<p><strong>ಬೆಂಗಳೂರು: </strong>‘ನಿಲುಗಡೆ ನಿರ್ಬಂಧಿಸಿರುವ ಸ್ಥಳಗಳಲ್ಲಿ ನಿಲ್ಲಿಸಿರುವ ವಾಹನಗಳ ಟೋಯಿಂಗ್ ಮಾಡುವ ಪ್ರಕ್ರಿಯೆಯಲ್ಲಿ ಭ್ರಷ್ಟಾಚಾರ ನಡೆಯುತ್ತಿದ್ದು, ಹಿರಿಯ ಅಧಿಕಾರಿಗಳು ಇದರ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ಲಂಚಮುಕ್ತ ಕರ್ನಾಟಕ ನಿರ್ಮಾಣ ವೇದಿಕೆಯ ರಾಜ್ಯ ಘಟಕದ ವಿ.ಆರ್. ಮರಾಠೆ ಒತ್ತಾಯಿಸಿದರು.</p>.<p>‘ಟೋಯಿಂಗ್ ಮಾಡಲು ಬಳಸುವ ವಾಹನಗಳನ್ನು ಸಾರಿಗೆ ಇಲಾಖೆ ಅಧಿಕಾರಿಗಳ ಅನುಮತಿ ಪಡೆಯದೆ ಅತಿ ಹೆಚ್ಚು ಮಾರ್ಪಾಡು ಮಾಡಿ ಕಾನೂನುಬಾಹಿರವಾಗಿ ಬಳಸಲಾಗುತ್ತದೆ. ಸಂಚಾರ ಪೊಲೀಸ್ ಅಧಿಕಾರಿಗಳಾಗಲಿ, ಸಾರಿಗೆ ಇಲಾಖೆ ಅಧಿಕಾರಿಗಳಾಗಲಿ ಇದರ ಬಗ್ಗೆ ಚಕಾರ ಎತ್ತುತ್ತಿಲ್ಲ’ ಎಂದು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ದೂರಿದರು.</p>.<p>‘ಮೋಟಾರು ವಾಹನ ಕಾಯ್ದೆ 1988ರ ಕಲಂ 52 (1)ರ ಪ್ರಕಾರ ಯಾವುದೇ ರೀತಿಯ ವಾಹನಗಳನ್ನು ನೋಂದಣಿ ಪ್ರಮಾಣ ಪತ್ರದಲ್ಲಿನ ಮಾನದಂಡಗಳಿಗೆ ವ್ಯತಿರಿಕ್ತವಾಗಿ ಮಾರ್ಪಾಡು ಮಾಡುವಂತಿಲ್ಲ’ ಎಂದೂ ಹೇಳಿದರು.</p>.<p>‘ನಿಯಮದ ಪ್ರಕಾರ ಟೋಯಿಂಗ್ ವಾಹನಗಳಲ್ಲಿ ಒಂದು ಬಾರಿಗೆ ಗರಿಷ್ಠ 4 ವಾಹನಗಳನ್ನು ಟೋಯಿಂಗ್ ಮಾಡಲು ಅವಕಾಶವಿದೆ. ಆದರೆ, ಈ ವಾಹನಗಳನ್ನು ಮಾರ್ಪಾಡು ಮಾಡಿ ಒಂದು ಬಾರಿಗೆ 8, 9 ವಾಹನಗಳನ್ನು ತುಂಬಲಾಗುತ್ತಿದೆ. ಗಾಡಿಗೆ ಹಾನಿಯಾಗಿರುವುದನ್ನು ಮಾಲೀಕರು ಪ್ರಶ್ನಿಸಿದರೆ ಸಿಬ್ಬಂದಿ ಗೂಂಡಾಗಳ ರೀತಿ ವರ್ತಿಸುತ್ತಾರೆ. ದಂಡದ ಪ್ರಮಾಣ ಹೆಚ್ಚು ಮಾಡಲಾಗಿದೆ. ವಿನಾಕಾರಣ ವಾಹನಗಳನ್ನು ತೆಗೆದುಕೊಂಡು ಹೋಗುತ್ತಾರೆ. ಪರೋಕ್ಷವಾಗಿ ಭ್ರಷ್ಟಾಚಾರ ಎಸಗಲಾಗುತ್ತಿದೆ’ ಎಂದು ಅವರು ದೂರಿದರು.</p>.<p>ವೇದಿಕೆಯ ಉಪಾಧ್ಯಕ್ಷ ಎಸ್.ಮಂಜುನಾಥ್, ಕಾರ್ಯಕಾರಿ ಸಮಿತಿ ಸದಸ್ಯ ಸಿ.