. ಈ ಬಗ್ಗೆ ಸಾರ್ವಜನಿಕ ಲೆಕ್ಕಸಮಿತಿ ಪರಿಶೀಲನೆ ನಡೆಸಲಿದೆ’ ಎಂದು ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>