‘ರಸ್ತೆ ವಿಸ್ತರಣೆ ಕಾಮಗಾರಿಯನ್ನು ಡಿಸೆಂಬರ್ನಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳು ತಡೆದು, ಕಾಮಗಾರಿಗೆ ಬಳಸುತ್ತಿದ್ದ ಯಂತ್ರಗಳು ಹಾಗೂ ವಾಹನಗಳನ್ನು ಜಪ್ತಿ ಮಾಡಿದ್ದರು. ಆದರೆ, ಸ್ಥಳೀಯ ಸಂಸದರು ಹಾಗೂ ಶಾಸಕರು ಅರಣ್ಯ ಇಲಾಖೆಯ ಮೇಲೆ ಒತ್ತಡ ಹೇರಿದ್ದರಿಂದ ಕಳೆದ ವಾರ ಕಾಮಗಾರಿ ಮತ್ತೆ ಆರಂಭವಾಗಿದೆ’ ಎಂದು ಅವರು ದೂರಿದ್ದಾರೆ.