ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನನಗೆ ಹೇಳದೇ ಬಂಧಿಸಿದ್ದಕ್ಕೆ ಬೇಸರವಾಗಿದೆ: ಸಚಿವ ಶ್ರೀರಾಮುಲು

Last Updated 2 ಜುಲೈ 2021, 9:21 IST
ಅಕ್ಷರ ಗಾತ್ರ

ಬೆಂಗಳೂರು: ‘ರಾಜಣ್ಣ ನನಗೆ ಗೊತ್ತಿರುವ ಹುಡುಗ. ನನಗೆ ಹೇಳದೇ ಆತನನ್ನು ಬಂಧಿಸಿದ್ದಕ್ಕೆ ಬೇಸರವಾಗಿದೆ. ಆದರೆ, ಅಸಮಾಧಾನ ಇಲ್ಲ’ ಎಂದು ಸಚಿವ ಬಿ.ಶ್ರೀರಾಮುಲು ಹೇಳಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಆತನ ಬಂಧನದ ವಿಚಾರವನ್ನು ಮಾಧ್ಯಮದಲ್ಲಿ ಗಮನಿಸಿದ್ದೇನೆ. ಯಾರೂ ಕೂಡ ಬೇರೆ ಯಾರದ್ದೇ ಹೆಸರು ದುರ್ಬಳಕೆ ಮಾಡಿಕೊಳ್ಳಬಾರದು. ಅದು ತಪ್ಪು’ ಎಂದು ಹೇಳಿದರು.

‘ತನಿಖೆ ನಡೆಯುವ ಸಮಯದಲ್ಲಿ ನಾನು ಮಾತನಾಡುವುದು ಸರಿಯಲ್ಲ. ತನಿಖೆ ನಡೆದು ಕಾನೂನು ಪ್ರಕಾರ ಶಿಕ್ಷೆ ಆಗುತ್ತದೆ. ವಿಜಯೇಂದ್ರ ಮತ್ತು ಮುಖ್ಯಮಂತ್ರಿಯವರ ಜತೆಗೆ ಮಾತನಾಡುತ್ತೇನೆ. ವಿಜಯೇಂದ್ರ ಅವರು ನನ್ನ ಬಳಿ ಹೇಳಿದ್ದರೆ, ಕೂರಿಸಿ ವಿಚಾರಿಸುತ್ತಿದ್ದೆ’ ಎಂದರು.

‘ರಾಜಣ್ಣ ನನ್ನ ಬಳಿ ಅಧಿಕೃತವಾಗಿ ಯಾವುದೇ ಕೆಲಸ ಮಾಡುತ್ತಿರಲಿಲ್ಲ. ನಾನು ತಪ್ಪಿತಸ್ಥರನ್ನು ಕಾಪಾಡುವ ವ್ಯಕ್ತಿಯಲ್ಲ. ಈ ಬೆಳವಣಿಗೆಯಿಂದ ನೋವಾಗಿದೆ’ ಎಂದು ರಾಮುಲು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT