ವಿಚಾರಣೆ ವೇಳೆ ರಾಜ್ಯ ಸರ್ಕಾರದ ಪರ ವಾದ ಮಂಡಿಸಿದ ಉದಯ ಹೊಳ್ಳ ಅವರು, ’ಇದೊಂದು ಅಂತರರಾಜ್ಯ ವ್ಯಾಪ್ತಿಯ ಪ್ರಕರಣ. ಸಿಬಿಐ ತನಿಖೆ ನಡೆಸಲು ಅಭ್ಯಂತರವೇನೂ ಇಲ್ಲ. ಆದರೆ, ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ವಿಭಾಗೀಯ ನ್ಯಾಯಪೀಠದಲ್ಲಿ ಅರ್ಜಿಗಳ ವಿಚಾರಣೆ ಬಾಕಿ ಇದೆ. ಹಾಗಾಗಿ ಇದನ್ನೂ ಅಲ್ಲಿಗೇ ವರ್ಗಾಯಿಸಲು ನಿರ್ದೇಶಿಸಬೇಕು’ ಎಂದು ಕೋರಿದರು.