‘ಡಾ. ನಾಗೇಂದ್ರ ಅವರು ಕರ್ತವ್ಯವೇ ಮೊದಲು ಎಂಬ ತತ್ವವನ್ನು ಪಾಲಿಸಿ, ಸತತ ದುಡಿಯುತ್ತಿದ್ದರು. ಅವರ ಆತ್ಮಹತ್ಯೆ ನಿಜಕ್ಕೂ ದಿಗ್ಭ್ರಮೆ ಮೂಡಿಸಿದೆ. ನಿರಂತರ ಒತ್ತಡ ಹಾಗೂ ಅತ್ಯಂತ ಸಂಕೀರ್ಣ ವ್ಯವಸ್ಥೆಯ ನಡುವೆ ಸೇವೆ ಸಲ್ಲಿಸುತ್ತಿರುವ ಅವರನ್ನು ಕಳೆದುಕೊಂಡಿರುವುದು ವಿಷಾದನೀಯ.ಈ ರೀತಿಯ ಅನಾಹುತಗಳು ಮತ್ತೆ ಮರುಕಳಿಸದಂತೆ ನೋಡಿಕೊಳ್ಳಬೇಕು. ಸರ್ಕಾರವು ವೈದ್ಯರನ್ನು ಬೆದರಿಸುವ, ಕಾನೂನಿನ ಗುಮ್ಮ ತೋರಿಸುವುದನ್ನು ಬಿಟ್ಟು, ಸೌಹಾರ್ದಯುತವಾಗಿ ನಡೆಸಿಕೊಳ್ಳಬೇಕು. ಈ ಘಟನೆಗೆ ಕಾರಣವಾದವರನ್ನು ಕೂಡಲೇ ಶಿಕ್ಷಿಸಬೇಕು’ ಎಂದು ಐಎಂಎ ಕರ್ನಾಟಕ ಶಾಖೆಯ ಅಧ್ಯಕ್ಷ ಡಾ. ಮಧುಸೂದನ ಕಾರಿಗನೂರು ಆಗ್ರಹಿಸಿದ್ದಾರೆ.