ಎನ್. ದೀಪಕ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>‘ನಿಲುಗಡೆ ನಿರ್ಬಂಧಿಸಿರುವ ಸ್ಥಳಗಳಲ್ಲಿ ನಿಲ್ಲಿಸಿರುವ ವಾಹನಗಳ ಟೋಯಿಂಗ್ ಮಾಡುವ ಪ್ರಕ್ರಿಯೆಯಲ್ಲಿ ಭ್ರಷ್ಟಾಚಾರ ನಡೆಯುತ್ತಿದ್ದು, ಹಿರಿಯ ಅಧಿಕಾರಿಗಳು ಇದರ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ಲಂಚಮುಕ್ತ ಕರ್ನಾಟಕ ನಿರ್ಮಾಣ ವೇದಿಕೆಯ ರಾಜ್ಯ ಘಟಕದ ವಿ.ಆರ್. ಮರಾಠೆ ಒತ್ತಾಯಿಸಿದರು.</p>.<p>‘ಟೋಯಿಂಗ್ ಮಾಡಲು ಬಳಸುವ ವಾಹನಗಳನ್ನು ಸಾರಿಗೆ ಇಲಾಖೆ ಅಧಿಕಾರಿಗಳ ಅನುಮತಿ ಪಡೆಯದೆ ಅತಿ ಹೆಚ್ಚು ಮಾರ್ಪಾಡು ಮಾಡಿ ಕಾನೂನುಬಾಹಿರವಾಗಿ ಬಳಸಲಾಗುತ್ತದೆ. ಸಂಚಾರ ಪೊಲೀಸ್ ಅಧಿಕಾರಿಗಳಾಗಲಿ, ಸಾರಿಗೆ ಇಲಾಖೆ ಅಧಿಕಾರಿಗಳಾಗಲಿ ಇದರ ಬಗ್ಗೆ ಚಕಾರ ಎತ್ತುತ್ತಿಲ್ಲ’ ಎಂದು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ದೂರಿದರು.</p>.<p>‘ಮೋಟಾರು ವಾಹನ ಕಾಯ್ದೆ 1988ರ ಕಲಂ 52 (1)ರ ಪ್ರಕಾರ ಯಾವುದೇ ರೀತಿಯ ವಾಹನಗಳನ್ನು ನೋಂದಣಿ ಪ್ರಮಾಣ ಪತ್ರದಲ್ಲಿನ ಮಾನದಂಡಗಳಿಗೆ ವ್ಯತಿರಿಕ್ತವಾಗಿ ಮಾರ್ಪಾಡು ಮಾಡುವಂತಿಲ್ಲ’ ಎಂದೂ ಹೇಳಿದರು.</p>.<p>‘ನಿಯಮದ ಪ್ರಕಾರ ಟೋಯಿಂಗ್ ವಾಹನಗಳಲ್ಲಿ ಒಂದು ಬಾರಿಗೆ ಗರಿಷ್ಠ 4 ವಾಹನಗಳನ್ನು ಟೋಯಿಂಗ್ ಮಾಡಲು ಅವಕಾಶವಿದೆ. ಆದರೆ, ಈ ವಾಹನಗಳನ್ನು ಮಾರ್ಪಾಡು ಮಾಡಿ ಒಂದು ಬಾರಿಗೆ 8, 9 ವಾಹನಗಳನ್ನು ತುಂಬಲಾಗುತ್ತಿದೆ. ಗಾಡಿಗೆ ಹಾನಿಯಾಗಿರುವುದನ್ನು ಮಾಲೀಕರು ಪ್ರಶ್ನಿಸಿದರೆ ಸಿಬ್ಬಂದಿ ಗೂಂಡಾಗಳ ರೀತಿ ವರ್ತಿಸುತ್ತಾರೆ. ದಂಡದ ಪ್ರಮಾಣ ಹೆಚ್ಚು ಮಾಡಲಾಗಿದೆ. ವಿನಾಕಾರಣ ವಾಹನಗಳನ್ನು ತೆಗೆದುಕೊಂಡು ಹೋಗುತ್ತಾರೆ. ಪರೋಕ್ಷವಾಗಿ ಭ್ರಷ್ಟಾಚಾರ ಎಸಗಲಾಗುತ್ತಿದೆ’ ಎಂದು ಅವರು ದೂರಿದರು.</p>.<p>ವೇದಿಕೆಯ ಉಪಾಧ್ಯಕ್ಷ ಎಸ್.ಮಂಜುನಾಥ್, ಕಾರ್ಯಕಾರಿ ಸಮಿತಿ ಸದಸ್ಯ ಸಿ.ಎನ್. ದೀಪಕ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>